<p><strong>ಯಳಂದೂರು:</strong> ತಾಲ್ಲೂಕಿನ ವೈ.ಕೆ.ಮೋಳೆಯಲ್ಲಿ ಸೋಮವಾರ ಸಂಜೆ ನಡೆದ ದೊಡ್ಡಮ್ಮತಾಯಿ, ಚಿಕ್ಕಮ್ಮತಾಯಿ ಹಾಗೂ ಚಾಮುಂಡೇಶ್ವರಿ ಕೊಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೂಂಡಿದ್ದರು. <br /> <br /> ಗ್ರಾಮದ ಹೃದಯ ಭಾಗದಲ್ಲಿರುವ ದೇಗುಲದ ಮುಂದಿನ ಕೊಂಡದಲ್ಲಿ ಬೆಂಕಿಯನ್ನು ಹಾಕಲಾಗಿತ್ತು. ವಿಶೇಷ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ಸತ್ತಿಗೆ, ಸೂರಿಪಾನಿ ಹಾಗೂ ಉತ್ಸವ ಮೂರ್ತಿಗಳನ್ನು ಅದ್ದೂರಿ ಮೆರವಣಿಗೆ ಮೂಲಕ ತಂದು ಕೊಂಡದ ಬೆಂಕಿಯನ್ನು ಹಾಯಲಾಯಿತು.<br /> <br /> ಹರಕೆ ಹೊತ್ತ ಭಕ್ತರು ತಮ್ಮ ಬಾಯಿಗೆ ಸರಳುಗಳನ್ನು ಚುಚ್ಚಿಸಿಕೊಂಡು, ಕೈಯಲ್ಲಿ ಎಣ್ಣೆಯ ದೀವಟಿಗೆ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ಭಕ್ತರಿಗೆ ನೀರು, ಮಜ್ಜಿಗೆ, ಪಾನಕ ಹಾಗೂ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. <br /> <br /> ಗ್ರಾಮದ ಬೀದಿಗಳಿಗೆ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಬಿಳಿಗಿರಿರಂಗನಬೆಟ್ಟದಿಂದ ಸೋಲಿಗರು ರಾತ್ರಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದರು.<br /> <br /> ಜಿ.ಪಂ. ಮಾಜಿ ಉಪಾಧ್ಯಕ್ಷ ಸಿದ್ದರಾಜು, ಸದಸ್ಯೆ ಕೇತಮ್ಮ ಸೇರಿದಂತೆ ಹಲವು ಗಣ್ಯರು ಈ ಉತ್ಸವದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು:</strong> ತಾಲ್ಲೂಕಿನ ವೈ.ಕೆ.ಮೋಳೆಯಲ್ಲಿ ಸೋಮವಾರ ಸಂಜೆ ನಡೆದ ದೊಡ್ಡಮ್ಮತಾಯಿ, ಚಿಕ್ಕಮ್ಮತಾಯಿ ಹಾಗೂ ಚಾಮುಂಡೇಶ್ವರಿ ಕೊಂಡೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೂಂಡಿದ್ದರು. <br /> <br /> ಗ್ರಾಮದ ಹೃದಯ ಭಾಗದಲ್ಲಿರುವ ದೇಗುಲದ ಮುಂದಿನ ಕೊಂಡದಲ್ಲಿ ಬೆಂಕಿಯನ್ನು ಹಾಕಲಾಗಿತ್ತು. ವಿಶೇಷ ಅಲಂಕಾರಗಳಿಂದ ಕಂಗೊಳಿಸುತ್ತಿದ್ದ ಸತ್ತಿಗೆ, ಸೂರಿಪಾನಿ ಹಾಗೂ ಉತ್ಸವ ಮೂರ್ತಿಗಳನ್ನು ಅದ್ದೂರಿ ಮೆರವಣಿಗೆ ಮೂಲಕ ತಂದು ಕೊಂಡದ ಬೆಂಕಿಯನ್ನು ಹಾಯಲಾಯಿತು.<br /> <br /> ಹರಕೆ ಹೊತ್ತ ಭಕ್ತರು ತಮ್ಮ ಬಾಯಿಗೆ ಸರಳುಗಳನ್ನು ಚುಚ್ಚಿಸಿಕೊಂಡು, ಕೈಯಲ್ಲಿ ಎಣ್ಣೆಯ ದೀವಟಿಗೆ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ಭಕ್ತರಿಗೆ ನೀರು, ಮಜ್ಜಿಗೆ, ಪಾನಕ ಹಾಗೂ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿತ್ತು. <br /> <br /> ಗ್ರಾಮದ ಬೀದಿಗಳಿಗೆ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಬಿಳಿಗಿರಿರಂಗನಬೆಟ್ಟದಿಂದ ಸೋಲಿಗರು ರಾತ್ರಿ ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದರು.<br /> <br /> ಜಿ.ಪಂ. ಮಾಜಿ ಉಪಾಧ್ಯಕ್ಷ ಸಿದ್ದರಾಜು, ಸದಸ್ಯೆ ಕೇತಮ್ಮ ಸೇರಿದಂತೆ ಹಲವು ಗಣ್ಯರು ಈ ಉತ್ಸವದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>