<p>ಹೊಸದುರ್ಗ: ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ತಾಲ್ಲೂಕಿನ ದೇವಪುರ ಗ್ರಾ.ಪಂ. ನೌಕರರು ಎಐಟಿಯುಸಿ ನೇತೃತ್ವದಲ್ಲಿ ಬುಧವಾರ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.<br /> <br /> ಗ್ರಾಮೀಣ ಜನರಿಗೆ ಮೂಲಸೌಲಭ್ಯ ಒದಗಿಸುವ ನೌಕರರನ್ನು ಗ್ರಾಮ ಪಂಚಾಯ್ತಿ ಪುಕ್ಕಟೆ ದುಡಿಸಿಕೊಳ್ಳುತ್ತಿದೆ. 18 ತಿಂಗಳಿಂದ ವೇತನ ನೀಡದೇ ಇರುವುದರಿಂದ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಪ್ರತಿಭಟನಾನಿರತ ನೌಕರರು ತಮ್ಮ ಸಮಸ್ಯೆ ತೋಡಿಕೊಂಡರು.<br /> <br /> ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲ್ಲೂಕು ಎಐಟಿಯುಸಿ ಅಧ್ಯಕ್ಷ ಕೆ.ಎನ್. ರಮೇಶ್ ಮಾತನಾಡಿ, ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತಾಲ್ಲೂಕಿನ ಬಹುತೇಕ ಗ್ರಾ.ಪಂ.ಗಳಲ್ಲಿ ನೌಕರರಿಗೆ ಹಲವಾರು ತಿಂಗಳುಗಳಿಂದ ವೇತನ ನೀಡದೇ ದುಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.<br /> <br /> ಸರ್ಕಾರದ ಆದೇಶದಂತೆ ಗ್ರಾ.ಪಂ. ನೌಕರರರಿಗೆ ಏಪ್ರಿಲ್ನಿಂದ ಪರಿಷ್ಕೃತ ವೇತನ ನೀಡಬೇಕಿದೆ. ಆದರೆ ಯಾವುದೇ ಪಂಚಾಯ್ತಿಯೂ ನೌಕರರಿಗೆ ಪರಿಷ್ಕೃತ ವೇತನ ನೀಡುತ್ತಿಲ್ಲ. ಚುನಾಯಿತ ಸದಸ್ಯರು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ಅದೇಶದಂತೆ ನೌಕರರಿಗೆ ವೇತನ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಗ್ರಾಮ ಪಂಚಾಯ್ತಿಗಳು ನೌಕರರಿಗೆ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ. ಅನೇಕ ಗ್ರಾಮಗಳಲ್ಲಿ ಪಂಪ್ಹೌಸ್ಗಳು ದೂರ ಇರುವುದರಿಂದ ಅಲ್ಲಿಗೆ ಹೋಗಿ ಬರಲು ಅನುಕೂಲವಾಗುವಂತೆ ಬೈಸಿಕಲ್ ಕೊಡುವುದರ ಜತೆಗೆ ರಾತ್ರಿ ವೇಳೆ ಓಡಾಡಲು ಟಾರ್ಚ್ಗಳನ್ನು ನೀಡಬೇಕು ಎಂದು ರಮೇಶ್ ಮನವಿ ಮಾಡಿದರು.<br /> <br /> ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ನಿರೀಕ್ಷಕಿ ಗಿರಿಜಾ ಮಧ್ಯಸ್ಥಿಕೆಯಲ್ಲಿ ಚರ್ಚೆ ನಡೆದು ಗ್ರಾ.ಪಂ. ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಲಭ್ಯ ಇರುವ ಅನುದಾನದಲ್ಲಿ ಎರಡು ತಿಂಗಳ ವೇತನ ಬಿಡುಗಡೆ ಮಾಡಲು ಸಮ್ಮತಿಸಿದ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.<br /> <br /> ಎಐಟಿಯುಸಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎನ್.ಸಿ. ಕುಮಾರಸ್ವಾಮಿ, ನೌಕರರಾದ ಗುರುಸಿದ್ದಪ್ಪ, ಹನುಮಂತಪ್ಪ ಮತ್ತಿತರರು ಭಾಗವಹಿಸಿದ್ದರು.