<p><strong>ಬೆಂಗಳೂರು: </strong>`ಬಿಬಿಎಂಪಿ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವಲ್ಲಿ `ಗ್ಲೋಬಲ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್~ ಉಪಯುಕ್ತವೆನಿಸಿದ್ದು, ಈ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಬೇಕಿದೆ~ ಎಂದು ಕೇಂದ್ರ ವಿಚಕ್ಷಣ ಆಯೋಗದ ಆಯುಕ್ತ ಆರ್.ಶ್ರೀಕುಮಾರ್ ಹೇಳಿದರು.<br /> <br /> ಸಿವಿಕ್ ಬೆಂಗಳೂರು ಸಂಸ್ಥೆಯು ನಗರದ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಸೆನೆಟ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ `ಬಿಬಿಎಂಪಿಯ ವೆಬ್ ಆಧಾರಿತ ಗ್ಲೋಬಲ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್~ ಕುರಿತ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಜನತೆಗೆ ಮಾಹಿತಿ ನೀಡುವ ಉದ್ದೇಶದಿಂದ 2009ರಲ್ಲಿ ಈ ಯೋಜನೆಗೆ ಚಾಲನೆ ನೀಡಲಾಯಿತು. ಇದೀಗ ಎರಡು ವರ್ಷಗಳು ಪೂರ್ಣಗೊಳ್ಳುತ್ತಿದ್ದು, 33,000 ಕಾಮಗಾರಿಗಳ ಬಗ್ಗೆ ವೆಬ್ಸೈಟ್ನಲ್ಲಿ ಮಾಹಿತಿ ಲಭ್ಯವಿದೆ.<br /> <br /> ಪಾಲಿಕೆ ಈವರೆಗೆ ಈ ವೆಬ್ಸೈಟ್ಅನ್ನು ಉತ್ತಮವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ~ ಎಂದು ಹೇಳಿದರು.<br /> <br /> `ಪಾಲಿಕೆ ಎಂಜಿನಿಯರ್ಗಳು ನಿಯಮಿತವಾಗಿ ವೆಬ್ಸೈಟ್ನಲ್ಲಿ ಮಾಹಿತಿ ದಾಖಲಿಸಬೇಕು. ಆ ಮೂಲಕ ಜನತೆಗೆ ತಕ್ಷಣದ ಮಾಹಿತಿ ದೊರೆಯುವಂತೆ ಮಾಡಬೇಕು. ಇದರಿಂದ ಕಾಮಗಾರಿಗಳ ಅಗತ್ಯ ಹಾಗೂ ಗುಣಮಟ್ಟ ಪರಿಶೀಲಿಸಲು ಜನತೆಗೆ ನೆರವಾಗುತ್ತದೆ~ ಎಂದರು.<br /> <br /> ಬಳಿಕ ಸಭಿಕರೊಂದಿಗೆ ಸಂವಾದ ನಡೆಸಿದರು. ಆಗ ಹಿರಿಯ ವ್ಯಕ್ತಿಯೊಬ್ಬರು, `ಕೆಲವೊಂದು ಕಾಮಗಾರಿಗಳ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ಇರುವುದಿಲ್ಲ. ರಾಜರಾಜೇಶ್ವರಿನಗರದಲ್ಲಿ ನಡೆಯುತ್ತಿರುವ ಬೃಹತ್ ವೆಚ್ಚದ ಕಾಮಗಾರಿಯ ಬಗ್ಗೆ ಬೃಹತ್ ರಸ್ತೆ ವಿಭಾಗ ಹಾಗೂ ರಾಜರಾಜೇಶ್ವರಿನಗರ ಯೋಜನಾ ವಿಭಾಗದ ಅಧಿಕಾರಿಗಳ ಬಳಿ ಮಾಹಿತಿಯೇ ಇಲ್ಲ. <br /> <br /> ಈ ರೀತಿ ಬೇಜವಾಬ್ದಾರಿ ತೋರಿದರೆ ಹೊಸ ವ್ಯವಸ್ಥೆಯಿಂದ ಪ್ರಯೋಜನವಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆಗ ಪ್ರತಿಕ್ರಿಯಿಸಿದ ಶ್ರೀಕುಮಾರ್, `ಎಂಜಿನಿಯರ್ಗಳ ಈ ರೀತಿಯ ಧೋರಣೆ ಸರಿಯಲ್ಲ. ಒಂದೊಮ್ಮೆ ಮಾಹಿತಿ ನೀಡದಿದ್ದರೆ ಈ ಕುರಿತು ವೆಬ್ಸೈಟ್ನಲ್ಲಿ ದೂರು ದಾಖಲಿಸಬಹುದು. <br /> <br /> ಇದು ದಾಖಲಾಗುವುದರಿಂದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪ್ರತಿಕ್ರಿಯೆ ನೀಡಬೇಕಾಗುತ್ತದೆ~ ಎಂದರು.