<p>ಅತಿವೃಷ್ಟಿ, ಚಂಡಮಾರುತ, ಸುನಾಮಿಯಂತಹ ಪ್ರಕೃತಿ ವಿಕೋಪಗಳು ನಮ್ಮ ದೇಶಕ್ಕೆ ಹೊಸದಲ್ಲ. ಥೇನ್ ಚಂಡಮಾರುತಕ್ಕೆ ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳ ಒಟ್ಟು ನಲವತ್ತಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. <br /> <br /> ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ನೂರಾರು ಮನೆಗಳು ಕುಸಿದಿವೆ. ಬಿರುಗಾಳಿ, ಮಳೆಗೆ ವಿದ್ಯುತ್, ನೀರು, ದೂರ ಸಂಪರ್ಕ ವ್ಯವಸ್ಥೆ ಹಾಳಾಗಿದೆ.<br /> <br /> ಶ್ರೀಕಾಕುಳಂ, ವಿಶಾಖಪಟ್ಟಣ, ಪಶ್ಚಿಮ ಗೋದಾವರಿ, ಪ್ರಕಾಶಂ, ಗುಂಟೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಸಾವಿರಾರು ರೈತರ ವರ್ಷದ ದುಡಿಮೆ ನೀರು ಪಾಲಾಗಿದೆ. ಈ ಪ್ರದೇಶಗಳೆಲ್ಲ ನೈಸರ್ಗಿಕ ವಿಕೋಪದ ಹಾವಳಿಗೆ ಹಿಂದೆ ತುತ್ತಾಗಿರುವಂಥವು. ಆದರೆ ಇವನ್ನು ಎದುರಿಸುವ ವಿಷಯದಲ್ಲಿ ಸರ್ಕಾರಗಳಿಗೆ ಸ್ಪಷ್ಟತೆ ಇಲ್ಲ.<br /> <br /> ಥೇನ್ ಚಂಡಮಾರುತದ ಬಗ್ಗೆ ಸಾಕಷ್ಟು ಮೊದಲೇ ಸುಳಿವು ಸಿಕ್ಕಿದ್ದರೂ ಸ್ಥಳೀಯ ಆಡಳಿತ ಮತ್ತು ಕಡಲತೀರದ ಜನರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಪ್ರಕೃತಿ ವಿಕೋಪಗಳನ್ನು ಎದುರಿಸಲು ಸರ್ಕಾರಗಳು ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತಿವೆ.<br /> <br /> ಆದರೆ ಹಿಂದಿನ ಅನುಭವಗಳಿಂದ ಪಾಠ ಕಲಿತಿಲ್ಲ. ಕಡಲ ತೀರದ ಜನರನ್ನು ಸ್ಥಳಾಂತರಿಸಿದ್ದರೆ ಪ್ರಾಣ ಹಾನಿ ತಪ್ಪಿಸಬಹುದಿತ್ತು. ಜನರಂತೆ ಸರ್ಕಾರಗಳೂ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದು ಖಂಡನೀಯ.<br /> <br /> ಥೇನ್ ದಾಳಿಗೆ ಸಿಕ್ಕಿ ಸತ್ತವರ ಕುಟುಂಬಗಳಿಗೆ ರಾಜ್ಯ ಸರ್ಕಾರಗಳು ಈಗಾಗಲೇ ಪರಿಹಾರ ಘೋಷಿಸಿವೆ. ಮನೆ, ಮಠ ಕಳೆದುಕೊಂಡವರು ಹಾಗೂ ಬೆಳೆ ಹಾನಿಗೆ ತುತ್ತಾದ ರೈತರು ಪರಿಹಾರಕ್ಕಾಗಿ ಸರ್ಕಾರದ ಕಡೆಗೆ ನೋಡುತ್ತಿದ್ದಾರೆ. ಅದು ಸಹಜ.<br /> <br /> ನಷ್ಟದ ಪ್ರಮಾಣ ಹೆಚ್ಚಾಗಿರುವುದರಿಂದ ಎಲ್ಲರಿಗೂ ಪರಿಹಾರ ಕೊಡಲು ರಾಜ್ಯ ಸರ್ಕಾರಗಳಿಂದ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡದಿದ್ದರೆ ಪರಿಹಾರ, ಪುನರ್ವಸತಿ ಎರಡೂ ಸಾಧ್ಯವಿಲ್ಲ.<br /> <br /> ಪ್ರತಿ ವರ್ಷ ಚಂಡಮಾರುತದ ದಾಳಿಗೆ ತುತ್ತಾಗುವ ಪ್ರದೇಶಗಳ ಜನರಿಗೆ ಸೂಕ್ತ ರಕ್ಷಣೆ ಒದಗಿಸುವ ಬಗ್ಗೆ ಕೇಂದ್ರ ಹಾಗೂ ಸರ್ಕಾರಗಳು ಶಾಶ್ವತ ಯೋಜನೆ ರೂಪಿಸಬೇಕು. 