<p><strong>ಚನ್ನಪಟ್ಟಣ: </strong>ಅಪರಿಚಿತ ವ್ಯಕ್ತಿಯೊಬ್ಬ ವಿಷಕುಡಿದು ತನ್ನ ಕೈಗಳನ್ನು ಬ್ಲೇಡ್ನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆಮೊಗಳ್ಳಿ ತಂಗುದಾಣದಲ್ಲಿ ನಡೆದಿದೆ.<br /> <br /> ಆತ್ಮಹತ್ಯೆಗೆ ಯತಿಸಿರುವ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಆತನ ವಯಸ್ಸು 30ರಿಂದ 35ವರ್ಷ. ಭಾನುವಾರ ಮಧ್ಯಾಹ್ನ ತಂಗುದಾಣದಲ್ಲಿ ವಿಶ್ರಮಿಸಿಕೊಳ್ಳಲು ಹೋದವರಿಗೆ, ಈ ವ್ಯಕ್ತಿಯ ಬಾಯಲ್ಲಿ ನೊರೆ ತುಂಬಿಕೊಂಡು ಕೈಯಲ್ಲಿ ರಕ್ತ ಸೋರುತ್ತಿದ್ದದ್ದನ್ನು ಕಂಡಿದ್ದಾರೆ. <br /> <br /> ತೀವ್ರ ಅಸ್ವಸ್ಥನಾದ ಈತನನ್ನು ಜನರು ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆ ಬೆಂಗಳೂರಿನ ವಿಕ್ಟೋರಿಯ ಆಸ್ಪತೆಗೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ.<br /> <br /> ಆತ್ಮಹತ್ಯೆಗೆ ಯತ್ನಿಸಿದವನ ಜೇಬಿನಲ್ಲಿ ಡೈರಿ ದೊರೆತಿದ್ದು, ಅದರಲ್ಲಿ ಹಲಗೂರು ಭಾಗದ ಕೆಲವರ ಹೆಸರುಗಳಿವೆ. ಹೀಗಾಗಿ ಆತ ಮಳವಳ್ಳಿ ತಾಲ್ಲೂಕಿನವರೆಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> <strong>ಜೂಜು ಅಡ್ಡೆ ಮೇಲೆ ದಾಳಿ <br /> ಚನ್ನಪಟ್ಟಣ:</strong> ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಜೂಜು ಆಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಪೊಲೀಸರು ಪಣಕ್ಕಿಟ್ಟಿದ್ದ 1290ರೂ ವಶಪಡಿಸಿಕೊಂಡು 6ಮಂದಿ ಜೂಜು ಕೋರರನ್ನು ಬಂಧಿಸಿದ್ದಾರೆ.<br /> ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ಟಿ. ಸಿದ್ದಪ್ಪ ಗ್ರಾಮಾಂತರ, ವೃತ್ತ ನಿರೀಕ್ಷಕ ಸಿ.ಸಂಪತ್ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಜಯರಾಮ್ ಮತ್ತಿತರರು ದಾಳಿನಡೆಸಿದ್ದಾರೆ. <br /> <br /> ಬಂಧಿತರನ್ನು ಶಿವಣ್ಣ, ಶಿವಲಿಂಗಸ್ವಾಮಿ, ಸತೀಶ್, ದೇವರಾಜ್ ಪ್ರಕಾಶ್ ಎಂದು ಗುರುತಿಸಲಾಗಿದ್ದು ನ್ಯಾಯಾಂಗ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ: </strong>ಅಪರಿಚಿತ ವ್ಯಕ್ತಿಯೊಬ್ಬ ವಿಷಕುಡಿದು ತನ್ನ ಕೈಗಳನ್ನು ಬ್ಲೇಡ್ನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸಂತೆಮೊಗಳ್ಳಿ ತಂಗುದಾಣದಲ್ಲಿ ನಡೆದಿದೆ.<br /> <br /> ಆತ್ಮಹತ್ಯೆಗೆ ಯತಿಸಿರುವ ವ್ಯಕ್ತಿಯ ಹೆಸರು, ವಿಳಾಸ ತಿಳಿದುಬಂದಿಲ್ಲ. ಆತನ ವಯಸ್ಸು 30ರಿಂದ 35ವರ್ಷ. ಭಾನುವಾರ ಮಧ್ಯಾಹ್ನ ತಂಗುದಾಣದಲ್ಲಿ ವಿಶ್ರಮಿಸಿಕೊಳ್ಳಲು ಹೋದವರಿಗೆ, ಈ ವ್ಯಕ್ತಿಯ ಬಾಯಲ್ಲಿ ನೊರೆ ತುಂಬಿಕೊಂಡು ಕೈಯಲ್ಲಿ ರಕ್ತ ಸೋರುತ್ತಿದ್ದದ್ದನ್ನು ಕಂಡಿದ್ದಾರೆ. <br /> <br /> ತೀವ್ರ ಅಸ್ವಸ್ಥನಾದ ಈತನನ್ನು ಜನರು ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆ ಬೆಂಗಳೂರಿನ ವಿಕ್ಟೋರಿಯ ಆಸ್ಪತೆಗೆ ಕಳುಹಿಸಿದ್ದಾರೆಂದು ತಿಳಿದುಬಂದಿದೆ.<br /> <br /> ಆತ್ಮಹತ್ಯೆಗೆ ಯತ್ನಿಸಿದವನ ಜೇಬಿನಲ್ಲಿ ಡೈರಿ ದೊರೆತಿದ್ದು, ಅದರಲ್ಲಿ ಹಲಗೂರು ಭಾಗದ ಕೆಲವರ ಹೆಸರುಗಳಿವೆ. ಹೀಗಾಗಿ ಆತ ಮಳವಳ್ಳಿ ತಾಲ್ಲೂಕಿನವರೆಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> <strong>ಜೂಜು ಅಡ್ಡೆ ಮೇಲೆ ದಾಳಿ <br /> ಚನ್ನಪಟ್ಟಣ:</strong> ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಜೂಜು ಆಡುತ್ತಿದ್ದ ಗುಂಪಿನ ಮೇಲೆ ದಾಳಿ ನಡೆಸಿದ ಪೊಲೀಸರು ಪಣಕ್ಕಿಟ್ಟಿದ್ದ 1290ರೂ ವಶಪಡಿಸಿಕೊಂಡು 6ಮಂದಿ ಜೂಜು ಕೋರರನ್ನು ಬಂಧಿಸಿದ್ದಾರೆ.<br /> ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ಟಿ. ಸಿದ್ದಪ್ಪ ಗ್ರಾಮಾಂತರ, ವೃತ್ತ ನಿರೀಕ್ಷಕ ಸಿ.ಸಂಪತ್ಕುಮಾರ್ ಮಾರ್ಗದರ್ಶನದಲ್ಲಿ ಪಿಎಸ್ಐ ಜಯರಾಮ್ ಮತ್ತಿತರರು ದಾಳಿನಡೆಸಿದ್ದಾರೆ. <br /> <br /> ಬಂಧಿತರನ್ನು ಶಿವಣ್ಣ, ಶಿವಲಿಂಗಸ್ವಾಮಿ, ಸತೀಶ್, ದೇವರಾಜ್ ಪ್ರಕಾಶ್ ಎಂದು ಗುರುತಿಸಲಾಗಿದ್ದು ನ್ಯಾಯಾಂಗ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>