<br /> <strong><br /> ಸಾಕ್ಷರ ಜಾಥಾ</strong><br /> ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಬುಧವಾರ ಕೆಲ್ಲೋಡು ಗ್ರಾಮದಲ್ಲಿ ಸಾಕ್ಷರ ಜಾಥಾ ನಡೆಸಲಾಯಿತು.<br /> <br /> ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಹಾಗೂ ಶಿಕ್ಷಕರು, ಸ್ಥಳೀಯ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಜಾಥಾದಲ್ಲಿ ಭಾಗವಹಿಸಿ ಅಕ್ಷರದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.<br /> <br /> ಜಾಥಾದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯಕ್, ಸದಸ್ಯರಾದ ರೇಣುಕಮ್ಮ, ವರಲಕ್ಷ್ಮಮ್ಮ, ರತ್ನಮ್ಮ, ಮಂಜುನಾಥ್, ಮುಖ್ಯಶಿಕ್ಷಕ ಮೋಹನ್ ಕುಮಾರ್, ಪ್ರೇರಕರಾದ ಬಸವರಾಜ್, ಲಕ್ಷ್ಮೀದೇವಿ ಮತ್ತಿತರರು ಭಾಗವಹಿಸಿದ್ದರು.<br /> <br /> ಸಾಕ್ಷರತಾ ಸಪ್ತಾಹದ ಅಂಗವಾಗಿ ಕೆಲ್ಲೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ದಿನಕ್ಕೊಂದು ಗ್ರಾಮದಂತೆ ಏಳು ಗ್ರಾಮಗಳಲ್ಲಿ ಚರ್ಚಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ನವ ಸಾಕ್ಷರರಿಗೆ ಓದು ಬರಹ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ಬಾಕಿ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ತಾಲ್ಲೂಕಿನ ದೇವಪುರ ಗ್ರಾ.ಪಂ. ನೌಕರರು ಎಐಟಿಯುಸಿ ನೇತೃತ್ವದಲ್ಲಿ ಬುಧವಾರ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.<br /> <br /> ಗ್ರಾಮೀಣ ಜನರಿಗೆ ಮೂಲಸೌಲಭ್ಯ ಒದಗಿಸುವ ನೌಕರರನ್ನು ಗ್ರಾಮ ಪಂಚಾಯ್ತಿ ಪುಕ್ಕಟೆ ದುಡಿಸಿಕೊಳ್ಳುತ್ತಿದೆ. 18 ತಿಂಗಳಿಂದ ವೇತನ ನೀಡದೇ ಇರುವುದರಿಂದ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಪ್ರತಿಭಟನಾನಿರತ ನೌಕರರು ತಮ್ಮ ಸಮಸ್ಯೆ ತೋಡಿಕೊಂಡರು.<br /> <br /> ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲ್ಲೂಕು ಎಐಟಿಯುಸಿ ಅಧ್ಯಕ್ಷ ಕೆ.ಎನ್. ರಮೇಶ್ ಮಾತನಾಡಿ, ಸಾಕಷ್ಟು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತಾಲ್ಲೂಕಿನ ಬಹುತೇಕ ಗ್ರಾ.ಪಂ.ಗಳಲ್ಲಿ ನೌಕರರಿಗೆ ಹಲವಾರು ತಿಂಗಳುಗಳಿಂದ ವೇತನ ನೀಡದೇ ದುಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.<br /> <br /> ಸರ್ಕಾರದ ಆದೇಶದಂತೆ ಗ್ರಾ.