<p>ದೊಡ್ಡಬಳ್ಳಾಪುರ: ಘನತ್ಯಾಜ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಬೇಕಿದೆ. ಈ ದಿಸೆಯಲ್ಲಿ ನಗರಸಭೆ ಕೈಗೊಳ್ಳುವ ಕ್ರಮಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ನಗರಸಭೆ ಪೌರಾಯುಕ್ತ ಚಿಕ್ಕಣ್ಣ ಹೇಳಿದರು.<br /> <br /> ನಗರದ ಮೈತ್ರಿ ಸರ್ವ ಸೇವಾ ಸಮಿತಿ ಹಾಗೂ ನಗರಸಭೆ ವತಿಯಿಂದ ದೇಶದಪೇಟೆ ವಾರ್ಡ್ನಲ್ಲಿ ನಡೆದ ಸ್ವಚ್ಛತಾ ಆಂದೋಲನ ಘನತ್ಯಾಜ್ಯ ನಿರ್ವಹಣೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ನಗರದ ಸ್ವಚ್ಛತೆ ಇಂದು ದೊಡ್ಡ ಸವಾಲಾಗಿದ್ದು ನಗರಸಭೆ ಘನತ್ಯಾಜ್ಯ ನಿರ್ವಹಣೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ. ನಾಗರಿಕರ ಸಹಕಾರ ಇಲ್ಲದೆ ಈ ಕಾರ್ಯಗಳು ಯಶಸ್ವಿಯಾಗುವುದಿಲ್ಲ ಎಂದರು.<br /> <br /> ಮೈತ್ರಿ ಸರ್ವ ಸೇವಾ ಸಮಿತಿ ಸಂಯೋಜಕ ಕೆ.ಗುರುದೇವ್ ಸ್ವಚ್ಛತಾ ಆಂದೋಲನ ಕುರಿತು ಮಾಹಿತಿ ನೀಡಿದರು. <br /> <br /> ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ವಡ್ಡರಹಳ್ಳಿರವಿ, ನಗರಸಭೆ ಆರೋಗ್ಯ ನಿರೀಕ್ಷಕ ಸೂಲಪ್ಪ, ಹರೀಶ್, ಮುಕ್ತಾಂಬ, ವಿಜ್ಞಾನ ಬರಗಾರ ಡಾ.ಎ.ಒ.ಆವಲಮೂರ್ತಿ, ಜಗದೀಶ್, ನಾರಾಯಣಪ್ಪ, ಎಸ್.ನಟರಾಜ್, ಮೈತ್ರಿ ಸಂಸ್ಥೆಯ ಸಂಯೋಜಕಿ ಗೌರಮ್ಮ ಮತ್ತು ತಾಂತ್ರಿಕ ತಜ್ಞರಾದ ಸೌಮ್ಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ಘನತ್ಯಾಜ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಬೇಕಿದೆ. ಈ ದಿಸೆಯಲ್ಲಿ ನಗರಸಭೆ ಕೈಗೊಳ್ಳುವ ಕ್ರಮಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ನಗರಸಭೆ ಪೌರಾಯುಕ್ತ ಚಿಕ್ಕಣ್ಣ ಹೇಳಿದರು.<br /> <br /> ನಗರದ ಮೈತ್ರಿ ಸರ್ವ ಸೇವಾ ಸಮಿತಿ ಹಾಗೂ ನಗರಸಭೆ ವತಿಯಿಂದ ದೇಶದಪೇಟೆ ವಾರ್ಡ್ನಲ್ಲಿ ನಡೆದ ಸ್ವಚ್ಛತಾ ಆಂದೋಲನ ಘನತ್ಯಾಜ್ಯ ನಿರ್ವಹಣೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. <br /> <br /> ನಗರದ ಸ್ವಚ್ಛತೆ ಇಂದು ದೊಡ್ಡ ಸವಾಲಾಗಿದ್ದು ನಗರಸಭೆ ಘನತ್ಯಾಜ್ಯ ನಿರ್ವಹಣೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದೆ. ನಾಗರಿಕರ ಸಹಕಾರ ಇಲ್ಲದೆ ಈ ಕಾರ್ಯಗಳು ಯಶಸ್ವಿಯಾಗುವುದಿಲ್ಲ ಎಂದರು.<br /> <br /> ಮೈತ್ರಿ ಸರ್ವ ಸೇವಾ ಸಮಿತಿ ಸಂಯೋಜಕ ಕೆ.ಗುರುದೇವ್ ಸ್ವಚ್ಛತಾ ಆಂದೋಲನ ಕುರಿತು ಮಾಹಿತಿ ನೀಡಿದರು. <br /> <br /> ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ವಡ್ಡರಹಳ್ಳಿರವಿ, ನಗರಸಭೆ ಆರೋಗ್ಯ ನಿರೀಕ್ಷಕ ಸೂಲಪ್ಪ, ಹರೀಶ್, ಮುಕ್ತಾಂಬ, ವಿಜ್ಞಾನ ಬರಗಾರ ಡಾ.ಎ.ಒ.ಆವಲಮೂರ್ತಿ, ಜಗದೀಶ್, ನಾರಾಯಣಪ್ಪ, ಎಸ್.ನಟರಾಜ್, ಮೈತ್ರಿ ಸಂಸ್ಥೆಯ ಸಂಯೋಜಕಿ ಗೌರಮ್ಮ ಮತ್ತು ತಾಂತ್ರಿಕ ತಜ್ಞರಾದ ಸೌಮ್ಯ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>