<br /> <br /> ಬಿಬಿಎಂಪಿ ಮಾದರಿಯಲ್ಲಿ ಬೆಸ್ಕಾಂ, ಜಲಮಂಡಳಿ, ಬಿಡಿಎ, ನಗರ ಸಂಚಾರ ಪೊಲೀಸ್ ವಿಭಾಗವು ವೆಬ್ಸೈಟ್ನಲ್ಲಿ ಮಾಹಿತಿ ನೀಡಬೇಕು. ಕನ್ನಡದಲ್ಲಿ ವಿವರಗಳು ಲಭ್ಯವಾಗಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ವಿವರ ದಾಖಲಿಸುವ ಬದಲು ಆರಂಭವಾಗುವ ಸಂದರ್ಭದಲ್ಲೇ ಮಾಹಿತಿ ದಾಖಲಿಸಬೇಕು ಎಂಬ ಸಲಹೆಗಳು ಕೇಳಿಬಂದವು.<br /> <br /> ಪಾಲಿಕೆಯ ವಿಶೇಷ ಆಯುಕ್ತ ನಿರಂಜನ್, `ಈ ಹಿಂದೆ ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇತ್ತು. ಆದರೆ ಮುಖ್ಯಮಂತ್ರಿಗಳ ಸಲಹೆಗಾರ (ಮೂಲಸೌಕರ್ಯ) ಡಾ.ಎ.ರವೀಂದ್ರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತಿದ್ದು, ಇಲಾಖೆಗಳ ನಡುವೆ ಸಮನ್ವಯದ ಕೊರತೆ ಕಡಿಮೆಯಾಗುತ್ತಿದೆ~ ಎಂದರು.<br /> <br /> `ಇಂಡಿಯನ್ ಸೆಂಟರ್ ಫಾರ್ ಸೋಷಿಯಲ್ ಟ್ರಾನ್ಸ್ಫಾರ್ಮೇಶನ್~ ಸಂಸ್ಥೆಯ ಸ್ಥಾಪಕ ಟ್ರಸ್ಟಿ ರಾಜ ಸೀವನ್, ಬಿಬಿಎಂಪಿ ಮಾಹಿತಿ ತಂತ್ರಜ್ಞಾನ ಸಲಹೆಗಾರ ಶೇಷಾದ್ರಿ, ಸಿವಿಕ್ ಬೆಂಗಳೂರು ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಬಿಬಿಎಂಪಿ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವಲ್ಲಿ `ಗ್ಲೋಬಲ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್~ ಉಪಯುಕ್ತವೆನಿಸಿದ್ದು, ಈ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಬೇಕಿದೆ~ ಎಂದು ಕೇಂದ್ರ ವಿಚಕ್ಷಣ ಆಯೋಗದ ಆಯುಕ್ತ ಆರ್.ಶ್ರೀಕುಮಾರ್ ಹೇಳಿದರು.<br /> <br /> ಸಿವಿಕ್ ಬೆಂಗಳೂರು ಸಂಸ್ಥೆಯು ನಗರದ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಸೆನೆಟ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ `ಬಿಬಿಎಂಪಿಯ ವೆಬ್ ಆಧಾರಿತ ಗ್ಲೋಬಲ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್~ ಕುರಿತ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಜನತೆಗೆ ಮಾಹಿತಿ ನೀಡುವ ಉದ್ದೇಶದಿಂದ 2009ರಲ್ಲಿ ಈ ಯೋಜನೆಗೆ ಚಾಲನೆ ನೀಡಲಾಯಿತು. ಇದೀಗ ಎರಡು ವರ್ಷಗಳು ಪೂರ್ಣಗೊಳ್ಳುತ್ತಿದ್ದು, 33,000 ಕಾಮಗಾರಿಗಳ ಬಗ್ಗೆ ವೆಬ್ಸೈಟ್ನಲ್ಲಿ ಮಾಹಿತಿ ಲಭ್ಯವಿದೆ.<br /> <br /> ಪಾಲಿಕೆ ಈವರೆಗೆ ಈ ವೆಬ್ಸೈಟ್ಅನ್ನು ಉತ್ತಮವಾಗಿ ನಿರ್ವಹಿಸುತ್ತಾ ಬಂದಿರುವುದು ಶ್ಲಾಘನೀಯ~ ಎಂದು ಹೇಳಿದರು.