<p><strong>ಅಲಹಾಬಾದ್(ಪಿಟಿಐ):</strong> ಇಲ್ಲಿನ ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಶೈಕ್ಷಣಿಕ ವರ್ಷ ಮುಗಿದ ನಂತರವೂ ಅಲ್ಲಿಯೇ ನೆಲೆಸಿದ್ದ ವಿದ್ಯಾರ್ಥಿಗಳನ್ನು ಹೊರ ಹಾಕಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದು ವಿವಿಯನ್ನು ಸೋಮವಾರದವರೆಗೆ ಮುಚ್ಚಲಾಗಿದೆ ಎಂದು ವಿವಿ ಮುಖ್ಯ ಅಧಿಕಾರಿ ಮಾತಾ ಅಂಬರ್ ತಿವಾರಿ ಹೇಳಿದ್ದಾರೆ.</p>.<p>ಅಕ್ರಮವಾಗಿ ನೆಲೆಸಿದ್ದ ವಿದ್ಯಾರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳು ಹಿಂಸಾಚಾರದಲ್ಲಿ ತೊಡಗಿದ್ದರು. ಅವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದಾಗ 20 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.</p>.<p><strong>ಹಿನ್ನೆಲೆ:</strong> ವಿಶ್ವವಿದ್ಯಾಲಯ ನಿಯಮದ ಪ್ರಕಾರ ಶೈಕ್ಷಣಿಕ ವರ್ಷ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ಖಾಲಿ ಮಾಡಬೇಕು. ಆದರೆ ಕಾಲಾವಧಿ ಮುಗಿದರೂ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಾಗಿ ಅನೇಕ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಇರಲು ಅವಕಾಶ ಕೋರಿದ್ದರು.</p>.<p>ಅನುಮತಿ ಇಲ್ಲದಿದ್ದರೂ ಅಕ್ರಮವಾಗಿ ವಾಸ್ತವ್ಯ ಹೂಡಿದವರನ್ನು ಹೊರ ಹಾಕುವ ವಿಚಾರದಲ್ಲಿ ವಿವಿ ಆಡಳಿತ ದೃಢ ತೀರ್ಮಾನ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಹಾಬಾದ್(ಪಿಟಿಐ):</strong> ಇಲ್ಲಿನ ಅಲಹಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದಲ್ಲಿ ಶೈಕ್ಷಣಿಕ ವರ್ಷ ಮುಗಿದ ನಂತರವೂ ಅಲ್ಲಿಯೇ ನೆಲೆಸಿದ್ದ ವಿದ್ಯಾರ್ಥಿಗಳನ್ನು ಹೊರ ಹಾಕಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದು ವಿವಿಯನ್ನು ಸೋಮವಾರದವರೆಗೆ ಮುಚ್ಚಲಾಗಿದೆ ಎಂದು ವಿವಿ ಮುಖ್ಯ ಅಧಿಕಾರಿ ಮಾತಾ ಅಂಬರ್ ತಿವಾರಿ ಹೇಳಿದ್ದಾರೆ.</p>.<p>ಅಕ್ರಮವಾಗಿ ನೆಲೆಸಿದ್ದ ವಿದ್ಯಾರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿದ್ಯಾರ್ಥಿಗಳು ಹಿಂಸಾಚಾರದಲ್ಲಿ ತೊಡಗಿದ್ದರು. ಅವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದಾಗ 20 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.</p>.<p><strong>ಹಿನ್ನೆಲೆ:</strong> ವಿಶ್ವವಿದ್ಯಾಲಯ ನಿಯಮದ ಪ್ರಕಾರ ಶೈಕ್ಷಣಿಕ ವರ್ಷ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ಖಾಲಿ ಮಾಡಬೇಕು. ಆದರೆ ಕಾಲಾವಧಿ ಮುಗಿದರೂ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ಸಿದ್ಧತೆಗಾಗಿ ಅನೇಕ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ಇರಲು ಅವಕಾಶ ಕೋರಿದ್ದರು.</p>.<p>ಅನುಮತಿ ಇಲ್ಲದಿದ್ದರೂ ಅಕ್ರಮವಾಗಿ ವಾಸ್ತವ್ಯ ಹೂಡಿದವರನ್ನು ಹೊರ ಹಾಕುವ ವಿಚಾರದಲ್ಲಿ ವಿವಿ ಆಡಳಿತ ದೃಢ ತೀರ್ಮಾನ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>