<p>ಚನ್ನರಾಯಪಟ್ಟಣ: ನುಗ್ಗೇಹಳ್ಳಿಯಲ್ಲಿ ಚಿನ್ನ– ಬೆಳ್ಳಿ ವ್ಯಾಪಾರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಚಿನ್ನ– ಬೆಳ್ಳಿ ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಮಂಗಳವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿದರು.<br /> <br /> ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದರು.<br /> ನುಗ್ಗೇಹಳ್ಳಿಯಲ್ಲಿ ಸೋಮವಾರ ಸಂಜೆ ಕಾಳಿಕಾಂಬ ಜ್ಯುವೆಲರ್ಸ್ ಮಾಲೀಕ ಪರಮೇಶ್ ಅವರನ್ನು ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಘಟನೆಯಿಂದ ಚಿನ್ನ– ಬೆಳ್ಳಿ ವರ್ತಕರು ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ವ್ಯಾಪಾರಿಗಳಿಗೆ ಸೂಕ್ತರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಇಂಥ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ತಹಶೀಲ್ದಾರ್ ಕೆ. ಕೃಷ್ಣ ಅವರಿಗೆ ಮನವಿ ಸಲ್ಲಿಸಲಾಯಿತು.<br /> <br /> ವರ್ತಕರ ಸಂಘದ ಪದಾಧಿಕಾರಿಗಳಾದ ಸಿ.ಎಂ. ಹರೀಶ್, ಮಂಜೇಗೌಡ, ಸಂಜಯ್ಸೇಟ್, ನಾಗೇಂದ್ರ, ನಟರಾಜ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನರಾಯಪಟ್ಟಣ: ನುಗ್ಗೇಹಳ್ಳಿಯಲ್ಲಿ ಚಿನ್ನ– ಬೆಳ್ಳಿ ವ್ಯಾಪಾರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಚಿನ್ನ– ಬೆಳ್ಳಿ ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಮಂಗಳವಾರ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಿದರು.<br /> <br /> ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮಿನಿ ವಿಧಾನಸೌಧದ ಆವರಣದಲ್ಲಿ ಸೇರಿದರು.<br /> ನುಗ್ಗೇಹಳ್ಳಿಯಲ್ಲಿ ಸೋಮವಾರ ಸಂಜೆ ಕಾಳಿಕಾಂಬ ಜ್ಯುವೆಲರ್ಸ್ ಮಾಲೀಕ ಪರಮೇಶ್ ಅವರನ್ನು ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಘಟನೆಯಿಂದ ಚಿನ್ನ– ಬೆಳ್ಳಿ ವರ್ತಕರು ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ. ವ್ಯಾಪಾರಿಗಳಿಗೆ ಸೂಕ್ತರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.<br /> <br /> ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಇಂಥ ಘಟನೆ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ತಹಶೀಲ್ದಾರ್ ಕೆ. ಕೃಷ್ಣ ಅವರಿಗೆ ಮನವಿ ಸಲ್ಲಿಸಲಾಯಿತು.<br /> <br /> ವರ್ತಕರ ಸಂಘದ ಪದಾಧಿಕಾರಿಗಳಾದ ಸಿ.ಎಂ. ಹರೀಶ್, ಮಂಜೇಗೌಡ, ಸಂಜಯ್ಸೇಟ್, ನಾಗೇಂದ್ರ, ನಟರಾಜ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>