<p><strong>ಬೆಂಗಳೂರು: </strong>‘ನನ್ನ ವಿರುದ್ಧ ಯಾವುದೇ ಹಗರಣಗಳ ಬಗ್ಗೆ ದಾಖಲೆಗಳಿದ್ದರೂ ಅವೆಲ್ಲವನ್ನೂ ವಿಧಾನಮಂಡಲದಲ್ಲಿ ಮುಕ್ತವಾಗಿ ಚರ್ಚಿಸಿ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಪಕ್ಷದ ನಾಯಕರಿಗೆ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. <br /> <br /> ‘ಕಳೆದ ಅಧಿವೇಶನ ಕೂಡ ಯಾವುದೇ ಚರ್ಚೆ ಇಲ್ಲದೆ ಮುಗಿಯಿತು. ಆ ರೀತಿ ಆಗುವುದು ಬೇಡ. ಯಾವುದೇ ದಾಖಲೆಗಳಿದ್ದರೂ ಅವೆಲ್ಲವನ್ನೂ ತಂದು ಚರ್ಚಿಸಿ. ಬದಲಿಗೆ, ಬರೇ ಗಲಾಟೆ ಬೇಡ’ ಎಂದು ಹೇಳಿದರು.<br /> <br /> ‘ಸೇಡಿನ ರಾಜಕಾರಣ ಬೇಡ ಎನ್ನುವ ಕಾರಣಕ್ಕೆ ನಾನು ಇದುವರೆಗೂ ಸುಮ್ಮನಿದ್ದೆ. ಇದನ್ನೇ ಅಪ್ಪ-ಮಕ್ಕಳು (ಎಚ್.ಡಿ.ದೇವೇಗೌಡ ಮತ್ತು ಮಕ್ಕಳು) ನನ್ನ ದೌರ್ಬಲ್ಯ ಅಂದುಕೊಂಡಿದ್ದಾರೆ. ನನ್ನ ಬಳಿಯೂ ಅವರ ವಿರುದ್ಧದ ನೂರಾರು ದಾಖಲೆಗಳಿವೆ. ಅವೆಲ್ಲವನ್ನೂ ನಾನು ಸದನದಲ್ಲಿ ಪ್ರಸ್ತಾಪಿಸುತ್ತೇನೆ’ ಎಂದು ನುಡಿದರು.<br /> <br /> ‘ಹಗರಣಗಳ ಕುರಿತು ಸಾರ್ವಜನಿಕ ಚರ್ಚೆಗೆ ಬನ್ನಿ ಎಂದಿದ್ದೆ. ಈಗ ಹೋಗಲಿ ಸದನದಲ್ಲೇ ಸರಿಯಾಗಿ ಚರ್ಚೆ ಮಾಡಲಿ ಎಂದು ಮತ್ತೊಮ್ಮೆ ಆಹ್ವಾನ ನೀಡುತ್ತಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನನ್ನ ವಿರುದ್ಧ ಯಾವುದೇ ಹಗರಣಗಳ ಬಗ್ಗೆ ದಾಖಲೆಗಳಿದ್ದರೂ ಅವೆಲ್ಲವನ್ನೂ ವಿಧಾನಮಂಡಲದಲ್ಲಿ ಮುಕ್ತವಾಗಿ ಚರ್ಚಿಸಿ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಪಕ್ಷದ ನಾಯಕರಿಗೆ ಮತ್ತೊಮ್ಮೆ ಆಹ್ವಾನ ನೀಡಿದ್ದಾರೆ. <br /> <br /> ‘ಕಳೆದ ಅಧಿವೇಶನ ಕೂಡ ಯಾವುದೇ ಚರ್ಚೆ ಇಲ್ಲದೆ ಮುಗಿಯಿತು. ಆ ರೀತಿ ಆಗುವುದು ಬೇಡ. ಯಾವುದೇ ದಾಖಲೆಗಳಿದ್ದರೂ ಅವೆಲ್ಲವನ್ನೂ ತಂದು ಚರ್ಚಿಸಿ. ಬದಲಿಗೆ, ಬರೇ ಗಲಾಟೆ ಬೇಡ’ ಎಂದು ಹೇಳಿದರು.<br /> <br /> ‘ಸೇಡಿನ ರಾಜಕಾರಣ ಬೇಡ ಎನ್ನುವ ಕಾರಣಕ್ಕೆ ನಾನು ಇದುವರೆಗೂ ಸುಮ್ಮನಿದ್ದೆ. ಇದನ್ನೇ ಅಪ್ಪ-ಮಕ್ಕಳು (ಎಚ್.ಡಿ.ದೇವೇಗೌಡ ಮತ್ತು ಮಕ್ಕಳು) ನನ್ನ ದೌರ್ಬಲ್ಯ ಅಂದುಕೊಂಡಿದ್ದಾರೆ. ನನ್ನ ಬಳಿಯೂ ಅವರ ವಿರುದ್ಧದ ನೂರಾರು ದಾಖಲೆಗಳಿವೆ. ಅವೆಲ್ಲವನ್ನೂ ನಾನು ಸದನದಲ್ಲಿ ಪ್ರಸ್ತಾಪಿಸುತ್ತೇನೆ’ ಎಂದು ನುಡಿದರು.<br /> <br /> ‘ಹಗರಣಗಳ ಕುರಿತು ಸಾರ್ವಜನಿಕ ಚರ್ಚೆಗೆ ಬನ್ನಿ ಎಂದಿದ್ದೆ. ಈಗ ಹೋಗಲಿ ಸದನದಲ್ಲೇ ಸರಿಯಾಗಿ ಚರ್ಚೆ ಮಾಡಲಿ ಎಂದು ಮತ್ತೊಮ್ಮೆ ಆಹ್ವಾನ ನೀಡುತ್ತಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>