<p><strong>ಚಿಕ್ಕಮಗಳೂರು:</strong> ಮರಾಠಿ ಮತ್ತು ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರ ನಿಲುವು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.<br /> <br /> ಹಳೇ ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಹನುಮಂತಪ್ಪ ವೃತ್ತದಲ್ಲಿ ಮರಾಠಿ, ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರ ವಿರುದ್ಧ ಅವರ ಪ್ರತಿಕೃತಿ ಸುಟ್ಟು ಹಾಕಿದರು.<br /> <br /> ಬೆಳಗಾವಿ ಶಾಸಕರಾದ ಸಾಂಬಾಜಿ ಪಾಟೀಲ್, ಅರವಿಂದ ಪಾಟೀಲ ಮರಾಠಿ ಭಾಷೆಯಲ್ಲಿ, ಖಮರುಲ್ಲಾ ಇಸ್ಲಾಂ, ಅಶೋಕ್ಖೇಣಿ ಮತ್ತು ಉಮೇಶ್ ಜಾದವ್ ಆಂಗ್ಲಭಾಷೆಯಲ್ಲಿ ಪ್ರಮಾಣ ವಚನಸ್ವೀಕರಿಸಿದ್ದು, ಇವರು ನಾಡಿನ ಜನತೆಯ ಕ್ಷಮೆಯಾಚಿಸಬೇಕು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.<br /> <br /> ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರ ಸದಸ್ಯತ್ವ ರದ್ದುಪಡಿಸಲು ವಿಧಾನಸಭೆ ಅಧ್ಯಕ್ಷರು ಮುಂದಾಗಬೇಕು. ಇಲ್ಲದಿದ್ದರೆ ಕನ್ನಡ ವಿರೋಧಿ ಶಾಸಕರ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.<br /> <br /> ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಗೂರು ಜಗದೀಶ, ಮುಖಂಡರಾದ ಸಿದ್ದೇಗೌಡ, ಇರ್ಷಾದ್ ಅಹ್ಮದ್, ಆರ್.ಕುಮಾರ್, ಎಸ್.ಆರ್.ಮನೋಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಮರಾಠಿ ಮತ್ತು ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರ ನಿಲುವು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.<br /> <br /> ಹಳೇ ತಾಲ್ಲೂಕು ಕಚೇರಿ ಆವರಣದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಹನುಮಂತಪ್ಪ ವೃತ್ತದಲ್ಲಿ ಮರಾಠಿ, ಆಂಗ್ಲಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದವರ ವಿರುದ್ಧ ಅವರ ಪ್ರತಿಕೃತಿ ಸುಟ್ಟು ಹಾಕಿದರು.<br /> <br /> ಬೆಳಗಾವಿ ಶಾಸಕರಾದ ಸಾಂಬಾಜಿ ಪಾಟೀಲ್, ಅರವಿಂದ ಪಾಟೀಲ ಮರಾಠಿ ಭಾಷೆಯಲ್ಲಿ, ಖಮರುಲ್ಲಾ ಇಸ್ಲಾಂ, ಅಶೋಕ್ಖೇಣಿ ಮತ್ತು ಉಮೇಶ್ ಜಾದವ್ ಆಂಗ್ಲಭಾಷೆಯಲ್ಲಿ ಪ್ರಮಾಣ ವಚನಸ್ವೀಕರಿಸಿದ್ದು, ಇವರು ನಾಡಿನ ಜನತೆಯ ಕ್ಷಮೆಯಾಚಿಸಬೇಕು. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.<br /> <br /> ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರ ಸದಸ್ಯತ್ವ ರದ್ದುಪಡಿಸಲು ವಿಧಾನಸಭೆ ಅಧ್ಯಕ್ಷರು ಮುಂದಾಗಬೇಕು. ಇಲ್ಲದಿದ್ದರೆ ಕನ್ನಡ ವಿರೋಧಿ ಶಾಸಕರ ಮುಖಕ್ಕೆ ಮಸಿ ಬಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.<br /> <br /> ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಗೂರು ಜಗದೀಶ, ಮುಖಂಡರಾದ ಸಿದ್ದೇಗೌಡ, ಇರ್ಷಾದ್ ಅಹ್ಮದ್, ಆರ್.ಕುಮಾರ್, ಎಸ್.ಆರ್.ಮನೋಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>