<p>ಚನ್ನರಾಯಪಟ್ಟಣ: ಪ್ರತಿ ವರ್ಷದಂತೆ ಶಿವರಾತ್ರಿ ಹಬ್ಬದಂದು ಪಟ್ಟಣದಲ್ಲಿ ವಿಜಯಾನಂದ ಆಶ್ರಮದಲ್ಲಿ ನಿರ್ಮಿಸಿದ್ದ ’ಮರಳು ಲಿಂಗ’ವನ್ನು ಬುಧವಾರ ಭಕ್ತರು ದರ್ಶನ ಪಡೆದರು.<br /> <br /> ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಾಧೀಶ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಆಶ್ರಮದ ಜಯದೇವಯೋಗಿ ರಾಜೇಂದ್ರ ಸ್ವಾಮೀಜಿ ಸೇರಿದಂತೆ ಹಲವರು ಮರಳು ಲಿಂಗಕ್ಕೆ ಪೂಜೆ ಸಲ್ಲಿಸಿದರು. ನಂತರ ಭಕ್ತಾಧಿಗಳು ಲಿಂಗದ ದರ್ಶನ ಪಡೆದರು. ಬಿಲ್ವಪತ್ರೆ ಅರ್ಪಿಸಿ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು. <br /> <br /> ಇಂದಿನಿಂದ 9 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಮೆರವಣಿಗೆಯಲ್ಲಿ ಕೊಂಡೊಯ್ದು ರಾಜರಾಜೇಶ್ವರಿ ಕೊಳದಲ್ಲಿ ಲಿಂಗವನ್ನು ವಿಸರ್ಜಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.<br /> <br /> ಪಟ್ಟಣದಲ್ಲಿರುವ ಆಂಜನೇಯ, ಗಣಪತಿ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಕೊಳದ ಆಂಜನೇಯಸ್ವಾಮಿ ದೇಗುಲದಲ್ಲಿ ಅನ್ನದಾನ ಏರ್ಪಡಿಸಲಾಗಿತ್ತು. <br /> <br /> ತಾಲ್ಲೂಕಿನ ವಿವಿಧ ಶಿವಾಲಯಗಳಲ್ಲಿಯೂ ಭಕ್ತರ ಮಹಾಪೂರ ಇತ್ತು. ಬೆಳಿಗ್ಗೆಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೆಲವು ದೇವಾಲಯಗಳಲ್ಲಿ ಗಂಗಾಜಲ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನರಾಯಪಟ್ಟಣ: ಪ್ರತಿ ವರ್ಷದಂತೆ ಶಿವರಾತ್ರಿ ಹಬ್ಬದಂದು ಪಟ್ಟಣದಲ್ಲಿ ವಿಜಯಾನಂದ ಆಶ್ರಮದಲ್ಲಿ ನಿರ್ಮಿಸಿದ್ದ ’ಮರಳು ಲಿಂಗ’ವನ್ನು ಬುಧವಾರ ಭಕ್ತರು ದರ್ಶನ ಪಡೆದರು.<br /> <br /> ನೊಣವಿನಕೆರೆಯ ಕಾಡಸಿದ್ದೇಶ್ವರ ಮಠಾಧೀಶ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ, ಆಶ್ರಮದ ಜಯದೇವಯೋಗಿ ರಾಜೇಂದ್ರ ಸ್ವಾಮೀಜಿ ಸೇರಿದಂತೆ ಹಲವರು ಮರಳು ಲಿಂಗಕ್ಕೆ ಪೂಜೆ ಸಲ್ಲಿಸಿದರು. ನಂತರ ಭಕ್ತಾಧಿಗಳು ಲಿಂಗದ ದರ್ಶನ ಪಡೆದರು. ಬಿಲ್ವಪತ್ರೆ ಅರ್ಪಿಸಿ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು. <br /> <br /> ಇಂದಿನಿಂದ 9 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ನಂತರ ಮೆರವಣಿಗೆಯಲ್ಲಿ ಕೊಂಡೊಯ್ದು ರಾಜರಾಜೇಶ್ವರಿ ಕೊಳದಲ್ಲಿ ಲಿಂಗವನ್ನು ವಿಸರ್ಜಿಸಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.<br /> <br /> ಪಟ್ಟಣದಲ್ಲಿರುವ ಆಂಜನೇಯ, ಗಣಪತಿ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ಕೊಳದ ಆಂಜನೇಯಸ್ವಾಮಿ ದೇಗುಲದಲ್ಲಿ ಅನ್ನದಾನ ಏರ್ಪಡಿಸಲಾಗಿತ್ತು. <br /> <br /> ತಾಲ್ಲೂಕಿನ ವಿವಿಧ ಶಿವಾಲಯಗಳಲ್ಲಿಯೂ ಭಕ್ತರ ಮಹಾಪೂರ ಇತ್ತು. ಬೆಳಿಗ್ಗೆಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿತ್ತು. ಕೆಲವು ದೇವಾಲಯಗಳಲ್ಲಿ ಗಂಗಾಜಲ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>