<p>ಚಿಕ್ಕಮಗಳೂರು: ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಕೆರೆಗಳನ್ನು ಸುಸ್ಥಿತಿಯಲ್ಲಿಡುವುದು ಗ್ರಾಮ ಪಂಚಾಯಿತಿಗಳ ಹೊಣೆ. ಹಾಗೆಯೇ ಕೆರೆಗಳಿಂದ ಪಂಚಾಯಿತಿ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಂಗೇಗೌಡ ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.<br /> <br /> ಎಲ್ಲ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳನ್ನು ಗುರುತಿಸಿ, ಅವುಗಳಲ್ಲಿ ಮೀನುಗಾರಿಕೆಗೆ ಗುತ್ತಿಗೆ ನೀಡಿದರೆ ಪಂಚಾಯಿತಿಗಳಿಗೆ ಆದಾಯ ದೊರಕುತ್ತದೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.<br /> <br /> ವಿವಿಧ ಇಲಾಖೆಗಳು ಎಲ್ಲ ಆಸ್ತಿ, ಬಾಡಿಗೆ ಕಟ್ಟಡಗಳು, ಭೂಮಿ, ಶಾಲೆ ಮೈದಾನ ಸೇರಿದಂತೆ ಎಲ್ಲ ಸ್ವತ್ತುಗಳ ದಾಖಲೆಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು. ದೀರ್ಘ ಕಾಲದಿಂದ ಕಡಿಮೆ ಬಾಡಿಗೆ ನೀಡುತ್ತಾ ವಾಣಿಜ್ಯ ಸಂಕೀರ್ಣ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡದಲ್ಲಿರುವವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಸಭೆಯಲ್ಲಿ ವಿವಿಧ ಇಲಾಖೆಗಳು ನೀಡಿದ ಮಾಹಿತಿಗೆ ಅಸಮಾಧಾನ ಸೂಚಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಸತಿ ಮತ್ತು ಉದ್ಯೋಗ ಖಾತರಿ ಯೋಜನೆಯಲ್ಲಿ ಗುರಿ ಸಾಧಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.<br /> <br /> ಪಂಚಾಯತ್ರಾಜ್ ಎಂಜಿನಿಯರಿಂಗ್ ಇಲಾಖೆ ಕಾರ್ಯನಿರ್ವಹಣೆಗೆ ಹಾಗೂ ವಿವಿಧ ಇಲಾಖೆಗಳಲ್ಲಿ ವಿಶೇಷ ಘಟಕ ಕಾರ್ಯಕ್ರಮಗಳ ಪ್ರಗತಿಯಲ್ಲಿ ಗುರಿ ಸಾಧಿಸದಿರುವುದಕ್ಕೂ ಅತೃಪ್ತಿ ವ್ಯಕ್ತಪಡಿಸಿದರು.<br /> <br /> ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಫಲಾನುಭವಿಗಳ ಆಯ್ಕೆಯಲ್ಲಿ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತರ ಫಲಾನುಭವಿಗಳು ದೊರಕದಿದ್ದರೆ ಆ ಕೋಟಾವನ್ನು ನೆರೆಯ ಗ್ರಾಮ ಪಂಚಾಯಿತಿಗಳಿಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ವಿವೇಚನೆಯಲ್ಲಿ ವರ್ಗಾಯಿಸಬಹುದು ಎಂದು ರಂಗೇಗೌಡ ತಿಳಿಸಿದರು. <br /> <br /> ಜಿಲ್ಲೆಗೆ 4400 ಟನ್ ಪೊಟ್ಯಾಷ್ ಸರಬರಾಜಾಗಿದೆ. ಗೊಬ್ಬರದ ಕೊರತೆ ಬಹುತೇಕ ಪರಿಹಾರವಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.<br /> <br /> ಪೌಷ್ಟಿಕ ಆಹಾರದ ಕೊರತೆಯಿಂದ ಜಿಲ್ಲೆಯಲ್ಲಿ 272 ಮಕ್ಕಳು ತೀವ್ರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಬೆಂಗಳೂರು ಮತ್ತು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.<br /> <br /> ಈ ಮಕ್ಕಳ ಆರೋಗ್ಯದ ಮೇಲೆ ಗಮನವಿಡುವಂತೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲೆಯಲ್ಲಿ ಮರಳು ಕೊರತೆಯಿಂದ ತೀವ್ರ ತೊಂದರೆ ಎದುರಾಗಿದೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವೇಗೌಡ ಸೂಚಿಸಿದರು.