<p><strong>ಮಂಗಳೂರು: </strong>`ನ. 2ರಂದು ನಗರದಲ್ಲಿ ನಡೆದ `ಯಾಕಾಗಿ ಪಾಪ್ಯುಲರ್ ಫ್ರಂಟ್~ ಅಭಿಯಾನದಲ್ಲಿ ಅಜ್ಮೀರ್ ದರ್ಗಾದ ಅಧ್ಯಕ್ಷ ಸಯ್ಯದ್ ಸರ್ವರ್ ಚಿಸ್ತಿ ಅವರು ದೇಶದ್ರೋಹದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಠಾಣೆಗೆ ನೀಡಿರುವ ದೂರನ್ನು ಹಿಂದಕ್ಕೆ ಪಡೆಯದಿದ್ದರೆ ಕಾನೂನು ಹೋರಾಟ ನಡೆಸಲಾಗುವುದು~ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಝಾಕ್ ಕೆಮ್ಮಾರ ಹೇಳಿದರು.<br /> <br /> ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನರೇಂದ್ರ ಮೋದಿಯವರು ಪ್ರಧಾನಿಯಾದರೆ ಈ ದೇಶದ ಮುಸ್ಲಿಮರೆಲ್ಲ ಭಯೋತ್ಪಾಕರಾಗುವುದರಲ್ಲಿ ಅಚ್ಚರಿಯಿಲ್ಲ. ಹಾಗಾಗದಿರಲಿ ಎಂದು ಹಾರೈಸುತ್ತೇನೆ ಎಂದು ಚಿಸ್ತಿ ಅವರು ಆತಂಕ ವ್ಯಕ್ತಪಡಿಸಿದ್ದಾರೆಯೇ ಹೊರತು ಮುಸ್ಲಿಮರೆಲ್ಲ ಭಯೋತ್ಪಾದರಾಗಬೇಕು ಎಂದು ಅವರು ಕರೆ ನೀಡಿಲ್ಲ.<br /> <br /> ಆದರೆ ಚಿಸ್ತಿ ಅವರ ಹೇಳಿಕೆಯನ್ನು ದುರುದ್ದೇಶದಿಂದ ತಿರುಚಿ ದೂರು ನೀಡಲಾಗಿದೆ. ನಮ್ಮಲ್ಲಿ ಚಿಸ್ತಿ ಭಾಷಣದ ಸಂಪೂರ್ಣ ದಾಖಲೆ ಇದೆ. ತನಿಖೆಯ ಸಂದರ್ಭದಲ್ಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧ~ ಎಂದು ಹೇಳಿದರು. ಗೋಷ್ಠಿಯಲ್ಲಿ ಪಿಎಫ್ಐ ಸದಸ್ಯರಾದ ರಿಯ್ಾ ಫರಂಗಿಪೇಟೆ, ಅತಾವುಲ್ಲ ಎಂ.ಎಂ., ಪಿ. ಅಬ್ದುಲ್ ಖಾದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>`ನ. 2ರಂದು ನಗರದಲ್ಲಿ ನಡೆದ `ಯಾಕಾಗಿ ಪಾಪ್ಯುಲರ್ ಫ್ರಂಟ್~ ಅಭಿಯಾನದಲ್ಲಿ ಅಜ್ಮೀರ್ ದರ್ಗಾದ ಅಧ್ಯಕ್ಷ ಸಯ್ಯದ್ ಸರ್ವರ್ ಚಿಸ್ತಿ ಅವರು ದೇಶದ್ರೋಹದ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಠಾಣೆಗೆ ನೀಡಿರುವ ದೂರನ್ನು ಹಿಂದಕ್ಕೆ ಪಡೆಯದಿದ್ದರೆ ಕಾನೂನು ಹೋರಾಟ ನಡೆಸಲಾಗುವುದು~ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಝಾಕ್ ಕೆಮ್ಮಾರ ಹೇಳಿದರು.<br /> <br /> ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ನರೇಂದ್ರ ಮೋದಿಯವರು ಪ್ರಧಾನಿಯಾದರೆ ಈ ದೇಶದ ಮುಸ್ಲಿಮರೆಲ್ಲ ಭಯೋತ್ಪಾಕರಾಗುವುದರಲ್ಲಿ ಅಚ್ಚರಿಯಿಲ್ಲ. ಹಾಗಾಗದಿರಲಿ ಎಂದು ಹಾರೈಸುತ್ತೇನೆ ಎಂದು ಚಿಸ್ತಿ ಅವರು ಆತಂಕ ವ್ಯಕ್ತಪಡಿಸಿದ್ದಾರೆಯೇ ಹೊರತು ಮುಸ್ಲಿಮರೆಲ್ಲ ಭಯೋತ್ಪಾದರಾಗಬೇಕು ಎಂದು ಅವರು ಕರೆ ನೀಡಿಲ್ಲ.<br /> <br /> ಆದರೆ ಚಿಸ್ತಿ ಅವರ ಹೇಳಿಕೆಯನ್ನು ದುರುದ್ದೇಶದಿಂದ ತಿರುಚಿ ದೂರು ನೀಡಲಾಗಿದೆ. ನಮ್ಮಲ್ಲಿ ಚಿಸ್ತಿ ಭಾಷಣದ ಸಂಪೂರ್ಣ ದಾಖಲೆ ಇದೆ. ತನಿಖೆಯ ಸಂದರ್ಭದಲ್ಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧ~ ಎಂದು ಹೇಳಿದರು. ಗೋಷ್ಠಿಯಲ್ಲಿ ಪಿಎಫ್ಐ ಸದಸ್ಯರಾದ ರಿಯ್ಾ ಫರಂಗಿಪೇಟೆ, ಅತಾವುಲ್ಲ ಎಂ.ಎಂ., ಪಿ. ಅಬ್ದುಲ್ ಖಾದರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>