<p>ನಿಜಾಮಾಬಾದ್ (ಪಿಟಿಐ): ಭ್ರಷ್ಟಾಚಾರದ ಆರೋಪಗಳಿಗೆ ಸಿಲುಕಿರುವ ಸರ್ಕಾರವನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ನಾಯಕ ಅನಂತಕುಮಾರ್ ಹೇಳಿದ್ದಾರೆ.<br /> <br /> ಸರ್ಕಾರ ಆರೋಪಿ ಸ್ಥಾನದಲ್ಲಿ ನಿಂತಿದೆ. ಮುಂಬರುವ ಚಳಿಗಾಲದ ಅಧಿವೇಶನ ಭಾರಿ ಕೋಲಾಹಲಕ್ಕೆ ಸಾಕ್ಷಿಯಾಗಲಿದೆ ಎಂದು ಎಲ್.ಕೆ.ಅಡ್ವಾಣಿ ಅವರ ಜನಚೇತನ ಯಾತ್ರೆಯ ಸಂಚಾಲಕರೂ ಆದ ಅನಂತಕುಮಾರ್ ಸ್ಪಷ್ಟಪಡಿಸಿದರು.<br /> <br /> ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹವಣಿಸುತ್ತಿದೆ. ಮಹಾಲೇಖಪಾಲರನ್ನೂ ದೂಷಿಸುತ್ತಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಯೊಂದಿಗೂ ಸರ್ಕಾರ ಸಹಕರಿಸುತ್ತಿಲ್ಲ. ಸುಪ್ರೀಂಕೋರ್ಟ್ ತಮ್ಮ ಕಾರ್ಯವೈಖರಿ ಮೇಲೆ ನಿಗಾ ಇಟ್ಟಿರುವುದನ್ನೂ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು.<br /> <br /> ಅಡ್ವಾಣಿ ಭ್ರಷ್ಟಾಚಾರದ ವಿರುದ್ಧ ದೇಶವ್ಯಾಪಿ ದೊಡ್ಡ ಯಾತ್ರೆ ನಡೆಸುತ್ತಿದ್ದರೂ ಕಾಂಗ್ರೆಸ್ ಮೌನವಾಗಿದೆ. ಎನ್ಡಿಎ ಆಡಳಿತ ನಡೆಸಿದಾಗ ಯಾವ ಹಗರಣವೂ ನಡೆಯದಿರುವುದೇ ಆ ಪಕ್ಷ ಸುಮ್ಮನಿರಲು ಕಾರಣ ಎಂದು ವಿವರಿಸಿದರು.<br /> <br /> 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಯುಪಿಎ ಸರ್ಕಾರದ ಬಳಿ ಯಾವ ಉತ್ತರವೂ ಇಲ್ಲ ಎಂದು ಪ್ರಹಾರ ಮಾಡಿದರು.<br /> <br /> ಚಳಿಗಾಲದ ಅಧಿವೇಶನವನ್ನು ಗಮನದಲ್ಲಿ ಇರಿಸಿಕೊಂಡೇ ಜನಚೇತನ ಯಾತ್ರೆ ನಡೆಸಲು ತೀರ್ಮಾನಿಸಲಾಯಿತು. ಬಹುಶಃ ನ.21ರಂದು ಚಳಿಗಾಲದ ಅಧಿವೇಶನ ಆರಂಭವಾಗಬಹುದು. ಹೀಗಾಗಿ ಹಬ್ಬ ಹಾಗೂ ಇನ್ನಿತರ ಕೆಲವು ವಿಶೇಷ ದಿನಗಳನ್ನು ಹೊರತುಪಡಿಸಿದರೆ ನಮಗೆ ಯಾತ್ರೆ ನಡೆಸಲು ನಮಗೆ ಲಭ್ಯವಿದ್ದುದು 38 ದಿನಗಳು ಮಾತ್ರ. <br /> <br /> ಇಷ್ಟು ದಿನಗಳಲ್ಲಿ ಇಡೀ ರಾಷ್ಟ್ರದಾದ್ಯಂತ ಯಾತ್ರೆ ನಡೆಸಲು ಆಗದು. ಹೀಗಾಗಿ ಕೆಲವು ರಾಜ್ಯಗಳಲ್ಲಿ ಯಾತ್ರೆಗೆ ಹೆಚ್ಚು ಸಮಯ ನಿಗದಿ ಮಾಡಲು ಸಾಧ್ಯವಾಗಿಲ್ಲ ಎಂದು ಅನಂತಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಿಜಾಮಾಬಾದ್ (ಪಿಟಿಐ): ಭ್ರಷ್ಟಾಚಾರದ ಆರೋಪಗಳಿಗೆ ಸಿಲುಕಿರುವ ಸರ್ಕಾರವನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ನಾಯಕ ಅನಂತಕುಮಾರ್ ಹೇಳಿದ್ದಾರೆ.