<p>ನಾನು ಇತ್ತೀಚೆಗೆ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ವಿದುರಾಶ್ವತ್ಥ ದೇವಸ್ಥಾನಕ್ಕೆ ಅಲ್ಲಿಯ ದೇವರ ದರ್ಶನಕ್ಕೆ ಹೋಗಿದ್ದೆ. ಇವೆರಡೂ ಸ್ಥಳಗಳಿಗೆ ಅಪಾರವಾದ ಭಕ್ತರು ಭೇಟಿ ನೀಡುತ್ತಾರೆ. ಆದರೆ ಈ ಎರಡೂ ಸ್ಥಳಗಳಲ್ಲಿ ಕನಿಷ್ಠ ಸೌಕರ್ಯಗಳೂ ಇಲ್ಲದಿರುವುದನ್ನು ಕಂಡು ಬಹಳ ಬೇಜಾರಾಯಿತು.<br /> <br /> ಮುಜರಾಯಿ ಇಲಾಖೆಗೆ ಅಪಾರ ವರಮಾನ ತರುವ ಈ ಕ್ಷೇತ್ರದ ಬಗ್ಗೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಿ ಕ್ಷೇತ್ರದಲ್ಲಿ ನೈರ್ಮಲ್ಯ ಕಾಪಾಡಬೇಕು. ಭಾನುವಾರ ಹಾಗೂ ವಿಪರೀತ ಭಕ್ತರು ಸೇರುವ ದಿನಗಳಲ್ಲಿ ಇಲ್ಲಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಹಾಜರಿದ್ದು ಗಮನಿಸಬೇಕು. <br /> <br /> ಇಡೀ ಕ್ಷೇತ್ರದಲ್ಲಿ ಸ್ವಚ್ಛತೆಯ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಲ್ಲಿ ಒಂದಾದರೂ ಉತ್ತಮ ಉಪಹಾರ ಕೇಂದ್ರವಿಲ್ಲದೆ ಎಲ್ಲೆಂದರಲ್ಲಿ ಸಿಕ್ಕಿದ ಆಹಾರವನ್ನು ತಿನ್ನಬೇಕಾಗಿದೆ. ದೇವಾಲಯದ ವತಿಯಿಂದ ಭಕ್ತಾದಿಗಳಿಗೆ ನಿತ್ಯ ಅನ್ನದಾನ ಸೇವೆ ಜರುಗುವ ವ್ಯವಸ್ಥೆ ಮಾಡಲಿ ಎಂದು ವಿನಂತಿಸುತ್ತೇನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾನು ಇತ್ತೀಚೆಗೆ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ವಿದುರಾಶ್ವತ್ಥ ದೇವಸ್ಥಾನಕ್ಕೆ ಅಲ್ಲಿಯ ದೇವರ ದರ್ಶನಕ್ಕೆ ಹೋಗಿದ್ದೆ. ಇವೆರಡೂ ಸ್ಥಳಗಳಿಗೆ ಅಪಾರವಾದ ಭಕ್ತರು ಭೇಟಿ ನೀಡುತ್ತಾರೆ. ಆದರೆ ಈ ಎರಡೂ ಸ್ಥಳಗಳಲ್ಲಿ ಕನಿಷ್ಠ ಸೌಕರ್ಯಗಳೂ ಇಲ್ಲದಿರುವುದನ್ನು ಕಂಡು ಬಹಳ ಬೇಜಾರಾಯಿತು.<br /> <br /> ಮುಜರಾಯಿ ಇಲಾಖೆಗೆ ಅಪಾರ ವರಮಾನ ತರುವ ಈ ಕ್ಷೇತ್ರದ ಬಗ್ಗೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಿ ಕ್ಷೇತ್ರದಲ್ಲಿ ನೈರ್ಮಲ್ಯ ಕಾಪಾಡಬೇಕು. ಭಾನುವಾರ ಹಾಗೂ ವಿಪರೀತ ಭಕ್ತರು ಸೇರುವ ದಿನಗಳಲ್ಲಿ ಇಲ್ಲಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಹಾಜರಿದ್ದು ಗಮನಿಸಬೇಕು. <br /> <br /> ಇಡೀ ಕ್ಷೇತ್ರದಲ್ಲಿ ಸ್ವಚ್ಛತೆಯ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇಲ್ಲಿ ಒಂದಾದರೂ ಉತ್ತಮ ಉಪಹಾರ ಕೇಂದ್ರವಿಲ್ಲದೆ ಎಲ್ಲೆಂದರಲ್ಲಿ ಸಿಕ್ಕಿದ ಆಹಾರವನ್ನು ತಿನ್ನಬೇಕಾಗಿದೆ. ದೇವಾಲಯದ ವತಿಯಿಂದ ಭಕ್ತಾದಿಗಳಿಗೆ ನಿತ್ಯ ಅನ್ನದಾನ ಸೇವೆ ಜರುಗುವ ವ್ಯವಸ್ಥೆ ಮಾಡಲಿ ಎಂದು ವಿನಂತಿಸುತ್ತೇನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>