<p><strong> </strong><strong>ಬೆಂಗಳೂರು:</strong> ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ನಗರದ ಚಿಕ್ಕಲಾಲ್ಬಾಗ್ನಿಂದ ಬನ್ನಪ್ಪ ಉದ್ಯಾನದವರೆಗೆ ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿದರು.<br /> <br /> ರಾಜ್ಯದಾದ್ಯಂತ ಇರುವ ಐದು ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಸೇವೆ ಸಲ್ಲಿಸುತ್ತಿದ್ದಾರೆ.ಗ್ರಾಮ ಪಂಚಾಯ್ತಿ ಪರಿಮಿತಿಯಲ್ಲಿ ಒಬ್ಬ ಗ್ರಾಮ ವಿದ್ಯುತ್ ಪ್ರತಿನಿಧಿಯನ್ನು 2003 ರಿಂದ ನೇಮಕ ಮಾಡಿಕೊಳ್ಳಲಾಗಿದೆ. <br /> <br /> ಆದರೆ ಇದುವರೆಗೂ ಕಾಯಂ ನೇಮಕಾತಿ ಮಾಡಿಕೊಂಡಿಲ್ಲ. ಇದರಿಂದ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಒಕ್ಕೂಟದ ಅಧ್ಯಕ್ಷ ಎಸ್.ಆರ್.ಶರಣಪ್ಪ ಮಾಯಕೊಂಡ, ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್, ಉಪಾಧ್ಯಕ್ಷರಾದ ಶಿವರುದ್ರಗೌಡ, ಕೆ.ಆರ್.ಸತೀಶ್, ಎನ್.ಭೈರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> </strong><strong>ಬೆಂಗಳೂರು:</strong> ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ನಗರದ ಚಿಕ್ಕಲಾಲ್ಬಾಗ್ನಿಂದ ಬನ್ನಪ್ಪ ಉದ್ಯಾನದವರೆಗೆ ಮಂಗಳವಾರ ಪ್ರತಿಭಟನಾ ರ್ಯಾಲಿ ನಡೆಸಿದರು.<br /> <br /> ರಾಜ್ಯದಾದ್ಯಂತ ಇರುವ ಐದು ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಸೇವೆ ಸಲ್ಲಿಸುತ್ತಿದ್ದಾರೆ.ಗ್ರಾಮ ಪಂಚಾಯ್ತಿ ಪರಿಮಿತಿಯಲ್ಲಿ ಒಬ್ಬ ಗ್ರಾಮ ವಿದ್ಯುತ್ ಪ್ರತಿನಿಧಿಯನ್ನು 2003 ರಿಂದ ನೇಮಕ ಮಾಡಿಕೊಳ್ಳಲಾಗಿದೆ. <br /> <br /> ಆದರೆ ಇದುವರೆಗೂ ಕಾಯಂ ನೇಮಕಾತಿ ಮಾಡಿಕೊಂಡಿಲ್ಲ. ಇದರಿಂದ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಒಕ್ಕೂಟದ ಅಧ್ಯಕ್ಷ ಎಸ್.ಆರ್.ಶರಣಪ್ಪ ಮಾಯಕೊಂಡ, ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್, ಉಪಾಧ್ಯಕ್ಷರಾದ ಶಿವರುದ್ರಗೌಡ, ಕೆ.ಆರ್.ಸತೀಶ್, ಎನ್.ಭೈರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>