<p><strong> ಹುಬ್ಬಳ್ಳಿ:</strong> ಗ್ರಾಹಕರು ಗುಣಮಟ್ಟದ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು. ತಾವು ಖರೀದಿಸುವ ವಸ್ತುಗಳಿಗೆ ತಪ್ಪದೇ ರಸೀದಿ ಪಡೆಯಬೇಕು. ಆಗ ಮಾತ್ರ ಹಕ್ಕು ಚಲಾಯಿಸಲು ಸಾಧ್ಯ ಎಂದು ಜಿಲ್ಲಾ ಗ್ರಾಹಕರ ದೂರುಗಳ ಪರಿಹಾರ ವೇದಿಕೆ ಅಧ್ಯಕ್ಷ ಬಿ.ಎಚ್. ಹರ್ಷ ಸಲಹೆ ನೀಡಿದರು. <br /> <br /> ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಗ್ರಾಹಕ ಸಂಘಟನೆಗಳ ಆಶ್ರಯದಲ್ಲಿ ನಗರದ ಕಾಡಸಿದ್ಧೇಶ್ವರ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. <br /> <br /> ಇವತ್ತು ಉತ್ಪನ್ನದ ಕುರಿತು ಗ್ರಾಹಕನನ್ನು ಮರುಳಾಗಿಸುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆಂದೇ ಜಾಹೀರಾತುಗಳಿಗೆ ಕೋಟಿಗಟ್ಟಲೆ ಹಣ ವಿನಿಯೋಗವಾಗುತ್ತಿದೆ. ಈ ಕುರಿತು ಜನರು ಎಚ್ಚರ ವಹಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ 1986ರಲ್ಲಿ ಕಾಯ್ದೆ ಜಾರಿಗೆ ಬಂದಿದೆ. ಅದರಂತೆ ಗ್ರಾಹಕ ಕೇವಲ ಒಂದು ಅರ್ಜಿ ಸಲ್ಲಿಕೆ ಮೂಲಕ ನ್ಯಾಯ ಪಡೆಯಬಹುದಾಗಿದೆ. <br /> <br /> ಪ್ರತಿ ಶಾಲೆ-ಕಾಲೇಜಿನಲ್ಲೂ ಗ್ರಾಹಕ ವೇದಿಕೆಗಳು ಸ್ಥಾಪನೆಯಾಗಬೇಕು. ಮಕ್ಕಳಲ್ಲಿ ಈ ಕುರಿತು ಅರಿವು ಮೂಡಿಸಬೇಕು ಎಂದು ನುಡಿದರು. ವೇದಿಕೆ ಸದಸ್ಯರಾದ ಎಸ್.ಎಲ್. ಮಟ್ಟಿ, ಎಂ.ವಿಜಯಲಕ್ಷ್ಮಿ, ಆಹಾರ ಇಲಾಖೆ ಉಪನಿರ್ದೇಶಕ ಕೆ.ಎಸ್. ಕಲ್ಲನಗೌಡರ, `ಜನಾದೇಶ~ ಸಂಘಟನೆ ಅಧ್ಯಕ್ಷ ಬಸವಪ್ರಭು ಹೊಸಕೇರಿ, ತೂಕ-ಅಳತೆ ಇಲಾಖೆ ಅಧಿಕಾರಿ ದೇವೂರ, ಜಿ.ಕೆ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಬಿ. ಪಾಟೀಲ, ಕಾಡಸಿದ್ಧೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರೊ. ವಿ.ಎಂ. ಕಿಣಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong> ಹುಬ್ಬಳ್ಳಿ:</strong> ಗ್ರಾಹಕರು ಗುಣಮಟ್ಟದ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು. ತಾವು ಖರೀದಿಸುವ ವಸ್ತುಗಳಿಗೆ ತಪ್ಪದೇ ರಸೀದಿ ಪಡೆಯಬೇಕು. ಆಗ ಮಾತ್ರ ಹಕ್ಕು ಚಲಾಯಿಸಲು ಸಾಧ್ಯ ಎಂದು ಜಿಲ್ಲಾ ಗ್ರಾಹಕರ ದೂರುಗಳ ಪರಿಹಾರ ವೇದಿಕೆ ಅಧ್ಯಕ್ಷ ಬಿ.ಎಚ್. ಹರ್ಷ ಸಲಹೆ ನೀಡಿದರು. <br /> <br /> ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ಗ್ರಾಹಕ ಸಂಘಟನೆಗಳ ಆಶ್ರಯದಲ್ಲಿ ನಗರದ ಕಾಡಸಿದ್ಧೇಶ್ವರ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. <br /> <br /> ಇವತ್ತು ಉತ್ಪನ್ನದ ಕುರಿತು ಗ್ರಾಹಕನನ್ನು ಮರುಳಾಗಿಸುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆಂದೇ ಜಾಹೀರಾತುಗಳಿಗೆ ಕೋಟಿಗಟ್ಟಲೆ ಹಣ ವಿನಿಯೋಗವಾಗುತ್ತಿದೆ. ಈ ಕುರಿತು ಜನರು ಎಚ್ಚರ ವಹಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.<br /> <br /> ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ 1986ರಲ್ಲಿ ಕಾಯ್ದೆ ಜಾರಿಗೆ ಬಂದಿದೆ. ಅದರಂತೆ ಗ್ರಾಹಕ ಕೇವಲ ಒಂದು ಅರ್ಜಿ ಸಲ್ಲಿಕೆ ಮೂಲಕ ನ್ಯಾಯ ಪಡೆಯಬಹುದಾಗಿದೆ. <br /> <br /> ಪ್ರತಿ ಶಾಲೆ-ಕಾಲೇಜಿನಲ್ಲೂ ಗ್ರಾಹಕ ವೇದಿಕೆಗಳು ಸ್ಥಾಪನೆಯಾಗಬೇಕು. ಮಕ್ಕಳಲ್ಲಿ ಈ ಕುರಿತು ಅರಿವು ಮೂಡಿಸಬೇಕು ಎಂದು ನುಡಿದರು. ವೇದಿಕೆ ಸದಸ್ಯರಾದ ಎಸ್.ಎಲ್. ಮಟ್ಟಿ, ಎಂ.ವಿಜಯಲಕ್ಷ್ಮಿ, ಆಹಾರ ಇಲಾಖೆ ಉಪನಿರ್ದೇಶಕ ಕೆ.ಎಸ್. ಕಲ್ಲನಗೌಡರ, `ಜನಾದೇಶ~ ಸಂಘಟನೆ ಅಧ್ಯಕ್ಷ ಬಸವಪ್ರಭು ಹೊಸಕೇರಿ, ತೂಕ-ಅಳತೆ ಇಲಾಖೆ ಅಧಿಕಾರಿ ದೇವೂರ, ಜಿ.ಕೆ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಬಿ. ಪಾಟೀಲ, ಕಾಡಸಿದ್ಧೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರೊ. ವಿ.ಎಂ. ಕಿಣಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>