<p>ದೇವನಹಳ್ಳಿ: ಗ್ರಾಮೀಣ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಅವರನ್ನು ಪ್ರಾಥಮಿಕ ಹಂತದಿಂದಲೇ ಜಾಗೃತಗೊಳಿಸುವ ಅವಶ್ಯಕತೆಯಿದೆ ಎಂದು ಗ್ರಾಮದ ಮುಖಂಡ ಹಾಗೂ ದಾನಿ ಗಂಗಾಧರಪ್ಪ ತಿಳಿಸಿದರು.<br /> <br /> ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಬುಧುವಾರ ಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ ಮತ್ತು ಉಚಿತ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಹಿಂದಿನ ಗುರುಕುಲ ಪದ್ಧತಿಗೂ ಇಂದಿನ ಆಧುನಿಕ ಶಿಕ್ಷಣಕ್ಕೂ ಬಹಳಷ್ಟು ವ್ಯತ್ಯಾಸವಿದೆ. ತಾಂತ್ರಿಕ ಕ್ಷೇತ್ರದಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಬೆಳವಣಿಗೆಗಳನ್ನು ವಿದ್ಯಾರ್ಥಿಗಳ ಗಮನಿಸುತ್ತಿರಬೇಕು. ಈ ದಿಸೆಯಲ್ಲಿ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.<br /> <br /> ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಶ್ಯಾಮೇಗೌಡ ಮಾತನಾಡಿ, ಗಂಗಾಧರಪ್ಪನವರು ಶಾಲೆಗೆ ಕಂಪ್ಯೂಟರ್, ಕಾಂಪೌಂಡ್ ನಿರ್ಮಾಣಕ್ಕೆ ಮತ್ತು ಮಕ್ಕಳಿಗೆ ಕ್ರೆಡಾ ಸಾಮಗ್ರಿ, ಡೆಸ್ಕ್ ವ್ಯವಸ್ಥೆ ಹಾಗೂ ಶಾಲೆ ಆವರಣದಲ್ಲಿ ಉದ್ಯಾನವನ ನಿರ್ಮಿಸಿಕೊಡುವಲ್ಲಿ ಉದಾರತೆ ಮೆರೆದಿರುವುದು ಶ್ಲಾಘನೀಯ ಎಂದರು.<br /> <br /> ಮುಖ್ಯಶಿಕ್ಷಕ ಮುನಿಆಂಜಿನಪ್ಪ ಮಾತನಾಡಿ, 1952ರಲ್ಲಿ ಪ್ರಾಥಮಿಕ ಶಾಲೆಯೊಂದಿಗೆ ಆರಂಭಗೊಂಡ ಈ ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಪದವಿಯಲ್ಲಿದ್ದಾರೆ. ಆದ್ದರಿಂದ ಯಾರಿಗೂ ಸರ್ಕಾರಿ ಶಾಲೆ ಎಂಬ ಕೀಳೆರಿಮೆ ಬೇಡ. ಬದಲಾದ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಮಹತ್ತರ ಸಾಧನವಾಗಲಿದೆ ಎಂದರು.<br /> <br /> ಶಾಲಾಭಿವೃದ್ಧಿ ಸಮಿತಿ ಸದಸ್ಯ ಮಂಜುನಾಥ್, ಬೈರೇಗೌಡ, ಶಿವಕುಮಾರ್, ಬಸಂತ ಕುಮಾರ್, ಶಿಕ್ಷಕಿ ಲಕ್ಷ್ಮೀ, ಅಂಬಿಕಾ ಇದ್ದರು. ಇದೇ ಸಂದರ್ಭದಲ್ಲಿ ದಾನಿಯಾದ ಗಂಗಾಧರಪ್ಪ ಹಾಗೂ ವರ್ಗಾವಣೆಗೊಂಡ ಶಿಕ್ಷಕ ನಾಗರಾಜ್ ಅವರನ್ನು ಶಾಲಾಭಿವೃದ್ಧಿ ಸಮಿತಿವತಿಯಿಂದ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಗ್ರಾಮೀಣ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಅವರನ್ನು ಪ್ರಾಥಮಿಕ ಹಂತದಿಂದಲೇ ಜಾಗೃತಗೊಳಿಸುವ ಅವಶ್ಯಕತೆಯಿದೆ ಎಂದು ಗ್ರಾಮದ ಮುಖಂಡ ಹಾಗೂ ದಾನಿ ಗಂಗಾಧರಪ್ಪ ತಿಳಿಸಿದರು.