<p>ಚೆನ್ನೈ: ಲೀಗ್ ಹಾಗೂ ಸೆಮಿಫೈನಲ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ತೋರಿ ಭರವಸೆ ಮೂಡಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಫೈನಲ್ನಲ್ಲಿ ಎಡವಿ ಬಿದ್ದಿದೆ. ಕಡಿಮೆ ಮೊತ್ತದ ಗುರಿ ಮುಟ್ಟಲೂ ಈ ತಂಡಕ್ಕೆ ಸಾಧ್ಯವಾಗಲಿಲ್ಲ. <br /> <br /> ಆದರೆ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಸಂಭ್ರಮದ ಹೊನಲು ಹರಿಸಿದ್ದು ಮುಂಬೈ ಇಂಡಿಯನ್ಸ್. ಕಾರಣ ಈ ತಂಡ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿತು.<br /> <br /> ಟೂರ್ನಿಯ ಫೈನಲ್ನಲ್ಲಿ ಮುಂಬೈ ನೀಡಿದ 140 ರನ್ಗಳ ಗುರಿಗೆ ಉತ್ತರವಾಗಿ ರಾಯಲ್ ಚಾಲೆಂಜರ್ಸ್ 19.2 ಓವರ್ಗಳಲ್ಲಿ 108 ರನ್ಗಳಿಗೆ ತತ್ತರಿಸಿ ಹೋಯಿತು. ಆರ್ಸಿಬಿ ತಂಡದ ಬ್ಯಾಟಿಂಗ್ ಬೆನ್ನೆಲುಬು ಎನಿಸಿದ್ದ ಕ್ರಿಸ್ ಗೇಲ್ (5) ಹಾಗೂ ವಿರಾಟ್ ಕೊಹ್ಲಿ (11) ವೈಫಲ್ಯ ಕಂಡಿದ್ದು ಈ ಸೋಲಿಗೆ ಪ್ರಮುಖ ಕಾರಣ.<br /> <br /> ಮುಂಬೈ ಇಂಡಿಯನ್ಸ್ 31 ರನ್ಗಳ ಜಯಭೇರಿ ಮೊಳಗಿಸಲು ಹರಭಜನ್ ಸಿಂಗ್ (20ಕ್ಕೆ3) ಅವರ ಬೌಲಿಂಗ್ ಕೈಚಳಕ ಮುಖ್ಯ ಪಾತ್ರ ವಹಿಸಿತು. ಗೇಲ್ ಹಾಗೂ ಕೊಹ್ಲಿ ಅವರ ವಿಕೆಟ್ ಕಬಳಿಸಿದ ಭಜ್ಜಿ ನಾಯಕರಾಗಿ ಯಶಸ್ಸು ಕಂಡರು. ಸಚಿನ್ ತೆಂಡೂಲ್ಕರ್ ಗಾಯಗೊಂಡು ಈ ಟೂರ್ನಿಯಿಂದ ಹೊರಗುಳಿದಿದ್ದ ಕಾರಣ ಹರಭಜನ್ ಅವರಿಗೆ ತಂಡದ ಸಾರಥ್ಯ ವಹಿಸಲಾಗಿತ್ತು. ಮುಂಬೈ ರೂ11.6 ಕೋಟಿ ಬಹುಮಾನ ಮೊತ್ತ ಜೇಬಿಗಳಿಸಿತು. ರನ್ನರ್ ಅಪ್ ಬೆಂಳೂರು ತಂಡಕ್ಕೆ ರೂ 6 ಕೋಟಿ ಲಭಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ಲೀಗ್ ಹಾಗೂ ಸೆಮಿಫೈನಲ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ತೋರಿ ಭರವಸೆ ಮೂಡಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಫೈನಲ್ನಲ್ಲಿ ಎಡವಿ ಬಿದ್ದಿದೆ. ಕಡಿಮೆ ಮೊತ್ತದ ಗುರಿ ಮುಟ್ಟಲೂ ಈ ತಂಡಕ್ಕೆ ಸಾಧ್ಯವಾಗಲಿಲ್ಲ. <br /> <br /> ಆದರೆ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ಸಂಭ್ರಮದ ಹೊನಲು ಹರಿಸಿದ್ದು ಮುಂಬೈ ಇಂಡಿಯನ್ಸ್. ಕಾರಣ ಈ ತಂಡ ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿತು.<br /> <br /> ಟೂರ್ನಿಯ ಫೈನಲ್ನಲ್ಲಿ ಮುಂಬೈ ನೀಡಿದ 140 ರನ್ಗಳ ಗುರಿಗೆ ಉತ್ತರವಾಗಿ ರಾಯಲ್ ಚಾಲೆಂಜರ್ಸ್ 19.2 ಓವರ್ಗಳಲ್ಲಿ 108 ರನ್ಗಳಿಗೆ ತತ್ತರಿಸಿ ಹೋಯಿತು. ಆರ್ಸಿಬಿ ತಂಡದ ಬ್ಯಾಟಿಂಗ್ ಬೆನ್ನೆಲುಬು ಎನಿಸಿದ್ದ ಕ್ರಿಸ್ ಗೇಲ್ (5) ಹಾಗೂ ವಿರಾಟ್ ಕೊಹ್ಲಿ (11) ವೈಫಲ್ಯ ಕಂಡಿದ್ದು ಈ ಸೋಲಿಗೆ ಪ್ರಮುಖ ಕಾರಣ.<br /> <br /> ಮುಂಬೈ ಇಂಡಿಯನ್ಸ್ 31 ರನ್ಗಳ ಜಯಭೇರಿ ಮೊಳಗಿಸಲು ಹರಭಜನ್ ಸಿಂಗ್ (20ಕ್ಕೆ3) ಅವರ ಬೌಲಿಂಗ್ ಕೈಚಳಕ ಮುಖ್ಯ ಪಾತ್ರ ವಹಿಸಿತು. ಗೇಲ್ ಹಾಗೂ ಕೊಹ್ಲಿ ಅವರ ವಿಕೆಟ್ ಕಬಳಿಸಿದ ಭಜ್ಜಿ ನಾಯಕರಾಗಿ ಯಶಸ್ಸು ಕಂಡರು. ಸಚಿನ್ ತೆಂಡೂಲ್ಕರ್ ಗಾಯಗೊಂಡು ಈ ಟೂರ್ನಿಯಿಂದ ಹೊರಗುಳಿದಿದ್ದ ಕಾರಣ ಹರಭಜನ್ ಅವರಿಗೆ ತಂಡದ ಸಾರಥ್ಯ ವಹಿಸಲಾಗಿತ್ತು. ಮುಂಬೈ ರೂ11.6 ಕೋಟಿ ಬಹುಮಾನ ಮೊತ್ತ ಜೇಬಿಗಳಿಸಿತು. ರನ್ನರ್ ಅಪ್ ಬೆಂಳೂರು ತಂಡಕ್ಕೆ ರೂ 6 ಕೋಟಿ ಲಭಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>