2004 ಡಿಸೆಂಬರ್ನಲ್ಲಿ ಸುನಾಮಿಯಿಂದ 2.3 ಲಕ್ಷ ಜನರು ಬಲಿಯಾದರು.<br /> <br /> ಅವರಿಗೆ ಪುನರ್ವಸತಿ ಕಲ್ಪಿಸಲು ಕೋಟ್ಯಂತರ ರೂಪಾಯಿ ಖರ್ಚಾಯಿತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಎಚ್ಚರಿಕೆ ಅವಶ್ಯಕವಾಗಿತ್ತು. ಪ್ರಕೃತಿ ವಿಕೋಪಗಳ ಸಂತ್ರಸ್ತರಾಗುವವರಿಗೆ ಸರ್ಕಾರಗಳೇ ದಿಕ್ಕು.<br /> <br /> ಪ್ರತಿ ವರ್ಷ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುವ ಬದಲು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರಕೃತಿ ವಿಕೋಪಗಳ ಸಂಭಾವ್ಯತೆಯನ್ನು ಮೊದಲೇ ಗ್ರಹಿಸಿ ಜನರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಸರ್ಕಾರ ಪರ್ಯಾಯ ವ್ಯವಸ್ಥೆ ರೂಪಿಸಬೇಕು.<br /> <br /> ಥೇನ್ ಚಂಡಮಾರುತದಿಂದ ಹಾನಿಗೆ ಒಳಗಾದ ಪ್ರದೇಶಗಳ ಜನರ ಆರೋಗ್ಯದ ಬಗ್ಗೆ ಸರ್ಕಾರಗಳು ಕಾಳಜಿ ವಹಿಸಬೇಕು. ಇಲ್ಲವಾದರೆ ಸಾಂಕ್ರಾಮಿಕ ರೋಗಗಳಿಂದ ಇನ್ನಷ್ಟು ಜನರು ಸಾಯುವ ಸಾಧ್ಯತೆ ಇದೆ. ಸರ್ಕಾರ ಸ್ವಯಂ ಸೇವಾ ಸಂಘಟನೆಗಳನ್ನೂ ಬಳಸಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅತಿವೃಷ್ಟಿ, ಚಂಡಮಾರುತ, ಸುನಾಮಿಯಂತಹ ಪ್ರಕೃತಿ ವಿಕೋಪಗಳು ನಮ್ಮ ದೇಶಕ್ಕೆ ಹೊಸದಲ್ಲ. ಥೇನ್ ಚಂಡಮಾರುತಕ್ಕೆ ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳ ಒಟ್ಟು ನಲವತ್ತಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. <br /> <br /> ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ನೂರಾರು ಮನೆಗಳು ಕುಸಿದಿವೆ. ಬಿರುಗಾಳಿ, ಮಳೆಗೆ ವಿದ್ಯುತ್, ನೀರು, ದೂರ ಸಂಪರ್ಕ ವ್ಯವಸ್ಥೆ ಹಾಳಾಗಿದೆ.<br /> <br /> ಶ್ರೀಕಾಕುಳಂ, ವಿಶಾಖಪಟ್ಟಣ, ಪಶ್ಚಿಮ ಗೋದಾವರಿ, ಪ್ರಕಾಶಂ, ಗುಂಟೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಸಾವಿರಾರು ರೈತರ ವರ್ಷದ ದುಡಿಮೆ ನೀರು ಪಾಲಾಗಿದೆ. ಈ ಪ್ರದೇಶಗಳೆಲ್ಲ ನೈಸರ್ಗಿಕ ವಿಕೋಪದ ಹಾವಳಿಗೆ ಹಿಂದೆ ತುತ್ತಾಗಿರುವಂಥವು. ಆದರೆ ಇವನ್ನು ಎದುರಿಸುವ ವಿಷಯದಲ್ಲಿ ಸರ್ಕಾರಗಳಿಗೆ ಸ್ಪಷ್ಟತೆ ಇಲ್ಲ.<br /> <br /> ಥೇನ್ ಚಂಡಮಾರುತದ ಬಗ್ಗೆ ಸಾಕಷ್ಟು ಮೊದಲೇ ಸುಳಿವು ಸಿಕ್ಕಿದ್ದರೂ ಸ್ಥಳೀಯ ಆಡಳಿತ ಮತ್ತು ಕಡಲತೀರದ ಜನರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಪ್ರಕೃತಿ ವಿಕೋಪಗಳನ್ನು ಎದುರಿಸಲು ಸರ್ಕಾರಗಳು ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡುತ್ತಿವೆ.