<br /> <br /> `ಪಾಲಿಕೆ ಎಂಜಿನಿಯರ್ಗಳು ನಿಯಮಿತವಾಗಿ ವೆಬ್ಸೈಟ್ನಲ್ಲಿ ಮಾಹಿತಿ ದಾಖಲಿಸಬೇಕು. ಆ ಮೂಲಕ ಜನತೆಗೆ ತಕ್ಷಣದ ಮಾಹಿತಿ ದೊರೆಯುವಂತೆ ಮಾಡಬೇಕು. ಇದರಿಂದ ಕಾಮಗಾರಿಗಳ ಅಗತ್ಯ ಹಾಗೂ ಗುಣಮಟ್ಟ ಪರಿಶೀಲಿಸಲು ಜನತೆಗೆ ನೆರವಾಗುತ್ತದೆ~ ಎಂದರು.<br /> <br /> ಬಳಿಕ ಸಭಿಕರೊಂದಿಗೆ ಸಂವಾದ ನಡೆಸಿದರು. ಆಗ ಹಿರಿಯ ವ್ಯಕ್ತಿಯೊಬ್ಬರು, `ಕೆಲವೊಂದು ಕಾಮಗಾರಿಗಳ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ಇರುವುದಿಲ್ಲ. ರಾಜರಾಜೇಶ್ವರಿನಗರದಲ್ಲಿ ನಡೆಯುತ್ತಿರುವ ಬೃಹತ್ ವೆಚ್ಚದ ಕಾಮಗಾರಿಯ ಬಗ್ಗೆ ಬೃಹತ್ ರಸ್ತೆ ವಿಭಾಗ ಹಾಗೂ ರಾಜರಾಜೇಶ್ವರಿನಗರ ಯೋಜನಾ ವಿಭಾಗದ ಅಧಿಕಾರಿಗಳ ಬಳಿ ಮಾಹಿತಿಯೇ ಇಲ್ಲ. <br /> <br /> ಈ ರೀತಿ ಬೇಜವಾಬ್ದಾರಿ ತೋರಿದರೆ ಹೊಸ ವ್ಯವಸ್ಥೆಯಿಂದ ಪ್ರಯೋಜನವಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆಗ ಪ್ರತಿಕ್ರಿಯಿಸಿದ ಶ್ರೀಕುಮಾರ್, `ಎಂಜಿನಿಯರ್ಗಳ ಈ ರೀತಿಯ ಧೋರಣೆ ಸರಿಯಲ್ಲ. ಒಂದೊಮ್ಮೆ ಮಾಹಿತಿ ನೀಡದಿದ್ದರೆ ಈ ಕುರಿತು ವೆಬ್ಸೈಟ್ನಲ್ಲಿ ದೂರು ದಾಖಲಿಸಬಹುದು. <br /> <br /> ಇದು ದಾಖಲಾಗುವುದರಿಂದ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪ್ರತಿಕ್ರಿಯೆ ನೀಡಬೇಕಾಗುತ್ತದೆ~ ಎಂದರು.<br /> <br /> ಬಿಬಿಎಂಪಿ ಮಾದರಿಯಲ್ಲಿ ಬೆಸ್ಕಾಂ, ಜಲಮಂಡಳಿ, ಬಿಡಿಎ, ನಗರ ಸಂಚಾರ ಪೊಲೀಸ್ ವಿಭಾಗವು ವೆಬ್ಸೈಟ್ನಲ್ಲಿ ಮಾಹಿತಿ ನೀಡಬೇಕು. ಕನ್ನಡದಲ್ಲಿ ವಿವರಗಳು ಲಭ್ಯವಾಗಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ವಿವರ ದಾಖಲಿಸುವ ಬದಲು ಆರಂಭವಾಗುವ ಸಂದರ್ಭದಲ್ಲೇ ಮಾಹಿತಿ ದಾಖಲಿಸಬೇಕು ಎಂಬ ಸಲಹೆಗಳು ಕೇಳಿಬಂದವು.<br /> <br /> ಪಾಲಿಕೆಯ ವಿಶೇಷ ಆಯುಕ್ತ ನಿರಂಜನ್, `ಈ ಹಿಂದೆ ವಿವಿಧ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇತ್ತು. ಆದರೆ ಮುಖ್ಯಮಂತ್ರಿಗಳ ಸಲಹೆಗಾರ (ಮೂಲಸೌಕರ್ಯ) ಡಾ.ಎ.ರವೀಂದ್ರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ಸಭೆ ನಡೆಯುತ್ತಿದ್ದು, ಇಲಾಖೆಗಳ ನಡುವೆ ಸಮನ್ವಯದ ಕೊರತೆ ಕಡಿಮೆಯಾಗುತ್ತಿದೆ~ ಎಂದರು.<br /> <br /> `ಇಂಡಿಯನ್ ಸೆಂಟರ್ ಫಾರ್ ಸೋಷಿಯಲ್ ಟ್ರಾನ್ಸ್ಫಾರ್ಮೇಶನ್~ ಸಂಸ್ಥೆಯ ಸ್ಥಾಪಕ ಟ್ರಸ್ಟಿ ರಾಜ ಸೀವನ್, ಬಿಬಿಎಂಪಿ ಮಾಹಿತಿ ತಂತ್ರಜ್ಞಾನ ಸಲಹೆಗಾರ ಶೇಷಾದ್ರಿ, ಸಿವಿಕ್ ಬೆಂಗಳೂರು ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>