ಪಂ. ನೌಕರರರಿಗೆ ಏಪ್ರಿಲ್ನಿಂದ ಪರಿಷ್ಕೃತ ವೇತನ ನೀಡಬೇಕಿದೆ. ಆದರೆ ಯಾವುದೇ ಪಂಚಾಯ್ತಿಯೂ ನೌಕರರಿಗೆ ಪರಿಷ್ಕೃತ ವೇತನ ನೀಡುತ್ತಿಲ್ಲ. ಚುನಾಯಿತ ಸದಸ್ಯರು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರದ ಅದೇಶದಂತೆ ನೌಕರರಿಗೆ ವೇತನ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಗ್ರಾಮ ಪಂಚಾಯ್ತಿಗಳು ನೌಕರರಿಗೆ ಅಗತ್ಯ ಸೌಲಭ್ಯ ಒದಗಿಸುತ್ತಿಲ್ಲ. ಅನೇಕ ಗ್ರಾಮಗಳಲ್ಲಿ ಪಂಪ್ಹೌಸ್ಗಳು ದೂರ ಇರುವುದರಿಂದ ಅಲ್ಲಿಗೆ ಹೋಗಿ ಬರಲು ಅನುಕೂಲವಾಗುವಂತೆ ಬೈಸಿಕಲ್ ಕೊಡುವುದರ ಜತೆಗೆ ರಾತ್ರಿ ವೇಳೆ ಓಡಾಡಲು ಟಾರ್ಚ್ಗಳನ್ನು ನೀಡಬೇಕು ಎಂದು ರಮೇಶ್ ಮನವಿ ಮಾಡಿದರು.<br /> <br /> ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ನಿರೀಕ್ಷಕಿ ಗಿರಿಜಾ ಮಧ್ಯಸ್ಥಿಕೆಯಲ್ಲಿ ಚರ್ಚೆ ನಡೆದು ಗ್ರಾ.ಪಂ. ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಲಭ್ಯ ಇರುವ ಅನುದಾನದಲ್ಲಿ ಎರಡು ತಿಂಗಳ ವೇತನ ಬಿಡುಗಡೆ ಮಾಡಲು ಸಮ್ಮತಿಸಿದ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.<br /> <br /> ಎಐಟಿಯುಸಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎನ್.ಸಿ. ಕುಮಾರಸ್ವಾಮಿ, ನೌಕರರಾದ ಗುರುಸಿದ್ದಪ್ಪ, ಹನುಮಂತಪ್ಪ ಮತ್ತಿತರರು ಭಾಗವಹಿಸಿದ್ದರು.<br /> <strong><br /> ಸಾಕ್ಷರ ಜಾಥಾ</strong><br /> ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಬುಧವಾರ ಕೆಲ್ಲೋಡು ಗ್ರಾಮದಲ್ಲಿ ಸಾಕ್ಷರ ಜಾಥಾ ನಡೆಸಲಾಯಿತು.<br /> <br /> ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಹಾಗೂ ಶಿಕ್ಷಕರು, ಸ್ಥಳೀಯ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು ಜಾಥಾದಲ್ಲಿ ಭಾಗವಹಿಸಿ ಅಕ್ಷರದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.<br /> <br /> ಜಾಥಾದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯಕ್, ಸದಸ್ಯರಾದ ರೇಣುಕಮ್ಮ, ವರಲಕ್ಷ್ಮಮ್ಮ, ರತ್ನಮ್ಮ, ಮಂಜುನಾಥ್, ಮುಖ್ಯಶಿಕ್ಷಕ ಮೋಹನ್ ಕುಮಾರ್, ಪ್ರೇರಕರಾದ ಬಸವರಾಜ್, ಲಕ್ಷ್ಮೀದೇವಿ ಮತ್ತಿತರರು ಭಾಗವಹಿಸಿದ್ದರು.<br /> <br /> ಸಾಕ್ಷರತಾ ಸಪ್ತಾಹದ ಅಂಗವಾಗಿ ಕೆಲ್ಲೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ದಿನಕ್ಕೊಂದು ಗ್ರಾಮದಂತೆ ಏಳು ಗ್ರಾಮಗಳಲ್ಲಿ ಚರ್ಚಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ನವ ಸಾಕ್ಷರರಿಗೆ ಓದು ಬರಹ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>