<p><strong>ಚಿಕ್ಕಮಗಳೂರು: </strong>ಗ್ರಾಮೀಣ ಭಾಗದಲ್ಲಿ ಜನರಿಗೆ ನೈರ್ಮಲ್ಯ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ನೀಡಿ ಮಾದರಿ ಗ್ರಾಮ ನಿರ್ಮಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪ್ರಫುಲ್ಲಾ ಬಿ.ಮಂಜುನಾಥ್ ಸೂಚನೆ ನೀಡಿದರು.<br /> <br /> ತಾ.ಪಂ. ಸಭಾಂಗಣದಲ್ಲಿ ಗುರುವಾರ ಸಂಪೂರ್ಣ ಸ್ವಚ್ಛತಾ ಆಂದೋಲನಾ, ಸಂವಹನ ಮತ್ತು ಸಾಮರ್ಥ್ಯ ಅಭಿವೃದ್ಧಿ ಘಟಕ, ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಸ್ವಚ್ಛತಾ ಉತ್ಸವದಲ್ಲಿ ಮಾತನಾಡಿದರು.<br /> <br /> ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಹೋಗಿ ಸ್ಥಳ ಪರಿಶೀಲಿಸಿ, ಗ್ರಾಮಗಳಿಗೆ ಅಗತ್ಯವಿರುವ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡಬೇಕು. ಅಧಿಕಾರವಿದ್ದಾಗ ಉತ್ತಮ ಕೆಲಸ ಮಾಡಿದರೆ, ವರ್ಗಾವಣೆಯಾದ ಮೇಲೂ ನಿಮ್ಮ ಕೆಲಸಗಳನ್ನು ಜನರು ಸ್ಮರಿಸುತ್ತಾರೆ ಎಂದರು.<br /> <br /> ಗ್ರಾಮೀಣ ಜನರಿಗೆ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಿದಾಗ ಜನರು ಸ್ವಯಂಪ್ರೇರಿತರಾಗಿ ಶೌಚಾಲಯ ನಿರ್ಮಿಸಲು ಮುಂದಾಗುತ್ತಾರೆ. ಶೌಚಾಲಯ ನಿರ್ಮಿಸುವವರಿಗೆ ಸರ್ಕಾರವು ಸಹ ಹಣ ನೀಡುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.<br /> <br /> ಕೇಂದ್ರ ಸರ್ಕಾರ ಗ್ರಾಮೀಣ ನೈರ್ಮಲ್ಯವನ್ನು ತ್ವರಿತಗೊಳಿಸಲು ಹಾಗೂ ಗ್ರಾಮೀಣ ಸ್ವಚ್ಛತೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು 30 ದಿನಗಳ ಸ್ವಚ್ಛತಾ ಉತ್ಸವ ಎಂಬ ರಾಷ್ಟ್ರಮಟ್ಟದ ಜನಾಂದೋಲನ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕೆ ಅಕ್ಟೋಬರ್ 2 ರಂದು ರಾಷ್ಟ್ರದಾದ್ಯಂತ ಚಾಲನೆ ನೀಡಲಾಗುವುದು.<br /> <br /> ಅಭಿವೃದ್ಧಿ ಕೆಲಸಗಳ ಮೂಲಕ ಮಾದರಿ ಗ್ರಾಮ ಪಂಚಾಯಿತಿ ನಿರ್ಮಿಸಬೇಕು. ಇಲಾಖೆ ವತಿಯಿಂದ ನೀಡಿರುವ ಮೊಬೈಲ್ ಅನ್ನು ಸಮರ್ಪಕವಾಗಿ ಬಳಸಬೇಕು. ಪ್ರತಿಯೊಬ್ಬರು ಕಂಪ್ಯೂಟರ್ ಬಳಕೆಯನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಂಗೇಗೌಡ ಸೂಚಿಸಿದರು.<br /> <br /> ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮರ್ಪಕ ಕೆಲಸವಾಗದಿದ್ದರೂ ಬಿಲ್ ಪಾವತಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಅಧಿಕಾರಿಗಳು ಈ ಯೋಜನೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ತಾ.ಪಂ. ಅಧ್ಯಕ್ಷ ಕನಕರಾಜ್ ಅರಸ್ ಸೂಚಿಸಿದರು.<br /> <br /> ಜಿ.ಪಂ. ಉಪಕಾರ್ಯದರ್ಶಿ ಮಹೇಶ್ವರಯ್ಯ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಅಂಬಿಕಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ, ನೈರ್ಮಲ್ಯ ಘಟಕದ ಅಧಿಕಾರಿ ತಾರಾನಾಥ್, ನೈರ್ಮಲ್ಯ ಘಟಕದ ಸಂಯೋಜಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಗ್ರಾಮೀಣ ಭಾಗದಲ್ಲಿ ಜನರಿಗೆ ನೈರ್ಮಲ್ಯ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ನೀಡಿ ಮಾದರಿ ಗ್ರಾಮ ನಿರ್ಮಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪ್ರಫುಲ್ಲಾ ಬಿ.