<p><strong>ಚಿಕ್ಕಬಳ್ಳಾಪುರ: </strong>ಚಿಕ್ಕಬಳ್ಳಾಪುರದಿಂದ ಕೋಲಾರದವರೆಗೆ ರೈಲು ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ನಗರದ ರೈಲು ನಿಲ್ದಾಣದ ಆವರಣದಲ್ಲಿ ಪ್ರದೇಶವನ್ನು ಸಮತಟ್ಟುಗೊಳಿಸುವುದು ಸೇರಿದಂತೆ ಇತರ ಕಾರ್ಯಗಳು ನಡೆಯುತ್ತಿವೆ. ತಾಲ್ಲೂಕಿನ ಪೂಜನಹಳ್ಳಿ ಗ್ರಾಮದಿಂದ ಅಜ್ಜವಾರ ಗ್ರಾಮದವರೆಗೆ ರೈಲ್ವೆ ಹಳಿಗಳನ್ನು ಅಳವಡಿಸುವ ಪ್ರಕ್ರಿಯೆಯಲ್ಲಿ ಕಾರ್ಮಿಕರು ನಿರತರಾಗಿದ್ದಾರೆ.<br /> <br /> ನಿಲ್ದಾಣದ ಆವರಣದಲ್ಲಿ ಆವರಿಸಿಕೊಂಡಿದ್ದ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದ್ದು, ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತಿದೆ. ಬುಲ್ಡೋಜರ್, ಕ್ರೇನ್ ಮತ್ತು ಇತರ ಸಾಧನಗಳ ನೆರವಿನಿಂದ ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತಿದ್ದು, ಗುಲ್ಬರ್ಗಾ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಕಾರ್ಮಿಕರು ಕಾರ್ಯನಿರತರಾಗಿದ್ದಾರೆ.<br /> <br /> ಕೆಲ ತಿಂಗಳ ಹಿಂದೆಯಷ್ಟೇ ನಿಲ್ದಾಣಕ್ಕೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಕ್ಟೋಬರ್ ವೇಳೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ರೈಲು ಸಂಪರ್ಕ ಕಲ್ಪಿಸಲಾಗುವುದು. ಪುಟ್ಟಪರ್ತಿವರೆಗೆ ರೈಲು ಸಂಪರ್ಕವನ್ನು ವಿಸ್ತರಿಸುವುದಾಗಿ ಭರವಸೆಯನ್ನೂ ನೀಡಿದ್ದರು.<br /> <br /> `ನಿರಂತರ ಹೋರಾಟ ಮಾಡಿದ್ದರ ಫಲವಾಗಿ ರೈಲ್ವೆ ಕಾಮಗಾರಿ ಆರಂಭವಾಗಿದೆ. ರೈಲು ನಿಲ್ದಾಣವನ್ನು ಅತ್ಯಾಧುನಿಕ ಮಾದರಿಯಲ್ಲಿ ನವೀಕರಣ ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ. ರೈಲ್ವೆ ಕಾಮಗಾರಿ ಮುಂದುವರೆಸುವುದರ ಜೊತೆಗೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿದರೆ ಅನುಕೂಲವಾಗುತ್ತದೆ.<br /> <br /> ಇದರ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಕೂಡ ಸಲ್ಲಿಸಲಾಗಿದೆ~ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ನಿಲ್ದಾಣದಲ್ಲಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಟಿಕೆಟ್ ವಿತರಿಸಲು ಒಂದೇ ಕೌಂಟರ್ವಿದ್ದು, ಜನದಟ್ಟಣೆಯಿಂದ ಬಹುತೇಕ ಸಂದರ್ಭದಲ್ಲಿ ಟಿಕೆಟ್ ಕೊಳ್ಳಲು ಸಾಧ್ಯವಾಗುವುದಿಲ್ಲ.