<p><strong>ಚಿತ್ರದುರ್ಗ:</strong> ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರೆ ನೀಡಲಾಗಿದ್ದ `ಚಿತ್ರದುರ್ಗ ಬಂದ್~ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.<br /> <br /> ಮಾದಿಗ ಮೀಸಲಾತಿ ಹೋರಾಟ ಸಮಿತಿ ಈ ಬಂದ್ಗೆ ಕರೆ ನೀಡಿತ್ತು. ಆಯೋಗದ ವರದಿಯಂತೆ ಒಳ ಮೀಸಲಾತಿ ಹಂಚಿಕೆ ಸೂತ್ರದ ಶಿಫಾರಸುಗಳನ್ನು ತಕ್ಷಣ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.<br /> <br /> ವಾಣಿಜ್ಯ ವಹಿವಾಟು ಸ್ಥಗಿತಗೊಂಡಿತ್ತು. ನಗರದಲ್ಲಿ ಬೆಳಗಿನ ಜಾವದಿಂದಲೇ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರ ಮೂಲಕ ಬಸ್ಗಳು ಸಂಚರಿಸಿದವು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಯಿತು. ನಗರದಲ್ಲಿ ಆಟೋರಿಕ್ಷಾ ಸಂಚಾರ ವಿರಳವಾಗಿತ್ತು. ಚಿತ್ರಮಂದಿರಗಳು, ಬ್ಯಾಂಕ್ಗಳು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕೆಲವು ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ಬೆಳಿಗ್ಗೆಯೇ ಮುಚ್ಚಿಸಲಾಯಿತು. <br /> <br /> ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ತಾಲ್ಲೂಕು ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು ಬಾಗಿಲು ತೆರೆದಿದ್ದರೂ ಸಾರ್ವಜನಿಕರ ಹಾಜರಾತಿ ಅತಿ ಕಡಿಮೆ ಸಂಖ್ಯೆಯಲ್ಲಿತ್ತು. ನಗರಸಭೆ ಕಚೇರಿಯನ್ನು ಕಾರ್ಯಕರ್ತರು ಮುಚ್ಚಿಸಿದರು. ಬಾಗಿಲು ತೆರೆದಿದ್ದ ಕಾರ್ಪೋರೇಷನ್ಬ್ಯಾಂಕ್ಗೂ ಕಾರ್ಯಕರ್ತರು ನುಗ್ಗಿ ಮುಚ್ಚಿಸಿದರು.<br /> <br /> ಗಾಂಧಿ ವೃತ್ತದಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಕಾರ್ಯಕರ್ತರು ಧರಣಿ ನಡೆಸಿ ಘೋಷಣೆಗಳನ್ನು ಹಾಕಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. |<br /> <br /> ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಬಂದ್ ಅಂಗವಾಗಿ ಕಾರ್ಯಕರ್ತರು ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಗುರುವಾರ ಕರೆ ನೀಡಲಾಗಿದ್ದ `ಚಿತ್ರದುರ್ಗ ಬಂದ್~ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.<br /> <br /> ಮಾದಿಗ ಮೀಸಲಾತಿ ಹೋರಾಟ ಸಮಿತಿ ಈ ಬಂದ್ಗೆ ಕರೆ ನೀಡಿತ್ತು. ಆಯೋಗದ ವರದಿಯಂತೆ ಒಳ ಮೀಸಲಾತಿ ಹಂಚಿಕೆ ಸೂತ್ರದ ಶಿಫಾರಸುಗಳನ್ನು ತಕ್ಷಣ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.<br /> <br /> ವಾಣಿಜ್ಯ ವಹಿವಾಟು ಸ್ಥಗಿತಗೊಂಡಿತ್ತು. ನಗರದಲ್ಲಿ ಬೆಳಗಿನ ಜಾವದಿಂದಲೇ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4ರ ಮೂಲಕ ಬಸ್ಗಳು ಸಂಚರಿಸಿದವು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಯಿತು. ನಗರದಲ್ಲಿ ಆಟೋರಿಕ್ಷಾ ಸಂಚಾರ ವಿರಳವಾಗಿತ್ತು. ಚಿತ್ರಮಂದಿರಗಳು, ಬ್ಯಾಂಕ್ಗಳು, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕೆಲವು ಅಂಗಡಿಗಳನ್ನು ಒತ್ತಾಯಪೂರ್ವಕವಾಗಿ ಬೆಳಿಗ್ಗೆಯೇ ಮುಚ್ಚಿಸಲಾಯಿತು. <br /> <br /> ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ತಾಲ್ಲೂಕು ಕಚೇರಿ, ಪ್ರಾದೇಶಿಕ ಸಾರಿಗೆ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು ಬಾಗಿಲು ತೆರೆದಿದ್ದರೂ ಸಾರ್ವಜನಿಕರ ಹಾಜರಾತಿ ಅತಿ ಕಡಿಮೆ ಸಂಖ್ಯೆಯಲ್ಲಿತ್ತು. ನಗರಸಭೆ ಕಚೇರಿಯನ್ನು ಕಾರ್ಯಕರ್ತರು ಮುಚ್ಚಿಸಿದರು. ಬಾಗಿಲು ತೆರೆದಿದ್ದ ಕಾರ್ಪೋರೇಷನ್ಬ್ಯಾಂಕ್ಗೂ ಕಾರ್ಯಕರ್ತರು ನುಗ್ಗಿ ಮುಚ್ಚಿಸಿದರು.<br /> <br /> ಗಾಂಧಿ ವೃತ್ತದಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಕಾರ್ಯಕರ್ತರು ಧರಣಿ ನಡೆಸಿ ಘೋಷಣೆಗಳನ್ನು ಹಾಕಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. |<br /> <br /> ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಬಂದ್ ಅಂಗವಾಗಿ ಕಾರ್ಯಕರ್ತರು ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>