<p><strong>ರಾಯಚೂರು: </strong>ರಾಜ್ಯ ಸರ್ಕಾರಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಹುದ್ದೆಯನ್ನು `ಡಿ~ ದರ್ಜೆ ನೌಕರರೆಂದು ಪರಿಗಣಿಸಬೇಕು ಹಾಗೂ ವೇತನ ಪರಿಷ್ಕರಣೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ 10.450 ಗ್ರಾಮ ಸಹಾಯಕರು 33 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಗ್ರಾಮ ಸಹಾಯಕರ ಹುದ್ದೆಯನ್ನು ಕಾಯಂ ಹುದ್ದೆ ಎಂದು 2007ರಲ್ಲಿ ಘೋಷಿಸಲಾಗಿದೆ.<br /> <br /> ಆದರೂ ವೇತನ ಪರಿಷ್ಕರಣೆ ಮಾಡಿಲ್ಲ ಎಂದು ಆಪಾದಿಸಿದರು.ಗ್ರಾಮ ಸಹಾಯಕರನ್ನು `ಡಿ~ ದರ್ಜೆ ನೌಕರರೆಂದು ಪರಿಗಣಿಸಿ 4.800 ರಿಂದ 7.275 ರೂಪಾಯಿ ವೇತನ ನೀಡಬೇಕು ಹಾಗೂ ನಿವೃತ್ತಿ ಹೊಂದಿದ ಗ್ರಾಮ ಸಹಾಯಕರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ನಿವೃತ್ತಿ ಹೊಂದಿದವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಮರಣ ಹೊಂದಿದ ಗ್ರಾಮ ಸಹಾಯಕರ ಕುಟುಂಬದ ಸದಸ್ಯರನ್ನೇ ಗ್ರಾಮ ಸಹಾಯಕ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ, ತಾಲ್ಲೂಕು ಅಧ್ಯಕ್ಷ ಹೊನ್ನಪ್ಪ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. <br /> <br /> ಗ್ರಾಮ ಸಹಾಯಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಲಕ್ಷ್ಮಯ್ಯ ಮಾನ್ವಿ,ಶಿವರಾಜ ದೇವದುರ್ಗ, ಆದೆಪ್ಪ ಲಿಂಗಸುಗೂರು, ರಾಮಣ್ಣ ಸಿಂಧನೂರು ಹಾಗೂ ಗ್ರಾಮ ಸಹಾಯಕರಾದ ಕೆ.ಬಸವರಾಜ ಕಲ್ಲೂರು, ಗೌಸ್ ಮೊಹಿನುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ರಾಜ್ಯ ಸರ್ಕಾರಿ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಹುದ್ದೆಯನ್ನು `ಡಿ~ ದರ್ಜೆ ನೌಕರರೆಂದು ಪರಿಗಣಿಸಬೇಕು ಹಾಗೂ ವೇತನ ಪರಿಷ್ಕರಣೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ ರಾಜ್ಯ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ 10.450 ಗ್ರಾಮ ಸಹಾಯಕರು 33 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಗ್ರಾಮ ಸಹಾಯಕರ ಹುದ್ದೆಯನ್ನು ಕಾಯಂ ಹುದ್ದೆ ಎಂದು 2007ರಲ್ಲಿ ಘೋಷಿಸಲಾಗಿದೆ.<br /> <br /> ಆದರೂ ವೇತನ ಪರಿಷ್ಕರಣೆ ಮಾಡಿಲ್ಲ ಎಂದು ಆಪಾದಿಸಿದರು.ಗ್ರಾಮ ಸಹಾಯಕರನ್ನು `ಡಿ~ ದರ್ಜೆ ನೌಕರರೆಂದು ಪರಿಗಣಿಸಿ 4.800 ರಿಂದ 7.275 ರೂಪಾಯಿ ವೇತನ ನೀಡಬೇಕು ಹಾಗೂ ನಿವೃತ್ತಿ ಹೊಂದಿದ ಗ್ರಾಮ ಸಹಾಯಕರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ನಿವೃತ್ತಿ ಹೊಂದಿದವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಮರಣ ಹೊಂದಿದ ಗ್ರಾಮ ಸಹಾಯಕರ ಕುಟುಂಬದ ಸದಸ್ಯರನ್ನೇ ಗ್ರಾಮ ಸಹಾಯಕ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ, ತಾಲ್ಲೂಕು ಅಧ್ಯಕ್ಷ ಹೊನ್ನಪ್ಪ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. <br /> <br /> ಗ್ರಾಮ ಸಹಾಯಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಲಕ್ಷ್ಮಯ್ಯ ಮಾನ್ವಿ,ಶಿವರಾಜ ದೇವದುರ್ಗ, ಆದೆಪ್ಪ ಲಿಂಗಸುಗೂರು, ರಾಮಣ್ಣ ಸಿಂಧನೂರು ಹಾಗೂ ಗ್ರಾಮ ಸಹಾಯಕರಾದ ಕೆ.ಬಸವರಾಜ ಕಲ್ಲೂರು, ಗೌಸ್ ಮೊಹಿನುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>