<br /> <br /> ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಬುಧುವಾರ ಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ ಮತ್ತು ಉಚಿತ ನೋಟ್ಸ್ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.<br /> <br /> ಹಿಂದಿನ ಗುರುಕುಲ ಪದ್ಧತಿಗೂ ಇಂದಿನ ಆಧುನಿಕ ಶಿಕ್ಷಣಕ್ಕೂ ಬಹಳಷ್ಟು ವ್ಯತ್ಯಾಸವಿದೆ. ತಾಂತ್ರಿಕ ಕ್ಷೇತ್ರದಲ್ಲಿ ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಬೆಳವಣಿಗೆಗಳನ್ನು ವಿದ್ಯಾರ್ಥಿಗಳ ಗಮನಿಸುತ್ತಿರಬೇಕು. ಈ ದಿಸೆಯಲ್ಲಿ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.<br /> <br /> ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುನಿಶ್ಯಾಮೇಗೌಡ ಮಾತನಾಡಿ, ಗಂಗಾಧರಪ್ಪನವರು ಶಾಲೆಗೆ ಕಂಪ್ಯೂಟರ್, ಕಾಂಪೌಂಡ್ ನಿರ್ಮಾಣಕ್ಕೆ ಮತ್ತು ಮಕ್ಕಳಿಗೆ ಕ್ರೆಡಾ ಸಾಮಗ್ರಿ, ಡೆಸ್ಕ್ ವ್ಯವಸ್ಥೆ ಹಾಗೂ ಶಾಲೆ ಆವರಣದಲ್ಲಿ ಉದ್ಯಾನವನ ನಿರ್ಮಿಸಿಕೊಡುವಲ್ಲಿ ಉದಾರತೆ ಮೆರೆದಿರುವುದು ಶ್ಲಾಘನೀಯ ಎಂದರು.<br /> <br /> ಮುಖ್ಯಶಿಕ್ಷಕ ಮುನಿಆಂಜಿನಪ್ಪ ಮಾತನಾಡಿ, 1952ರಲ್ಲಿ ಪ್ರಾಥಮಿಕ ಶಾಲೆಯೊಂದಿಗೆ ಆರಂಭಗೊಂಡ ಈ ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಪದವಿಯಲ್ಲಿದ್ದಾರೆ. ಆದ್ದರಿಂದ ಯಾರಿಗೂ ಸರ್ಕಾರಿ ಶಾಲೆ ಎಂಬ ಕೀಳೆರಿಮೆ ಬೇಡ. ಬದಲಾದ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಮಹತ್ತರ ಸಾಧನವಾಗಲಿದೆ ಎಂದರು.<br /> <br /> ಶಾಲಾಭಿವೃದ್ಧಿ ಸಮಿತಿ ಸದಸ್ಯ ಮಂಜುನಾಥ್, ಬೈರೇಗೌಡ, ಶಿವಕುಮಾರ್, ಬಸಂತ ಕುಮಾರ್, ಶಿಕ್ಷಕಿ ಲಕ್ಷ್ಮೀ, ಅಂಬಿಕಾ ಇದ್ದರು. ಇದೇ ಸಂದರ್ಭದಲ್ಲಿ ದಾನಿಯಾದ ಗಂಗಾಧರಪ್ಪ ಹಾಗೂ ವರ್ಗಾವಣೆಗೊಂಡ ಶಿಕ್ಷಕ ನಾಗರಾಜ್ ಅವರನ್ನು ಶಾಲಾಭಿವೃದ್ಧಿ ಸಮಿತಿವತಿಯಿಂದ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>