<p><strong>ಬೆಂಗಳೂರು: </strong>ಪರ್ಯಾಯ ಕಾರ್ಮಿಕ ಒಕ್ಕೂಟಕ್ಕೆ ಮಾನ್ಯತೆ ನೀಡುವುದನ್ನು ವಿರೋಧಿಸಿ ಚಲನಚಿತ್ರ ಕಾರ್ಮಿಕರ, ತಂತ್ರಜ್ಞರ, ಕಲಾವಿದರ ಒಕ್ಕೂಟವು ಚಿತ್ರೀಕರಣ ಚಟುವಟಿಕೆಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಬಂದ್ ನಡೆಸಲು ತೀರ್ಮಾನಿಸಿದೆ.<br /> <br /> ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡಬಾರದು ಎಂದು ಒತ್ತಾಯಿಸಿ ಅಶೋಕ್ ನೇತೃತ್ವದ ಒಕ್ಕೂಟವು ಚಲನಚಿತ್ರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿದೆ.<br /> <br /> ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡಬಾರದು ಎಂದು ಆಗ್ರಹಿಸಿ ಅಶೋಕ್ ನೇತೃತ್ವದ ಒಕ್ಕೂಟದ ಕಾರ್ಮಿಕರು ಸೋಮವಾರ ಎಲ್ಲಾ ಚಿತ್ರಗಳ ಚಿತ್ರೀಕರಣ ಕಾರ್ಯ ಸ್ಥಗಿತಗೊಳಿಸಿ ಗಾಂಧಿನಗರದಿಂದ ಚಲನಚಿತ್ರ ವಾಣಿಜ್ಯ ಮಂಡಳಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ನಿರ್ಮಾಪಕರು ತಮ್ಮ ಸಿನಿಮಾಗಳ ಕೆಲಸಕ್ಕೆ ಯಾವುದೇ ಒಕ್ಕೂಟದ ಸದಸ್ಯರನ್ನಾದರೂ ಬಳಸಿಕೊಳ್ಳಬಹುದು. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂಬ ನಿರ್ಣಯ ತೆಗೆದುಕೊಳ್ಳಲಾಯಿತು. ಈ ನಿರ್ಣಯಕ್ಕೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಪರ್ಯಾಯ ಒಕ್ಕೂಟ ರಚನೆಗೆ ಬೆಂಬಲ ನೀಡುತ್ತಿರುವ ಕೆಲ ನಿರ್ಮಾಪಕರು ಅವಾಚ್ಯ ಶಬ್ದಗಳಿಂದ ತಮ್ಮನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾನಿರತರು ನಿರ್ಮಾಪಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ವಾಣಿಜ್ಯ ಮಂಡಳಿಯ ಎದುರು ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.<br /> <br /> ನೃತ್ಯ ನಿರ್ದೇಶಕ ರಾಜೇಶ್ ಬ್ರಹ್ಮಾವರ್ ನೇತೃತ್ವದಲ್ಲಿ ರಚನೆಯಾಗಿರುವ ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಚಲನಚಿತ್ರ ವಾಣಿಜ್ಯ ಮಂಡಳಿ ಸೋಮವಾರ ಸಭೆ ಕರೆದಿತ್ತು. ಈ ಸಭೆಯಲ್ಲಿ ಒಕ್ಕೂಟಕ್ಕೆ ಮಾನ್ಯತೆ ನೀಡುವುದು ಖಚಿತ ಎಂಬ ವದಂತಿ ಹಬ್ಬಿತ್ತು. ಹೀಗಾಗಿ ಕಾರ್ಮಿಕರ ಒಕ್ಕೂಟದ ಸದಸ್ಯರು ಪ್ರತಿಭಟನೆಗೆ ಮುಂದಾದರು.<br /> <br /> <strong>‘ನಟರು ಮಾತನಾಡುತ್ತಿಲ್ಲ’</strong><br /> ಇಪ್ಪತ್ತೈದು ವರ್ಷದ ಚಿತ್ರರಂಗದ ಬದುಕಿನಲ್ಲಿ ಮೊದಲ ಬಾರಿಗೆ ಇಂಥ ಕಹಿ ಅನುಭವ ಉಂಟಾಗಿದೆ. ಕೆಲವೇ ನಿರ್ಮಾಪಕರ ಹಿತಾಸಕ್ತಿಗಾಗಿ ಚಿತ್ರರಂಗದಲ್ಲಿ ಒಡಕು ಮೂಡಿಸಲಾಗುತ್ತಿದೆ. ಇಷ್ಟೆಲ್ಲಾ ನಡೆದರೂ ಚಿತ್ರರಂಗದ ಯಾವ ಹಿರಿಯ ನಿರ್ಮಾಪಕರೂ, ನಟರೂ ಬಹಿರಂಗವಾಗಿ ಕಾರ್ಮಿಕರ ಪರವಾಗಿ ಮಾತನಾಡುತ್ತಿಲ್ಲ ಎಂಬ ಬಗ್ಗೆ ನೋವಾಗುತ್ತಿದೆ.