<p><strong>ಬೆಂಗಳೂರು:</strong> ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಒತ್ತು ನೀಡಲಾಗುವುದು. ಮಾರ್ಚ್ ವೇಳೆಗೆ 50 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವುದಾಗಿ ಸಣ್ಣ ಕೈಗಾರಿಕೆ ಸಚಿವ ರಾಜೂಗೌಡ ಸೋಮವಾರ ಇಲ್ಲಿ ಹೇಳಿದರು.<br /> <br /> ರಾಜ್ಯದ ವಿವಿಧ ಭಾಗಗಳಲ್ಲಿ 5000ಕ್ಕೂ ಹೆಚ್ಚು ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವ ಉದ್ದೇಶ ಇದ್ದು, ಈ ನಿಟ್ಟಿನಲ್ಲಿ ಉದ್ಯಮಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಪೂರಕವಾಗಿ ಮೂಲಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.<br /> ಇದೇ 29ರಂದು ಚಿಕ್ಕಮಗಳೂರಿನಲ್ಲಿ ಸಣ್ಣ ಉದ್ದಿಮೆದಾರರ ಜತೆ ಚರ್ಚೆ ನಡೆಸುವ ಸಭೆ ಆಯೋಜಿಸಿದ್ದು, ಆ ಭಾಗದಲ್ಲಿ ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸಲು ಚಿಂತನೆ ನಡೆದಿದೆ ಎಂದರು.<br /> <br /> ಯಾವ ಭಾಗದಲ್ಲಿ ಯಾವ ರೀತಿಯ ಕೈಗಾರಿಕೆ ಸ್ಥಾಪಿಸಬೇಕು. ಅದಕ್ಕೆ ಬಂಡವಾಳ ಎಷ್ಟು ಕೊಡಬೇಕು. ಹಣಕಾಸಿನ ನೆರವು ನೀಡಲು ಬ್ಯಾಂಕುಗಳನ್ನು ಗುರುತಿಸುವ ಕೆಲಸವೂ ಸಾಗಿದೆ ಎಂದು ಹೇಳಿದರು.<br /> <br /> <strong>16ರಂದು ಸಭೆ:</strong> ಮುಂದಿನ ತಿಂಗಳ 16ರಂದು ಎಲ್ಲ ಶಾಸಕರು ಮತ್ತು ಸಂಸದರ ಸಭೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರೆದಿದ್ದು, ಅಲ್ಲಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುವುದು. <br /> <br /> ರಸ್ತೆ, ನೀರು ಮತ್ತಿತರ ಸೌಲಭ್ಯಗಳನ್ನು ಒದಗಿಸುವುದಷ್ಟೇ ಶಾಸಕರ ಕೆಲಸವಲ್ಲ. ಕೈಗಾರಿಕೆ ಸ್ಥಾಪಿಸುವುದು ಕೂಡ ಅವರ ಜವಾಬ್ದಾರಿಯಾಗಿದ್ದು, ಇರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಲಾಗುವುದು ಎಂದರು.<br /> <br /> ಸಣ್ಣ ಕೈಗಾರಿಕೆಗಳ ಸಲುವಾಗಿ ಇನ್ನೂ ರೂ 160 ಕೋಟಿಗಳ ಸಬ್ಸಿಡಿ ಬಾಕಿ ಇದೆ. ಹಂತಹಂತವಾಗಿ ಇದನ್ನು ಬಿಡುಗಡೆ ಮಾಡಲಾಗುವುದು. ತಾವು ಸಚಿವರಾದ ನಂತರ ್ಙ 50 ಕೋಟಿ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಒತ್ತು ನೀಡಲಾಗುವುದು. ಮಾರ್ಚ್ ವೇಳೆಗೆ 50 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕೊಡಿಸುವುದಾಗಿ ಸಣ್ಣ ಕೈಗಾರಿಕೆ ಸಚಿವ ರಾಜೂಗೌಡ ಸೋಮವಾರ ಇಲ್ಲಿ ಹೇಳಿದರು.<br /> <br /> ರಾಜ್ಯದ ವಿವಿಧ ಭಾಗಗಳಲ್ಲಿ 5000ಕ್ಕೂ ಹೆಚ್ಚು ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವ ಉದ್ದೇಶ ಇದ್ದು, ಈ ನಿಟ್ಟಿನಲ್ಲಿ ಉದ್ಯಮಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.<br /> <br /> ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು. ಇದಕ್ಕೆ ಪೂರಕವಾಗಿ ಮೂಲಸೌಲಭ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.<br /> ಇದೇ 29ರಂದು ಚಿಕ್ಕಮಗಳೂರಿನಲ್ಲಿ ಸಣ್ಣ ಉದ್ದಿಮೆದಾರರ ಜತೆ ಚರ್ಚೆ ನಡೆಸುವ ಸಭೆ ಆಯೋಜಿಸಿದ್ದು, ಆ ಭಾಗದಲ್ಲಿ ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸಲು ಚಿಂತನೆ ನಡೆದಿದೆ ಎಂದರು.<br /> <br /> ಯಾವ ಭಾಗದಲ್ಲಿ ಯಾವ ರೀತಿಯ ಕೈಗಾರಿಕೆ ಸ್ಥಾಪಿಸಬೇಕು. ಅದಕ್ಕೆ ಬಂಡವಾಳ ಎಷ್ಟು ಕೊಡಬೇಕು. ಹಣಕಾಸಿನ ನೆರವು ನೀಡಲು ಬ್ಯಾಂಕುಗಳನ್ನು ಗುರುತಿಸುವ ಕೆಲಸವೂ ಸಾಗಿದೆ ಎಂದು ಹೇಳಿದರು.<br /> <br /> <strong>16ರಂದು ಸಭೆ:</strong> ಮುಂದಿನ ತಿಂಗಳ 16ರಂದು ಎಲ್ಲ ಶಾಸಕರು ಮತ್ತು ಸಂಸದರ ಸಭೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರೆದಿದ್ದು, ಅಲ್ಲಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುವುದು. <br /> <br /> ರಸ್ತೆ, ನೀರು ಮತ್ತಿತರ ಸೌಲಭ್ಯಗಳನ್ನು ಒದಗಿಸುವುದಷ್ಟೇ ಶಾಸಕರ ಕೆಲಸವಲ್ಲ. ಕೈಗಾರಿಕೆ ಸ್ಥಾಪಿಸುವುದು ಕೂಡ ಅವರ ಜವಾಬ್ದಾರಿಯಾಗಿದ್ದು, ಇರುವ ಅವಕಾಶಗಳ ಬಗ್ಗೆ ಬೆಳಕು ಚೆಲ್ಲಲಾಗುವುದು ಎಂದರು.<br /> <br /> ಸಣ್ಣ ಕೈಗಾರಿಕೆಗಳ ಸಲುವಾಗಿ ಇನ್ನೂ ರೂ 160 ಕೋಟಿಗಳ ಸಬ್ಸಿಡಿ ಬಾಕಿ ಇದೆ. ಹಂತಹಂತವಾಗಿ ಇದನ್ನು ಬಿಡುಗಡೆ ಮಾಡಲಾಗುವುದು. ತಾವು ಸಚಿವರಾದ ನಂತರ ್ಙ 50 ಕೋಟಿ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>