<p>ಹಿರಿಯೂರು: ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಅದ್ಭುತ ಅವಕಾಶ ಕಲ್ಪಿಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಕ್ಕಳ ಜತೆ ಜತೆಗೆ ಶಿಕ್ಷಕರೂ ಸಹ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್. ಚಂದ್ರಪ್ಪ ಕರೆ ನೀಡಿದರು.<br /> <br /> ತಾಲ್ಲೂಕಿನ ಗುಳಗುಂಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಹರ್ತಿಕೋಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದರೂ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಗಳು ಸಿಗದ ಕಾರಣ ಎಳವೆಯಲ್ಲಿಯೇ ಪ್ರತಿಭೆ ಕಮರಿ ಹೋಗುತ್ತದೆ. ಹೀಗಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇದು ನಿರಂತರವಾಗಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲಿ ಎಂದು ಹಾರೈಸಿದರು.<br /> <br /> ಜಿ.ಪಂ. ಸದಸ್ಯ ದ್ಯಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ರಾಮಯ್ಯ, ಬಿ.ಆರ್. ಚಿನ್ನರಾಜು, ಗೀತಾ, ಉಮಾದೇವಿ, ಸತ್ಯನಾರಾಯಣರೆಡ್ಡಿ, ನಾಗಪ್ಪ, ಆರ್.ಟಿ. ಪರಮೇಶ್ವರಪ್ಪ, ಮಹಂತೇಶ್, ಶಿವಣ್ಣ, ತಿಪ್ಪಮ್ಮ, ತಿಮ್ಮಣ್ಣ, ಲೋಕೇಶ್, ಓಬಣ್ಣ, ಡಿ. ಮಂಜುನಾಥ್ ಮತ್ತಿತರರು ಹಾಜರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರ್. ರಂಗನಾಥ್ ಅಧ್ಯಕ್ಷತೆ ವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಅದ್ಭುತ ಅವಕಾಶ ಕಲ್ಪಿಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಕ್ಕಳ ಜತೆ ಜತೆಗೆ ಶಿಕ್ಷಕರೂ ಸಹ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್. ಚಂದ್ರಪ್ಪ ಕರೆ ನೀಡಿದರು.<br /> <br /> ತಾಲ್ಲೂಕಿನ ಗುಳಗುಂಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಹರ್ತಿಕೋಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದರೂ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಗಳು ಸಿಗದ ಕಾರಣ ಎಳವೆಯಲ್ಲಿಯೇ ಪ್ರತಿಭೆ ಕಮರಿ ಹೋಗುತ್ತದೆ. ಹೀಗಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇದು ನಿರಂತರವಾಗಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಲಿ ಎಂದು ಹಾರೈಸಿದರು.<br /> <br /> ಜಿ.ಪಂ. ಸದಸ್ಯ ದ್ಯಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ರಾಮಯ್ಯ, ಬಿ.ಆರ್. ಚಿನ್ನರಾಜು, ಗೀತಾ, ಉಮಾದೇವಿ, ಸತ್ಯನಾರಾಯಣರೆಡ್ಡಿ, ನಾಗಪ್ಪ, ಆರ್.ಟಿ. ಪರಮೇಶ್ವರಪ್ಪ, ಮಹಂತೇಶ್, ಶಿವಣ್ಣ, ತಿಪ್ಪಮ್ಮ, ತಿಮ್ಮಣ್ಣ, ಲೋಕೇಶ್, ಓಬಣ್ಣ, ಡಿ. ಮಂಜುನಾಥ್ ಮತ್ತಿತರರು ಹಾಜರಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರ್. ರಂಗನಾಥ್ ಅಧ್ಯಕ್ಷತೆ ವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>