<p><strong>ಮೈಸೂರು:</strong> ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದು, ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಿತ್ರನಟ ದರ್ಶನ್ ಕುಟುಂಬ ಸಮೇತರಾಗಿ ಶನಿವಾರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.<br /> <br /> ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ತಾಯಿ ಮೀನಾ ತೂಗುದೀಪ, ಸಹೋದರ ದಿನಕರ್ ಜೊತೆಯಲ್ಲಿ ಸಂಜೆ 7 ಗಂಟೆಗೆ ದೇವಸ್ಥಾನಕ್ಕೆ ಬಂದ ದರ್ಶನ್ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದ ಮೇಲ್ಛಾವಣಿಗೆ ತೆರಳಿದ ಅವರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸಿ ನಗೆ ಬೀರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ಜೀವನದಲ್ಲಿ ಮತ್ತೊಮ್ಮೆ ತಪ್ಪು ಮಾಡುವುದಿಲ್ಲ. ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಅವರಿಗೆ ಋಣಿಯಾಗಿರುತ್ತೇನೆ. ನನ್ನಿಂದ ಚಿತ್ರರಂಗಕ್ಕೆ ಯಾವುದೇ ತೊಂದರೆ ಆಗುವುದಿಲ್ಲ~ ಎಂದು ಚುಟುಕಾಗಿ ಉತ್ತರಿಸಿದರು. <br /> <br /> ದರ್ಶನ್ ಬರುವಿಕೆಯನ್ನು ಅರಿತ ಅಭಿಮಾನಿಗಳು ಮಧ್ಯಾಹ್ನ 3 ಗಂಟೆಯಿಂದಲೇ ಚಾಮುಂಡಿ ಬೆಟ್ಟಕ್ಕೆ ಆಗಮಿಸತೊಡಗಿದರು. ಸುಮಾರು 4 ತಾಸು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತರು. ದರ್ಶನ್ ಕಾರಿನಲ್ಲಿ ಬರುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದರು. ಪಟಾಕಿಗಳನ್ನು ಸಿಡಿಸಿ ಈಡುಗಾಯಿಗಳನ್ನು ಒಡೆದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹೆಣಗಾಡಿದರು. ದೇವಸ್ಥಾನಕ್ಕೆ ಬರುವ ಮುನ್ನ ದರ್ಶನ್ ತಿ.ನರಸೀಪುರ ರಸ್ತೆಯಲ್ಲಿರುವ ತೋಟದ ಮನೆಗೆ ತೆರಳಿದ್ದರು. <br /> <br /> <strong>ಅನಿತಾ ಭೇಟಿ:</strong> ದರ್ಶನ್ ಕುಟುಂಬ ಸಮೇತರಾಗಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ವೇಳೆಗೆ ಶಾಸಕಿ ಅನಿತಾ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. `ಮೈಸೂರಿನಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ಪೂಜೆ ಸಲ್ಲಿಸಲು ಬೆಟ್ಟಕ್ಕೆ ಬಂದಿದ್ದೇನೆ~ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದು, ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಿತ್ರನಟ ದರ್ಶನ್ ಕುಟುಂಬ ಸಮೇತರಾಗಿ ಶನಿವಾರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು.<br /> <br /> ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ತಾಯಿ ಮೀನಾ ತೂಗುದೀಪ, ಸಹೋದರ ದಿನಕರ್ ಜೊತೆಯಲ್ಲಿ ಸಂಜೆ 7 ಗಂಟೆಗೆ ದೇವಸ್ಥಾನಕ್ಕೆ ಬಂದ ದರ್ಶನ್ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದ ಮೇಲ್ಛಾವಣಿಗೆ ತೆರಳಿದ ಅವರು ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳತ್ತ ಕೈಬೀಸಿ ನಗೆ ಬೀರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ಜೀವನದಲ್ಲಿ ಮತ್ತೊಮ್ಮೆ ತಪ್ಪು ಮಾಡುವುದಿಲ್ಲ. ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಅವರಿಗೆ ಋಣಿಯಾಗಿರುತ್ತೇನೆ. ನನ್ನಿಂದ ಚಿತ್ರರಂಗಕ್ಕೆ ಯಾವುದೇ ತೊಂದರೆ ಆಗುವುದಿಲ್ಲ~ ಎಂದು ಚುಟುಕಾಗಿ ಉತ್ತರಿಸಿದರು. <br /> <br /> ದರ್ಶನ್ ಬರುವಿಕೆಯನ್ನು ಅರಿತ ಅಭಿಮಾನಿಗಳು ಮಧ್ಯಾಹ್ನ 3 ಗಂಟೆಯಿಂದಲೇ ಚಾಮುಂಡಿ ಬೆಟ್ಟಕ್ಕೆ ಆಗಮಿಸತೊಡಗಿದರು. ಸುಮಾರು 4 ತಾಸು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತರು. ದರ್ಶನ್ ಕಾರಿನಲ್ಲಿ ಬರುತ್ತಿದ್ದಂತೆ ಅಭಿಮಾನಿಗಳು ಮುಗಿಬಿದ್ದರು. ಪಟಾಕಿಗಳನ್ನು ಸಿಡಿಸಿ ಈಡುಗಾಯಿಗಳನ್ನು ಒಡೆದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹೆಣಗಾಡಿದರು. ದೇವಸ್ಥಾನಕ್ಕೆ ಬರುವ ಮುನ್ನ ದರ್ಶನ್ ತಿ.ನರಸೀಪುರ ರಸ್ತೆಯಲ್ಲಿರುವ ತೋಟದ ಮನೆಗೆ ತೆರಳಿದ್ದರು. <br /> <br /> <strong>ಅನಿತಾ ಭೇಟಿ:</strong> ದರ್ಶನ್ ಕುಟುಂಬ ಸಮೇತರಾಗಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ವೇಳೆಗೆ ಶಾಸಕಿ ಅನಿತಾ ಕುಮಾರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. `ಮೈಸೂರಿನಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ಪೂಜೆ ಸಲ್ಲಿಸಲು ಬೆಟ್ಟಕ್ಕೆ ಬಂದಿದ್ದೇನೆ~ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>