<br /> – ಅಶೋಕ್, ಚಲನಚಿತ್ರ ಕಾರ್ಮಿಕ ಒಕ್ಕೂಟದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರ್ಯಾಯ ಕಾರ್ಮಿಕ ಒಕ್ಕೂಟಕ್ಕೆ ಮಾನ್ಯತೆ ನೀಡುವುದನ್ನು ವಿರೋಧಿಸಿ ಚಲನಚಿತ್ರ ಕಾರ್ಮಿಕರ, ತಂತ್ರಜ್ಞರ, ಕಲಾವಿದರ ಒಕ್ಕೂಟವು ಚಿತ್ರೀಕರಣ ಚಟುವಟಿಕೆಗಳನ್ನು ಬಹಿಷ್ಕರಿಸಿ ಅನಿರ್ದಿಷ್ಟಾವಧಿ ಬಂದ್ ನಡೆಸಲು ತೀರ್ಮಾನಿಸಿದೆ.<br /> <br /> ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡಬಾರದು ಎಂದು ಒತ್ತಾಯಿಸಿ ಅಶೋಕ್ ನೇತೃತ್ವದ ಒಕ್ಕೂಟವು ಚಲನಚಿತ್ರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗೆ ಮುಂದಾಗಿದೆ.<br /> <br /> ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡಬಾರದು ಎಂದು ಆಗ್ರಹಿಸಿ ಅಶೋಕ್ ನೇತೃತ್ವದ ಒಕ್ಕೂಟದ ಕಾರ್ಮಿಕರು ಸೋಮವಾರ ಎಲ್ಲಾ ಚಿತ್ರಗಳ ಚಿತ್ರೀಕರಣ ಕಾರ್ಯ ಸ್ಥಗಿತಗೊಳಿಸಿ ಗಾಂಧಿನಗರದಿಂದ ಚಲನಚಿತ್ರ ವಾಣಿಜ್ಯ ಮಂಡಳಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ನಿರ್ಮಾಪಕರು ತಮ್ಮ ಸಿನಿಮಾಗಳ ಕೆಲಸಕ್ಕೆ ಯಾವುದೇ ಒಕ್ಕೂಟದ ಸದಸ್ಯರನ್ನಾದರೂ ಬಳಸಿಕೊಳ್ಳಬಹುದು. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂಬ ನಿರ್ಣಯ ತೆಗೆದುಕೊಳ್ಳಲಾಯಿತು. ಈ ನಿರ್ಣಯಕ್ಕೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಪರ್ಯಾಯ ಒಕ್ಕೂಟ ರಚನೆಗೆ ಬೆಂಬಲ ನೀಡುತ್ತಿರುವ ಕೆಲ ನಿರ್ಮಾಪಕರು ಅವಾಚ್ಯ ಶಬ್ದಗಳಿಂದ ತಮ್ಮನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾನಿರತರು ನಿರ್ಮಾಪಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ವಾಣಿಜ್ಯ ಮಂಡಳಿಯ ಎದುರು ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.<br /> <br /> ನೃತ್ಯ ನಿರ್ದೇಶಕ ರಾಜೇಶ್ ಬ್ರಹ್ಮಾವರ್ ನೇತೃತ್ವದಲ್ಲಿ ರಚನೆಯಾಗಿರುವ ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಚಲನಚಿತ್ರ ವಾಣಿಜ್ಯ ಮಂಡಳಿ ಸೋಮವಾರ ಸಭೆ ಕರೆದಿತ್ತು. ಈ ಸಭೆಯಲ್ಲಿ ಒಕ್ಕೂಟಕ್ಕೆ ಮಾನ್ಯತೆ ನೀಡುವುದು ಖಚಿತ ಎಂಬ ವದಂತಿ ಹಬ್ಬಿತ್ತು. ಹೀಗಾಗಿ ಕಾರ್ಮಿಕರ ಒಕ್ಕೂಟದ ಸದಸ್ಯರು ಪ್ರತಿಭಟನೆಗೆ ಮುಂದಾದರು.<br /> <br /> <strong>‘ನಟರು ಮಾತನಾಡುತ್ತಿಲ್ಲ’</strong><br /> ಇಪ್ಪತ್ತೈದು ವರ್ಷದ ಚಿತ್ರರಂಗದ ಬದುಕಿನಲ್ಲಿ ಮೊದಲ ಬಾರಿಗೆ ಇಂಥ ಕಹಿ ಅನುಭವ ಉಂಟಾಗಿದೆ. ಕೆಲವೇ ನಿರ್ಮಾಪಕರ ಹಿತಾಸಕ್ತಿಗಾಗಿ ಚಿತ್ರರಂಗದಲ್ಲಿ ಒಡಕು ಮೂಡಿಸಲಾಗುತ್ತಿದೆ. ಇಷ್ಟೆಲ್ಲಾ ನಡೆದರೂ ಚಿತ್ರರಂಗದ ಯಾವ ಹಿರಿಯ ನಿರ್ಮಾಪಕರೂ, ನಟರೂ ಬಹಿರಂಗವಾಗಿ ಕಾರ್ಮಿಕರ ಪರವಾಗಿ ಮಾತನಾಡುತ್ತಿಲ್ಲ ಎಂಬ ಬಗ್ಗೆ ನೋವಾಗುತ್ತಿದೆ.<br /> – ಅಶೋಕ್, ಚಲನಚಿತ್ರ ಕಾರ್ಮಿಕ ಒಕ್ಕೂಟದ ಅಧ್ಯಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>