<br /> <br /> ಸರ್ಕಾರ ಆರೋಪಿ ಸ್ಥಾನದಲ್ಲಿ ನಿಂತಿದೆ. ಮುಂಬರುವ ಚಳಿಗಾಲದ ಅಧಿವೇಶನ ಭಾರಿ ಕೋಲಾಹಲಕ್ಕೆ ಸಾಕ್ಷಿಯಾಗಲಿದೆ ಎಂದು ಎಲ್.ಕೆ.ಅಡ್ವಾಣಿ ಅವರ ಜನಚೇತನ ಯಾತ್ರೆಯ ಸಂಚಾಲಕರೂ ಆದ ಅನಂತಕುಮಾರ್ ಸ್ಪಷ್ಟಪಡಿಸಿದರು.<br /> <br /> ಮಾಹಿತಿ ಹಕ್ಕು ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹವಣಿಸುತ್ತಿದೆ. ಮಹಾಲೇಖಪಾಲರನ್ನೂ ದೂಷಿಸುತ್ತಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿಯೊಂದಿಗೂ ಸರ್ಕಾರ ಸಹಕರಿಸುತ್ತಿಲ್ಲ. ಸುಪ್ರೀಂಕೋರ್ಟ್ ತಮ್ಮ ಕಾರ್ಯವೈಖರಿ ಮೇಲೆ ನಿಗಾ ಇಟ್ಟಿರುವುದನ್ನೂ ಸರ್ಕಾರಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಟೀಕಾಸ್ತ್ರ ಪ್ರಯೋಗಿಸಿದರು.<br /> <br /> ಅಡ್ವಾಣಿ ಭ್ರಷ್ಟಾಚಾರದ ವಿರುದ್ಧ ದೇಶವ್ಯಾಪಿ ದೊಡ್ಡ ಯಾತ್ರೆ ನಡೆಸುತ್ತಿದ್ದರೂ ಕಾಂಗ್ರೆಸ್ ಮೌನವಾಗಿದೆ. ಎನ್ಡಿಎ ಆಡಳಿತ ನಡೆಸಿದಾಗ ಯಾವ ಹಗರಣವೂ ನಡೆಯದಿರುವುದೇ ಆ ಪಕ್ಷ ಸುಮ್ಮನಿರಲು ಕಾರಣ ಎಂದು ವಿವರಿಸಿದರು.<br /> <br /> 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಯುಪಿಎ ಸರ್ಕಾರದ ಬಳಿ ಯಾವ ಉತ್ತರವೂ ಇಲ್ಲ ಎಂದು ಪ್ರಹಾರ ಮಾಡಿದರು.<br /> <br /> ಚಳಿಗಾಲದ ಅಧಿವೇಶನವನ್ನು ಗಮನದಲ್ಲಿ ಇರಿಸಿಕೊಂಡೇ ಜನಚೇತನ ಯಾತ್ರೆ ನಡೆಸಲು ತೀರ್ಮಾನಿಸಲಾಯಿತು. ಬಹುಶಃ ನ.21ರಂದು ಚಳಿಗಾಲದ ಅಧಿವೇಶನ ಆರಂಭವಾಗಬಹುದು. ಹೀಗಾಗಿ ಹಬ್ಬ ಹಾಗೂ ಇನ್ನಿತರ ಕೆಲವು ವಿಶೇಷ ದಿನಗಳನ್ನು ಹೊರತುಪಡಿಸಿದರೆ ನಮಗೆ ಯಾತ್ರೆ ನಡೆಸಲು ನಮಗೆ ಲಭ್ಯವಿದ್ದುದು 38 ದಿನಗಳು ಮಾತ್ರ. <br /> <br /> ಇಷ್ಟು ದಿನಗಳಲ್ಲಿ ಇಡೀ ರಾಷ್ಟ್ರದಾದ್ಯಂತ ಯಾತ್ರೆ ನಡೆಸಲು ಆಗದು. ಹೀಗಾಗಿ ಕೆಲವು ರಾಜ್ಯಗಳಲ್ಲಿ ಯಾತ್ರೆಗೆ ಹೆಚ್ಚು ಸಮಯ ನಿಗದಿ ಮಾಡಲು ಸಾಧ್ಯವಾಗಿಲ್ಲ ಎಂದು ಅನಂತಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>