<br /> <br /> ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಪದ್ಮಾ ಚಂದ್ರಪ್ಪ, ಮುಖ್ಯ ಯೋಜನಾಧಿಕಾರಿ ಸುಬ್ಬರಾವ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಕೆರೆಗಳನ್ನು ಸುಸ್ಥಿತಿಯಲ್ಲಿಡುವುದು ಗ್ರಾಮ ಪಂಚಾಯಿತಿಗಳ ಹೊಣೆ. ಹಾಗೆಯೇ ಕೆರೆಗಳಿಂದ ಪಂಚಾಯಿತಿ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಂಗೇಗೌಡ ಸೂಚಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.<br /> <br /> ಎಲ್ಲ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳನ್ನು ಗುರುತಿಸಿ, ಅವುಗಳಲ್ಲಿ ಮೀನುಗಾರಿಕೆಗೆ ಗುತ್ತಿಗೆ ನೀಡಿದರೆ ಪಂಚಾಯಿತಿಗಳಿಗೆ ಆದಾಯ ದೊರಕುತ್ತದೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.<br /> <br /> ವಿವಿಧ ಇಲಾಖೆಗಳು ಎಲ್ಲ ಆಸ್ತಿ, ಬಾಡಿಗೆ ಕಟ್ಟಡಗಳು, ಭೂಮಿ, ಶಾಲೆ ಮೈದಾನ ಸೇರಿದಂತೆ ಎಲ್ಲ ಸ್ವತ್ತುಗಳ ದಾಖಲೆಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು. ದೀರ್ಘ ಕಾಲದಿಂದ ಕಡಿಮೆ ಬಾಡಿಗೆ ನೀಡುತ್ತಾ ವಾಣಿಜ್ಯ ಸಂಕೀರ್ಣ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡದಲ್ಲಿರುವವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.<br /> <br /> ಸಭೆಯಲ್ಲಿ ವಿವಿಧ ಇಲಾಖೆಗಳು ನೀಡಿದ ಮಾಹಿತಿಗೆ ಅಸಮಾಧಾನ ಸೂಚಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಸತಿ ಮತ್ತು ಉದ್ಯೋಗ ಖಾತರಿ ಯೋಜನೆಯಲ್ಲಿ ಗುರಿ ಸಾಧಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.<br /> <br /> ಪಂಚಾಯತ್ರಾಜ್ ಎಂಜಿನಿಯರಿಂಗ್ ಇಲಾಖೆ ಕಾರ್ಯನಿರ್ವಹಣೆಗೆ ಹಾಗೂ ವಿವಿಧ ಇಲಾಖೆಗಳಲ್ಲಿ ವಿಶೇಷ ಘಟಕ ಕಾರ್ಯಕ್ರಮಗಳ ಪ್ರಗತಿಯಲ್ಲಿ ಗುರಿ ಸಾಧಿಸದಿರುವುದಕ್ಕೂ ಅತೃಪ್ತಿ ವ್ಯಕ್ತಪಡಿಸಿದರು.<br /> <br /> ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಫಲಾನುಭವಿಗಳ ಆಯ್ಕೆಯಲ್ಲಿ ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತರ ಫಲಾನುಭವಿಗಳು ದೊರಕದಿದ್ದರೆ ಆ ಕೋಟಾವನ್ನು ನೆರೆಯ ಗ್ರಾಮ ಪಂಚಾಯಿತಿಗಳಿಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ವಿವೇಚನೆಯಲ್ಲಿ ವರ್ಗಾಯಿಸಬಹುದು ಎಂದು ರಂಗೇಗೌಡ ತಿಳಿಸಿದರು. <br /> <br /> ಜಿಲ್ಲೆಗೆ 4400 ಟನ್ ಪೊಟ್ಯಾಷ್ ಸರಬರಾಜಾಗಿದೆ. ಗೊಬ್ಬರದ ಕೊರತೆ ಬಹುತೇಕ ಪರಿಹಾರವಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.<br /> <br /> ಪೌಷ್ಟಿಕ ಆಹಾರದ ಕೊರತೆಯಿಂದ ಜಿಲ್ಲೆಯಲ್ಲಿ 272 ಮಕ್ಕಳು ತೀವ್ರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಬೆಂಗಳೂರು ಮತ್ತು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.<br /> <br /> ಈ ಮಕ್ಕಳ ಆರೋಗ್ಯದ ಮೇಲೆ ಗಮನವಿಡುವಂತೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿಲ್ಲೆಯಲ್ಲಿ ಮರಳು ಕೊರತೆಯಿಂದ ತೀವ್ರ ತೊಂದರೆ ಎದುರಾಗಿದೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವೇಗೌಡ ಸೂಚಿಸಿದರು.<br /> <br /> ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಪದ್ಮಾ ಚಂದ್ರಪ್ಪ, ಮುಖ್ಯ ಯೋಜನಾಧಿಕಾರಿ ಸುಬ್ಬರಾವ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>