ಹೆಚ್ಚುವರಿ ಟಿಕೆಟ್ ಕೌಂಟರ್ ಸೌಲಭ್ಯ ಒದಗಿಸಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಚಿಕ್ಕಬಳ್ಳಾಪುರದಿಂದ ಕೋಲಾರದವರೆಗೆ ರೈಲು ಸಂಪರ್ಕ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ನಗರದ ರೈಲು ನಿಲ್ದಾಣದ ಆವರಣದಲ್ಲಿ ಪ್ರದೇಶವನ್ನು ಸಮತಟ್ಟುಗೊಳಿಸುವುದು ಸೇರಿದಂತೆ ಇತರ ಕಾರ್ಯಗಳು ನಡೆಯುತ್ತಿವೆ. ತಾಲ್ಲೂಕಿನ ಪೂಜನಹಳ್ಳಿ ಗ್ರಾಮದಿಂದ ಅಜ್ಜವಾರ ಗ್ರಾಮದವರೆಗೆ ರೈಲ್ವೆ ಹಳಿಗಳನ್ನು ಅಳವಡಿಸುವ ಪ್ರಕ್ರಿಯೆಯಲ್ಲಿ ಕಾರ್ಮಿಕರು ನಿರತರಾಗಿದ್ದಾರೆ.<br /> <br /> ನಿಲ್ದಾಣದ ಆವರಣದಲ್ಲಿ ಆವರಿಸಿಕೊಂಡಿದ್ದ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದ್ದು, ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತಿದೆ. ಬುಲ್ಡೋಜರ್, ಕ್ರೇನ್ ಮತ್ತು ಇತರ ಸಾಧನಗಳ ನೆರವಿನಿಂದ ಪ್ರದೇಶವನ್ನು ಸಮತಟ್ಟುಗೊಳಿಸಲಾಗುತ್ತಿದ್ದು, ಗುಲ್ಬರ್ಗಾ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಬಂದಿರುವ ಕಾರ್ಮಿಕರು ಕಾರ್ಯನಿರತರಾಗಿದ್ದಾರೆ.<br /> <br /> ಕೆಲ ತಿಂಗಳ ಹಿಂದೆಯಷ್ಟೇ ನಿಲ್ದಾಣಕ್ಕೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಕ್ಟೋಬರ್ ವೇಳೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ನಡುವೆ ರೈಲು ಸಂಪರ್ಕ ಕಲ್ಪಿಸಲಾಗುವುದು. ಪುಟ್ಟಪರ್ತಿವರೆಗೆ ರೈಲು ಸಂಪರ್ಕವನ್ನು ವಿಸ್ತರಿಸುವುದಾಗಿ ಭರವಸೆಯನ್ನೂ ನೀಡಿದ್ದರು.<br /> <br /> `ನಿರಂತರ ಹೋರಾಟ ಮಾಡಿದ್ದರ ಫಲವಾಗಿ ರೈಲ್ವೆ ಕಾಮಗಾರಿ ಆರಂಭವಾಗಿದೆ. ರೈಲು ನಿಲ್ದಾಣವನ್ನು ಅತ್ಯಾಧುನಿಕ ಮಾದರಿಯಲ್ಲಿ ನವೀಕರಣ ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ. ರೈಲ್ವೆ ಕಾಮಗಾರಿ ಮುಂದುವರೆಸುವುದರ ಜೊತೆಗೆ ನಿಲ್ದಾಣದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿದರೆ ಅನುಕೂಲವಾಗುತ್ತದೆ.<br /> <br /> ಇದರ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಕೂಡ ಸಲ್ಲಿಸಲಾಗಿದೆ~ ಎಂದು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ನಿಲ್ದಾಣದಲ್ಲಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಟಿಕೆಟ್ ವಿತರಿಸಲು ಒಂದೇ ಕೌಂಟರ್ವಿದ್ದು, ಜನದಟ್ಟಣೆಯಿಂದ ಬಹುತೇಕ ಸಂದರ್ಭದಲ್ಲಿ ಟಿಕೆಟ್ ಕೊಳ್ಳಲು ಸಾಧ್ಯವಾಗುವುದಿಲ್ಲ.ಹೆಚ್ಚುವರಿ ಟಿಕೆಟ್ ಕೌಂಟರ್ ಸೌಲಭ್ಯ ಒದಗಿಸಬೇಕು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>