<p><strong>ಬೆಂಗಳೂರು:</strong> ವಿಧಾನ ಪರಿಷತ್ತಿಗೆ ಚಿತ್ರಕಲಾ ಕ್ಷೇತ್ರದ ಹಿರಿಯರೊಬ್ಬರನ್ನು ಸದಸ್ಯರಾಗಿ ನೇಮಕ ಮಾಡಬೇಕು ಎಂದು `ಸಾಹಿತಿ ಕಲಾವಿದರ ಸಾಂಸ್ಕೃತಿಕ ವೇದಿಕೆ~, ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಒತ್ತಾಯಿಸಿದೆ.</p>.<p>ಸಾಂಸ್ಕೃತಿಕ ಕ್ಷೇತ್ರದ ಗಣ್ಯರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವ ಸಂಪ್ರದಾಯ ರಾಜ್ಯದಲ್ಲಿ ಹಿಂದಿನಿಂದಲೂ ಜಾರಿಯಲ್ಲಿದೆ. ಆದರೆ ಚಿತ್ರಕಲಾ ಕ್ಷೇತ್ರಕ್ಕೆ ಸೇರಿದ ಯಾರೂ ಇದುವರೆಗೆ ವಿಧಾನ ಪರಿಷತ್ತಿನ ಸದಸ್ಯರಾಗಿ ನೇಮಕಗೊಂಡಿಲ್ಲ. ಹಾಗಾಗಿ, ಈ ಕ್ಷೇತ್ರದ ಹಿರಿಯ, ಖ್ಯಾತ, ಸಮಾಜಮುಖಿ ವ್ಯಕ್ತಿಯನ್ನು ಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಬೇಕು ಎಂದು ವೇದಿಕೆ ಪತ್ರದ ಮೂಲಕ ಆಗ್ರಹಿಸಿದೆ.</p>.<p>ಈ ಸಂಬಂಧ ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರಕ್ಕೆ ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ, ಕಲಾವಿದ ಸಿ. ಚಂದ್ರಶೇಖರ, ಸಾಹಿತಿಗಳಾದ ಪ್ರೊ. ಚಂದ್ರಶೇಖರ ಪಾಟೀಲ, ಪ್ರೊ. ಬರಗೂರು ರಾಮಚಂದ್ರಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ವೆಂಕಟಾಚಲಪತಿ, ಡಾ.ಜಿ. ಲಕ್ಷ್ಮೀಪತಿ, ಎಂ.ಜಿ. ದೊಡ್ಡಮನಿ, `ಪುಸ್ತಕಮನೆ~ ಹರಿಹರಪ್ರಿಯ, ರಮೇಶ ತೇರದಾಳ ಮತ್ತಿತರರು ಸಹಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನ ಪರಿಷತ್ತಿಗೆ ಚಿತ್ರಕಲಾ ಕ್ಷೇತ್ರದ ಹಿರಿಯರೊಬ್ಬರನ್ನು ಸದಸ್ಯರಾಗಿ ನೇಮಕ ಮಾಡಬೇಕು ಎಂದು `ಸಾಹಿತಿ ಕಲಾವಿದರ ಸಾಂಸ್ಕೃತಿಕ ವೇದಿಕೆ~, ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಒತ್ತಾಯಿಸಿದೆ.</p>.<p>ಸಾಂಸ್ಕೃತಿಕ ಕ್ಷೇತ್ರದ ಗಣ್ಯರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವ ಸಂಪ್ರದಾಯ ರಾಜ್ಯದಲ್ಲಿ ಹಿಂದಿನಿಂದಲೂ ಜಾರಿಯಲ್ಲಿದೆ. ಆದರೆ ಚಿತ್ರಕಲಾ ಕ್ಷೇತ್ರಕ್ಕೆ ಸೇರಿದ ಯಾರೂ ಇದುವರೆಗೆ ವಿಧಾನ ಪರಿಷತ್ತಿನ ಸದಸ್ಯರಾಗಿ ನೇಮಕಗೊಂಡಿಲ್ಲ. ಹಾಗಾಗಿ, ಈ ಕ್ಷೇತ್ರದ ಹಿರಿಯ, ಖ್ಯಾತ, ಸಮಾಜಮುಖಿ ವ್ಯಕ್ತಿಯನ್ನು ಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಬೇಕು ಎಂದು ವೇದಿಕೆ ಪತ್ರದ ಮೂಲಕ ಆಗ್ರಹಿಸಿದೆ.</p>.<p>ಈ ಸಂಬಂಧ ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರಕ್ಕೆ ಸಂಶೋಧಕ ಡಾ.ಎಂ. ಚಿದಾನಂದಮೂರ್ತಿ, ಕಲಾವಿದ ಸಿ. ಚಂದ್ರಶೇಖರ, ಸಾಹಿತಿಗಳಾದ ಪ್ರೊ. ಚಂದ್ರಶೇಖರ ಪಾಟೀಲ, ಪ್ರೊ. ಬರಗೂರು ರಾಮಚಂದ್ರಪ್ಪ, ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ವೆಂಕಟಾಚಲಪತಿ, ಡಾ.ಜಿ. ಲಕ್ಷ್ಮೀಪತಿ, ಎಂ.ಜಿ. ದೊಡ್ಡಮನಿ, `ಪುಸ್ತಕಮನೆ~ ಹರಿಹರಪ್ರಿಯ, ರಮೇಶ ತೇರದಾಳ ಮತ್ತಿತರರು ಸಹಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>