<br /> <br /> ಆದರೆ ಹಿಂದಿನ ಅನುಭವಗಳಿಂದ ಪಾಠ ಕಲಿತಿಲ್ಲ. ಕಡಲ ತೀರದ ಜನರನ್ನು ಸ್ಥಳಾಂತರಿಸಿದ್ದರೆ ಪ್ರಾಣ ಹಾನಿ ತಪ್ಪಿಸಬಹುದಿತ್ತು. ಜನರಂತೆ ಸರ್ಕಾರಗಳೂ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದು ಖಂಡನೀಯ.<br /> <br /> ಥೇನ್ ದಾಳಿಗೆ ಸಿಕ್ಕಿ ಸತ್ತವರ ಕುಟುಂಬಗಳಿಗೆ ರಾಜ್ಯ ಸರ್ಕಾರಗಳು ಈಗಾಗಲೇ ಪರಿಹಾರ ಘೋಷಿಸಿವೆ. ಮನೆ, ಮಠ ಕಳೆದುಕೊಂಡವರು ಹಾಗೂ ಬೆಳೆ ಹಾನಿಗೆ ತುತ್ತಾದ ರೈತರು ಪರಿಹಾರಕ್ಕಾಗಿ ಸರ್ಕಾರದ ಕಡೆಗೆ ನೋಡುತ್ತಿದ್ದಾರೆ. ಅದು ಸಹಜ.<br /> <br /> ನಷ್ಟದ ಪ್ರಮಾಣ ಹೆಚ್ಚಾಗಿರುವುದರಿಂದ ಎಲ್ಲರಿಗೂ ಪರಿಹಾರ ಕೊಡಲು ರಾಜ್ಯ ಸರ್ಕಾರಗಳಿಂದ ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡದಿದ್ದರೆ ಪರಿಹಾರ, ಪುನರ್ವಸತಿ ಎರಡೂ ಸಾಧ್ಯವಿಲ್ಲ.<br /> <br /> ಪ್ರತಿ ವರ್ಷ ಚಂಡಮಾರುತದ ದಾಳಿಗೆ ತುತ್ತಾಗುವ ಪ್ರದೇಶಗಳ ಜನರಿಗೆ ಸೂಕ್ತ ರಕ್ಷಣೆ ಒದಗಿಸುವ ಬಗ್ಗೆ ಕೇಂದ್ರ ಹಾಗೂ ಸರ್ಕಾರಗಳು ಶಾಶ್ವತ ಯೋಜನೆ ರೂಪಿಸಬೇಕು. 2004 ಡಿಸೆಂಬರ್ನಲ್ಲಿ ಸುನಾಮಿಯಿಂದ 2.3 ಲಕ್ಷ ಜನರು ಬಲಿಯಾದರು.<br /> <br /> ಅವರಿಗೆ ಪುನರ್ವಸತಿ ಕಲ್ಪಿಸಲು ಕೋಟ್ಯಂತರ ರೂಪಾಯಿ ಖರ್ಚಾಯಿತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಎಚ್ಚರಿಕೆ ಅವಶ್ಯಕವಾಗಿತ್ತು. ಪ್ರಕೃತಿ ವಿಕೋಪಗಳ ಸಂತ್ರಸ್ತರಾಗುವವರಿಗೆ ಸರ್ಕಾರಗಳೇ ದಿಕ್ಕು.<br /> <br /> ಪ್ರತಿ ವರ್ಷ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುವ ಬದಲು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪ್ರಕೃತಿ ವಿಕೋಪಗಳ ಸಂಭಾವ್ಯತೆಯನ್ನು ಮೊದಲೇ ಗ್ರಹಿಸಿ ಜನರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಸರ್ಕಾರ ಪರ್ಯಾಯ ವ್ಯವಸ್ಥೆ ರೂಪಿಸಬೇಕು.<br /> <br /> ಥೇನ್ ಚಂಡಮಾರುತದಿಂದ ಹಾನಿಗೆ ಒಳಗಾದ ಪ್ರದೇಶಗಳ ಜನರ ಆರೋಗ್ಯದ ಬಗ್ಗೆ ಸರ್ಕಾರಗಳು ಕಾಳಜಿ ವಹಿಸಬೇಕು. ಇಲ್ಲವಾದರೆ ಸಾಂಕ್ರಾಮಿಕ ರೋಗಗಳಿಂದ ಇನ್ನಷ್ಟು ಜನರು ಸಾಯುವ ಸಾಧ್ಯತೆ ಇದೆ. ಸರ್ಕಾರ ಸ್ವಯಂ ಸೇವಾ ಸಂಘಟನೆಗಳನ್ನೂ ಬಳಸಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>