<p><strong>ನವದೆಹಲಿ (ಪಿಟಿಐ): </strong>2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಗೃಹಸಚಿವ ಪಿ.ಚಿದಂಬರಂ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕೆಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಂಡಿದ್ದು, ಚಿದಂಬರಂ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.<br /> <br /> ಎರಡನೇ ತಲೆಮಾರಿನ ತರಂಗಾಂತರ ಹಂಚಿಕೆ ಬಗೆಗೆ ಅದರ ಮೌಲ್ಯ ನಿರ್ಧಾರದ ಬಗೆಗೆ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರಿಗೆ ಸಂಪೂರ್ಣ ಅರಿವಿತ್ತು ಎಂದು ಆರೋಪಿಸಿರುವ ಸರ್ಕಾರೇತರ ಸಂಸ್ಥೆಯೊಂದು ಚಿದು ವಿರುದ್ಧ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ವಾದಿಸಿದೆ. <br /> <br /> ಇದೇ ರೀತಿಯ ಅರ್ಜಿಯನ್ನು <a href="http://prajavani.net/include/story.php?news=65648&section=1&menuid=10">ಜನತಾಪಕ್ಷದ ಸುಬ್ರಮಣಿಯನ್ ಸ್ವಾಮಿ </a>ಅವರೂ ಸಲ್ಲಿಸಿದ್ದಾರೆ.<br /> <br /> ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಹಾಗೂ ಎಸ್. ರಾಧಾಕೃಷ್ಣನ್ ಅವರು ಸರ್ಕಾರೇತರ ಸಂಸ್ಥೆಯ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಜಾಗೃತ ದಳಕ್ಕೆ ಪ್ರತಿಕ್ರಿಯೆ ನೀಡುವಂತೆ ನಿರ್ದೇಶನ ನೀಡಿತು.<br /> <br /> ಈಗಾಗಲೇ ವಿಚಾರಣಾ ನ್ಯಾಯಾಲಯವು 2 ಜಿ ತರಂಗಾಂತರ ಹಂಚಿಕೆ ಹಗರಣದಿಂದ ಚಿದು ಅವರನ್ನು <a href="http://prajavani.net/include/story.php?news=62635&section=1&menuid=10">ಆರೋಪಮುಕ್ತ</a>ಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಗೃಹಸಚಿವ ಪಿ.ಚಿದಂಬರಂ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕೆಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಂಡಿದ್ದು, ಚಿದಂಬರಂ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.<br /> <br /> ಎರಡನೇ ತಲೆಮಾರಿನ ತರಂಗಾಂತರ ಹಂಚಿಕೆ ಬಗೆಗೆ ಅದರ ಮೌಲ್ಯ ನಿರ್ಧಾರದ ಬಗೆಗೆ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರಿಗೆ ಸಂಪೂರ್ಣ ಅರಿವಿತ್ತು ಎಂದು ಆರೋಪಿಸಿರುವ ಸರ್ಕಾರೇತರ ಸಂಸ್ಥೆಯೊಂದು ಚಿದು ವಿರುದ್ಧ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ವಾದಿಸಿದೆ. <br /> <br /> ಇದೇ ರೀತಿಯ ಅರ್ಜಿಯನ್ನು <a href="http://prajavani.net/include/story.php?news=65648&section=1&menuid=10">ಜನತಾಪಕ್ಷದ ಸುಬ್ರಮಣಿಯನ್ ಸ್ವಾಮಿ </a>ಅವರೂ ಸಲ್ಲಿಸಿದ್ದಾರೆ.<br /> <br /> ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಹಾಗೂ ಎಸ್. ರಾಧಾಕೃಷ್ಣನ್ ಅವರು ಸರ್ಕಾರೇತರ ಸಂಸ್ಥೆಯ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ ಸಿಬಿಐ, ಆದಾಯ ತೆರಿಗೆ ಇಲಾಖೆ ಹಾಗೂ ಜಾಗೃತ ದಳಕ್ಕೆ ಪ್ರತಿಕ್ರಿಯೆ ನೀಡುವಂತೆ ನಿರ್ದೇಶನ ನೀಡಿತು.<br /> <br /> ಈಗಾಗಲೇ ವಿಚಾರಣಾ ನ್ಯಾಯಾಲಯವು 2 ಜಿ ತರಂಗಾಂತರ ಹಂಚಿಕೆ ಹಗರಣದಿಂದ ಚಿದು ಅವರನ್ನು <a href="http://prajavani.net/include/story.php?news=62635&section=1&menuid=10">ಆರೋಪಮುಕ್ತ</a>ಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>