ಮಂಜುನಾಥ್ ಸೂಚನೆ ನೀಡಿದರು.<br /> <br /> ತಾ.ಪಂ. ಸಭಾಂಗಣದಲ್ಲಿ ಗುರುವಾರ ಸಂಪೂರ್ಣ ಸ್ವಚ್ಛತಾ ಆಂದೋಲನಾ, ಸಂವಹನ ಮತ್ತು ಸಾಮರ್ಥ್ಯ ಅಭಿವೃದ್ಧಿ ಘಟಕ, ಕರ್ನಾಟಕ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಸ್ವಚ್ಛತಾ ಉತ್ಸವದಲ್ಲಿ ಮಾತನಾಡಿದರು.<br /> <br /> ಅಧಿಕಾರಿಗಳು ಪ್ರತಿ ಹಳ್ಳಿಗಳಿಗೂ ಹೋಗಿ ಸ್ಥಳ ಪರಿಶೀಲಿಸಿ, ಗ್ರಾಮಗಳಿಗೆ ಅಗತ್ಯವಿರುವ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡಬೇಕು. ಅಧಿಕಾರವಿದ್ದಾಗ ಉತ್ತಮ ಕೆಲಸ ಮಾಡಿದರೆ, ವರ್ಗಾವಣೆಯಾದ ಮೇಲೂ ನಿಮ್ಮ ಕೆಲಸಗಳನ್ನು ಜನರು ಸ್ಮರಿಸುತ್ತಾರೆ ಎಂದರು.<br /> <br /> ಗ್ರಾಮೀಣ ಜನರಿಗೆ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಿದಾಗ ಜನರು ಸ್ವಯಂಪ್ರೇರಿತರಾಗಿ ಶೌಚಾಲಯ ನಿರ್ಮಿಸಲು ಮುಂದಾಗುತ್ತಾರೆ. ಶೌಚಾಲಯ ನಿರ್ಮಿಸುವವರಿಗೆ ಸರ್ಕಾರವು ಸಹ ಹಣ ನೀಡುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.<br /> <br /> ಕೇಂದ್ರ ಸರ್ಕಾರ ಗ್ರಾಮೀಣ ನೈರ್ಮಲ್ಯವನ್ನು ತ್ವರಿತಗೊಳಿಸಲು ಹಾಗೂ ಗ್ರಾಮೀಣ ಸ್ವಚ್ಛತೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು 30 ದಿನಗಳ ಸ್ವಚ್ಛತಾ ಉತ್ಸವ ಎಂಬ ರಾಷ್ಟ್ರಮಟ್ಟದ ಜನಾಂದೋಲನ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕೆ ಅಕ್ಟೋಬರ್ 2 ರಂದು ರಾಷ್ಟ್ರದಾದ್ಯಂತ ಚಾಲನೆ ನೀಡಲಾಗುವುದು.<br /> <br /> ಅಭಿವೃದ್ಧಿ ಕೆಲಸಗಳ ಮೂಲಕ ಮಾದರಿ ಗ್ರಾಮ ಪಂಚಾಯಿತಿ ನಿರ್ಮಿಸಬೇಕು. ಇಲಾಖೆ ವತಿಯಿಂದ ನೀಡಿರುವ ಮೊಬೈಲ್ ಅನ್ನು ಸಮರ್ಪಕವಾಗಿ ಬಳಸಬೇಕು. ಪ್ರತಿಯೊಬ್ಬರು ಕಂಪ್ಯೂಟರ್ ಬಳಕೆಯನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಂಗೇಗೌಡ ಸೂಚಿಸಿದರು.<br /> <br /> ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮರ್ಪಕ ಕೆಲಸವಾಗದಿದ್ದರೂ ಬಿಲ್ ಪಾವತಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಅಧಿಕಾರಿಗಳು ಈ ಯೋಜನೆ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದು ತಾ.ಪಂ. ಅಧ್ಯಕ್ಷ ಕನಕರಾಜ್ ಅರಸ್ ಸೂಚಿಸಿದರು.<br /> <br /> ಜಿ.ಪಂ. ಉಪಕಾರ್ಯದರ್ಶಿ ಮಹೇಶ್ವರಯ್ಯ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಅಂಬಿಕಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೃತ್ಯುಂಜಯ, ನೈರ್ಮಲ್ಯ ಘಟಕದ ಅಧಿಕಾರಿ ತಾರಾನಾಥ್, ನೈರ್ಮಲ್ಯ ಘಟಕದ ಸಂಯೋಜಕ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>