<p><strong>ಮಹದೇವಪುರ:</strong> ಕ್ಷೇತ್ರದಲ್ಲಿ ಮಹಾನಗರ ಪಾಲಿಕೆಯ ವಾರ್ಡ್ಗಳ ಅಭಿವೃದ್ಧಿಗೆ ನೀಡುವಂತಹ ಪ್ರಾಮುಖ್ಯತೆಯನ್ನು ಗ್ರಾಮ ಪಂಚಾಯಿತಿಗಳಿಗೂ ನೀಡಲಾಗುವುದು ಎಂದು ಶಾಸಕ ಅರವಿಂದ ಲಿಂಬಾವಳಿ ಭರವಸೆ ನೀಡಿದರು.<br /> <br /> ಸಮೀಪದ ಹಾಲನಾಯಕನಹಳ್ಳಿಯಲ್ಲಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತರನ್ನು ಬರಮಾಡಿಕೊಂಡ ಮಾತನಾಡಿದರು. ` ಕೊಡತಿ, ಬಿದರಹಳ್ಳಿ, ದೊಡ್ಡಬನ್ನಹಳ್ಳಿ ಸೇರಿದಂತೆ ಹಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ಸ್ತ್ರೀಶಕ್ತಿ ಭವನ, ಸಮುದಾಯ ಭವನ ನಿರ್ಮಿಸಲಾಗಿದೆ~ ಎಂದರು.<br /> <br /> `ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಅನುದಾನದಡಿ ರೂ 50 ಲಕ್ಷ ನೀಡಲಾಗಿದೆ~ ಎಂದರು.ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ಜಯಚಂದ್ರರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಆರಾಧನಾ ಸಮಿತಿ ಅಧ್ಯಕ್ಷ ಮನೋಹರರೆಡ್ಡಿ, ರಮೇಶರೆಡ್ಡಿ ಹಾಗೂ ವೇಣುಗೋಪಾಲರೆಡ್ಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕೈಕೊಂಡರಹಳ್ಳಿ, ಕಸವನಹಳ್ಳಿ, ಜುನ್ನಸಂದ್ರ ಗ್ರಾಮಗಳ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ:</strong> ಕ್ಷೇತ್ರದಲ್ಲಿ ಮಹಾನಗರ ಪಾಲಿಕೆಯ ವಾರ್ಡ್ಗಳ ಅಭಿವೃದ್ಧಿಗೆ ನೀಡುವಂತಹ ಪ್ರಾಮುಖ್ಯತೆಯನ್ನು ಗ್ರಾಮ ಪಂಚಾಯಿತಿಗಳಿಗೂ ನೀಡಲಾಗುವುದು ಎಂದು ಶಾಸಕ ಅರವಿಂದ ಲಿಂಬಾವಳಿ ಭರವಸೆ ನೀಡಿದರು.<br /> <br /> ಸಮೀಪದ ಹಾಲನಾಯಕನಹಳ್ಳಿಯಲ್ಲಿ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಕಾರ್ಯಕರ್ತರನ್ನು ಬರಮಾಡಿಕೊಂಡ ಮಾತನಾಡಿದರು. ` ಕೊಡತಿ, ಬಿದರಹಳ್ಳಿ, ದೊಡ್ಡಬನ್ನಹಳ್ಳಿ ಸೇರಿದಂತೆ ಹಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ಸ್ತ್ರೀಶಕ್ತಿ ಭವನ, ಸಮುದಾಯ ಭವನ ನಿರ್ಮಿಸಲಾಗಿದೆ~ ಎಂದರು.<br /> <br /> `ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರ ಅನುದಾನದಡಿ ರೂ 50 ಲಕ್ಷ ನೀಡಲಾಗಿದೆ~ ಎಂದರು.ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ಜಯಚಂದ್ರರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಆರಾಧನಾ ಸಮಿತಿ ಅಧ್ಯಕ್ಷ ಮನೋಹರರೆಡ್ಡಿ, ರಮೇಶರೆಡ್ಡಿ ಹಾಗೂ ವೇಣುಗೋಪಾಲರೆಡ್ಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕೈಕೊಂಡರಹಳ್ಳಿ, ಕಸವನಹಳ್ಳಿ, ಜುನ್ನಸಂದ್ರ ಗ್ರಾಮಗಳ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>