<p>ಬೆಂಗಳೂರು: ‘ಬ್ಯಾಂಕ್ಗಳು ಗ್ರಾಹಕರ ಸೇವೆಯನ್ನು ಪ್ರಧಾನವಾಗಿಸಿಕೊಂಡು ಕಾರ್ಯನಿರ್ವಹಿಸಬೇಕು’ ಎಂದು ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.<br /> <br /> ಜನತಾ ಕೋ ಆಪರೇಟಿವ್ ಬ್ಯಾಂಕ್ ನಗರದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಬ್ಯಾಂಕ್ಗಳು ಗ್ರಾಹಕರ ಸಹಾಯವನ್ನು ಸದಾ ಸ್ಮರಿಸಬೇಕು. ಬ್ಯಾಂಕ್ನ ಸಿಬ್ಬಂದಿ ಬ್ಯಾಂಕ್ನ ಏಳಿಗೆ ಮತ್ತು ಗ್ರಾಹಕರ ಏಳಿಗೆಗೆ ಶ್ರಮಿಸಬೇಕು’ ಎಂದರು.<br /> <br /> ಬ್ಯಾಂಕ್ನ ಅಧ್ಯಕ್ಷ ಸಿ.ಎಲ್.ಮರಿಗೌಡ ಮಾತನಾಡಿ, ‘ಈಗಾಗಲೇ ರಾಜ್ಯದ ಸುಮಾರು ೨೨೦ ಕ್ಕೂ ಹೆಚ್ಚು ಕೋ ಆಪರೇಟಿವ್ ಬ್ಯಾಂಕ್ಗಳ ಪಟ್ಟಿಯಲ್ಲಿ ಮೊದಲ ೬ ಸ್ಥಾನಗಳಲ್ಲಿ ಒಂದೆನಿಸಿಕೊಂಡಿರುವ ಬ್ಯಾಂಕಿನ ವಹಿವಾಟು ₨ ೫೦೦ ಕೋಟಿಗೂ ಹೆಚ್ಚಿದೆ’ ಎಂದರು.<br /> <br /> ‘ಸುವರ್ಣ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ದಿ ಜನತಾ ಕೋ ಆಪರೇಟಿವ್ ಬ್ಯಾಂಕ್ ಇನ್ನೂ ಹಲವಾರು ವಿಶೇಷ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಬ್ಯಾಂಕ್ಗಳು ಗ್ರಾಹಕರ ಸೇವೆಯನ್ನು ಪ್ರಧಾನವಾಗಿಸಿಕೊಂಡು ಕಾರ್ಯನಿರ್ವಹಿಸಬೇಕು’ ಎಂದು ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.<br /> <br /> ಜನತಾ ಕೋ ಆಪರೇಟಿವ್ ಬ್ಯಾಂಕ್ ನಗರದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಬ್ಯಾಂಕ್ಗಳು ಗ್ರಾಹಕರ ಸಹಾಯವನ್ನು ಸದಾ ಸ್ಮರಿಸಬೇಕು. ಬ್ಯಾಂಕ್ನ ಸಿಬ್ಬಂದಿ ಬ್ಯಾಂಕ್ನ ಏಳಿಗೆ ಮತ್ತು ಗ್ರಾಹಕರ ಏಳಿಗೆಗೆ ಶ್ರಮಿಸಬೇಕು’ ಎಂದರು.<br /> <br /> ಬ್ಯಾಂಕ್ನ ಅಧ್ಯಕ್ಷ ಸಿ.ಎಲ್.ಮರಿಗೌಡ ಮಾತನಾಡಿ, ‘ಈಗಾಗಲೇ ರಾಜ್ಯದ ಸುಮಾರು ೨೨೦ ಕ್ಕೂ ಹೆಚ್ಚು ಕೋ ಆಪರೇಟಿವ್ ಬ್ಯಾಂಕ್ಗಳ ಪಟ್ಟಿಯಲ್ಲಿ ಮೊದಲ ೬ ಸ್ಥಾನಗಳಲ್ಲಿ ಒಂದೆನಿಸಿಕೊಂಡಿರುವ ಬ್ಯಾಂಕಿನ ವಹಿವಾಟು ₨ ೫೦೦ ಕೋಟಿಗೂ ಹೆಚ್ಚಿದೆ’ ಎಂದರು.<br /> <br /> ‘ಸುವರ್ಣ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ದಿ ಜನತಾ ಕೋ ಆಪರೇಟಿವ್ ಬ್ಯಾಂಕ್ ಇನ್ನೂ ಹಲವಾರು ವಿಶೇಷ ಸಾರ್ವಜನಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>