<p>ಹೈದರಾಬಾದ್/ಜೈಪುರ/ ಭುವನೇಶ್ವರ (ಪಿಟಿಐ/ಐಎಎನ್ಎಸ್): ಸಾಮಾನ್ಯವಾಗಿ ಉರಿ ಬಿಸಿಲಿಗೆ ಹೆಸರಾದ ಆಂಧ್ರಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಬೀಸುತ್ತಿರುವ ತೀವ್ರ ಚಳಿಗಾಳಿಯಿಂದಾಗಿ 15 ಮಂದಿ ಮೃತಪಟ್ಟಿದ್ದಾರೆ. <br /> <br /> ಕರೀಂನಗರ ಜಿಲ್ಲೆಯಲ್ಲಿ 5 ಮಂದಿ, ವಿಶಾಖಪಟ್ಟಣ ಹಾಗೂ ಗುಂಟೂರು ಜಿಲ್ಲೆಗಳಲ್ಲಿ ತಲಾ 4 ಮಂದಿ, ನಲಗೊಂಡ ಹಾಗೂ ವಾರಂಗಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ವೃದ್ಧರು ಹಾಗೂ ಭಿಕ್ಷುಕರೇ ಹೆಚ್ಚು ಎಂದು ಸ್ಥಳೀಯರು ತಿಳಿಸಿದ್ದಾರೆ.<br /> <br /> ರಾಜ್ಯದ 23 ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನದಲ್ಲಿ 3 ರಿಂದ 9 ಡಿಗ್ರಿಯಷ್ಟು ಕುಸಿತ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶೂನ್ಯಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ ಎಂದು ಹೇಳಲಾಗಿದ್ದರೂ ಹವಾಮಾನ ಇಲಾಖೆ ಇದನ್ನು ಖಚಿತಪಡಿಸಿಲ್ಲ.<br /> <br /> ರಾಜ್ಯದಲ್ಲಿ ತೀವ್ರ ರೀತಿಯಲ್ಲಿ ತಾಪಮಾನ ಕುಸಿತ ಉಂಟಾಗಿರುವುದು ಆಶ್ಚರ್ಯಕ್ಕೆ ಎಡೆಮಾಡಿದೆ. ಹಿಮಾಲಯದಿಂದ ಶೀತಗಾಳಿ ಬೀಸುತ್ತಿರುವುದು ತಾಪಮಾನ ಕುಸಿತಕ್ಕೆ ಕಾರಣ ಎಂದು ವಿಶಾಖಪಟ್ಟಣದ ಚಂಡಮಾರುತ ಮುನ್ಸೂಚನಾ ಕೇಂದ್ರ ತಿಳಿಸಿದೆ. ಗುರುವಾರದವರೆಗೂ ಇದೇ ಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.<br /> <br /> ಆದಿಲಾಬಾದ್ ಜಿಲ್ಲೆಯಲ್ಲಿ ರಾತ್ರಿ ತಾಪಮಾನವು 5 ಡಿಗ್ರಿಗಿಂತ ಕಡಿಮೆ ದಾಖಲಾಗಿದ್ದರೆ, ಇದೇ ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿ ಶತಮಾನದ್ಲ್ಲಲೇ ಕಡಿಮೆ ತಾಪಮಾನವಾದ 4.2 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಇದೇ ರೀತಿ ಕರಾವಳಿ ಜಿಲ್ಲೆಯಾದ ಶ್ರೀಕಾಕುಳಂನಲ್ಲಿ ದಶಕದಲ್ಲೇ ಅತಿ ಕಡಿಮೆ ತಾಪಮಾನವಾದ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. <br /> <br /> ತೀವ್ರ ಚಳಿಯನ್ನು ತಾಳಲಾರದೆ ಮನೆಯಲ್ಲಿ ಸಣ್ಣಗೆ ಬೆಂಕಿ ಹೊತ್ತಿಸಿ ಬೆಚ್ಚಗೆ ಮಲಗಿದ್ದವರಲ್ಲಿ 70 ವರ್ಷದ ವೃದ್ಧರೊಬ್ಬರು ಉಸಿರುಗಟ್ಟಿ ಮೃತಪಟ್ಟು ಕುಟುಂಬದ ಇತರ 6 ಮಂದಿ ಅಸ್ವಸ್ಥಗೊಂಡ ಘಟನೆ ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ನಡೆದಿದೆ. <br /> <br /> ಬೆಳಿಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಬಾಗಿಲನ್ನು ಮುರಿದು ಕೋಣೆಯೊಳಕ್ಕೆ ಪ್ರವೇಶಿಸಿ ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿದರು. ಕಂದಮಾಲ್ ಜಿಲ್ಲೆಯ ತಾಪಮಾನವು ಮೂರು ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ದಾಖಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೈದರಾಬಾದ್/ಜೈಪುರ/ ಭುವನೇಶ್ವರ (ಪಿಟಿಐ/ಐಎಎನ್ಎಸ್): ಸಾಮಾನ್ಯವಾಗಿ ಉರಿ ಬಿಸಿಲಿಗೆ ಹೆಸರಾದ ಆಂಧ್ರಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಬೀಸುತ್ತಿರುವ ತೀವ್ರ ಚಳಿಗಾಳಿಯಿಂದಾಗಿ 15 ಮಂದಿ ಮೃತಪಟ್ಟಿದ್ದಾರೆ. <br /> <br /> ಕರೀಂನಗರ ಜಿಲ್ಲೆಯಲ್ಲಿ 5 ಮಂದಿ, ವಿಶಾಖಪಟ್ಟಣ ಹಾಗೂ ಗುಂಟೂರು ಜಿಲ್ಲೆಗಳಲ್ಲಿ ತಲಾ 4 ಮಂದಿ, ನಲಗೊಂಡ ಹಾಗೂ ವಾರಂಗಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ವೃದ್ಧರು ಹಾಗೂ ಭಿಕ್ಷುಕರೇ ಹೆಚ್ಚು ಎಂದು ಸ್ಥಳೀಯರು ತಿಳಿಸಿದ್ದಾರೆ.<br /> <br /> ರಾಜ್ಯದ 23 ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನದಲ್ಲಿ 3 ರಿಂದ 9 ಡಿಗ್ರಿಯಷ್ಟು ಕುಸಿತ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ. ವಿಶಾಖಪಟ್ಟಣದಲ್ಲಿ ಶೂನ್ಯಕ್ಕಿಂತ ಕಡಿಮೆ ಉಷ್ಣಾಂಶ ದಾಖಲಾಗಿದೆ ಎಂದು ಹೇಳಲಾಗಿದ್ದರೂ ಹವಾಮಾನ ಇಲಾಖೆ ಇದನ್ನು ಖಚಿತಪಡಿಸಿಲ್ಲ.<br /> <br /> ರಾಜ್ಯದಲ್ಲಿ ತೀವ್ರ ರೀತಿಯಲ್ಲಿ ತಾಪಮಾನ ಕುಸಿತ ಉಂಟಾಗಿರುವುದು ಆಶ್ಚರ್ಯಕ್ಕೆ ಎಡೆಮಾಡಿದೆ. ಹಿಮಾಲಯದಿಂದ ಶೀತಗಾಳಿ ಬೀಸುತ್ತಿರುವುದು ತಾಪಮಾನ ಕುಸಿತಕ್ಕೆ ಕಾರಣ ಎಂದು ವಿಶಾಖಪಟ್ಟಣದ ಚಂಡಮಾರುತ ಮುನ್ಸೂಚನಾ ಕೇಂದ್ರ ತಿಳಿಸಿದೆ. ಗುರುವಾರದವರೆಗೂ ಇದೇ ಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.<br /> <br /> ಆದಿಲಾಬಾದ್ ಜಿಲ್ಲೆಯಲ್ಲಿ ರಾತ್ರಿ ತಾಪಮಾನವು 5 ಡಿಗ್ರಿಗಿಂತ ಕಡಿಮೆ ದಾಖಲಾಗಿದ್ದರೆ, ಇದೇ ಜಿಲ್ಲೆಯ ಮಹಾರಾಷ್ಟ್ರದ ಗಡಿಯಲ್ಲಿ ಶತಮಾನದ್ಲ್ಲಲೇ ಕಡಿಮೆ ತಾಪಮಾನವಾದ 4.2 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ಇದೇ ರೀತಿ ಕರಾವಳಿ ಜಿಲ್ಲೆಯಾದ ಶ್ರೀಕಾಕುಳಂನಲ್ಲಿ ದಶಕದಲ್ಲೇ ಅತಿ ಕಡಿಮೆ ತಾಪಮಾನವಾದ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. <br /> <br /> ತೀವ್ರ ಚಳಿಯನ್ನು ತಾಳಲಾರದೆ ಮನೆಯಲ್ಲಿ ಸಣ್ಣಗೆ ಬೆಂಕಿ ಹೊತ್ತಿಸಿ ಬೆಚ್ಚಗೆ ಮಲಗಿದ್ದವರಲ್ಲಿ 70 ವರ್ಷದ ವೃದ್ಧರೊಬ್ಬರು ಉಸಿರುಗಟ್ಟಿ ಮೃತಪಟ್ಟು ಕುಟುಂಬದ ಇತರ 6 ಮಂದಿ ಅಸ್ವಸ್ಥಗೊಂಡ ಘಟನೆ ಒಡಿಶಾದ ಕಂದಮಾಲ್ ಜಿಲ್ಲೆಯಲ್ಲಿ ನಡೆದಿದೆ. <br /> <br /> ಬೆಳಿಗ್ಗೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಬಾಗಿಲನ್ನು ಮುರಿದು ಕೋಣೆಯೊಳಕ್ಕೆ ಪ್ರವೇಶಿಸಿ ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ಸೇರಿಸಿದರು. ಕಂದಮಾಲ್ ಜಿಲ್ಲೆಯ ತಾಪಮಾನವು ಮೂರು ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ದಾಖಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>