<p><strong>ಕೆಜಿಎಫ್</strong>: ನಗರದ ರಾಬರ್ಟ್ಸನ್ಪೇಟೆಯಲ್ಲಿ ಚೀಟಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಪರಾರಿಯಾಗಿ ಪೊಲೀಸ ಇಲಾಖೆ ಸಿಬ್ಬಂದಿ ಸೇರಿದಂತೆ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಗುರುವಾರ ನಡೆದಿದೆ.<br /> <br /> ರಾಬರ್ಟ್ಸನ್ಪೇಟೆಯ ಮೂರನೇ ಕ್ರಾಸ್ನಲ್ಲಿ ಆಂಡವರ್ ಚಿಟ್ಸ್ ಎಂಬ ಹೆಸರಿನಲ್ಲಿ ಸಿ.ರಾಜ ಎಂಬುವರು ಕಳೆದ ಆರು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. ರೂ.1 ಲಕ್ಷ ದಿಂದ 2 ಲಕ್ಷ ರೂಪಾಯಿಗಳ ಚೀಟಿ ವ್ಯವಹಾರ ನಡೆಸುತ್ತಿದ್ದು, ನೂರಾರು ಮಂದಿ ಚೀಟಿ ಕಟ್ಟುತ್ತಿದ್ದರು ಎಂದು ತಿಳಿದು ಬಂದಿದೆ.<br /> <br /> ಒಂದು ವರ್ಷಗಳಿಂದ ಚೀಟಿ ವ್ಯವಹಾರ ಕೊಂಚ ಅಸ್ತವ್ಯಸ್ತವಾಗಿದ್ದ ಕಾರಣ ಹಲವು ಜನರು ರಾಜುವಿಗೆ ಹಣ ನೀಡಲು ಸತಾಯಿಸುತ್ತಿದ್ದರು. ಹಣ ಕೇಳುವವರ ಒತ್ತಡ ಹೆಚ್ಚಿದ ಕಾರಣ ಬುಧವಾರ ಕಚೇರಿಗೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಈಗಾಗಲೇ ಸುಮಾರು 140ಕ್ಕೂ ಹೆಚ್ಚುಜನ ಅನ್ಯಾಯಕ್ಕೆ ಒಳಗಾಗಿದ್ದು, ಪೊಲೀಸ್ ಠಾಣೆಗೆ ಬಂದು ದೂರು ಹೇಳುತ್ತಿದ್ದಾರೆ. ಇದರ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ. ಚೀಟಿದಾರರು ಸುಮಾರು 5 ಕೋಟಿ ರೂಪಾಯಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಣ ಕಳೆದುಕೊಂಡವರಲ್ಲಿ ಬಹುತೇಕ ಮಂದಿ ಪೊಲೀಸ್ ಸಿಬ್ಬಂದಿಯೇ ಹೆಚ್ಚು ಇದ್ದಾರೆ. <br /> <br /> ಕಷ್ಟ ಪಟ್ಟು ಸಂಪಾದಿಸಿದ ಹಣ ತೆಗೆದುಕೊಂಡು ಪರಾರಿಯಾದ ಆರೋಪಿ ಶಪಿಸುತ್ತಿದ್ದ ನೂರಾರು ಮಂದಿ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಗೆ ಬಂದು ಕಣ್ಣೀರಿಡುತ್ತಿದ್ದ ದೃಶ್ಯ ಕಂಡು ಬಂತು. <br /> <br /> ಜನರನ್ನು ಸಮಾಧಾನ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ ಸಹ ಮೋಸದ ಜಾಲದಲ್ಲಿ ಸಿಕ್ಕಿ ಬಿದ್ದಿರುವುದರಿಂದ ಅವರಲ್ಲಿಯೂ ದುಗುಡ ಎದ್ದು ಕಾಣುತ್ತಿತ್ತು. ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ನಗರದ ರಾಬರ್ಟ್ಸನ್ಪೇಟೆಯಲ್ಲಿ ಚೀಟಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬ ರಾತ್ರೋರಾತ್ರಿ ಪರಾರಿಯಾಗಿ ಪೊಲೀಸ ಇಲಾಖೆ ಸಿಬ್ಬಂದಿ ಸೇರಿದಂತೆ ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಗುರುವಾರ ನಡೆದಿದೆ.<br /> <br /> ರಾಬರ್ಟ್ಸನ್ಪೇಟೆಯ ಮೂರನೇ ಕ್ರಾಸ್ನಲ್ಲಿ ಆಂಡವರ್ ಚಿಟ್ಸ್ ಎಂಬ ಹೆಸರಿನಲ್ಲಿ ಸಿ.ರಾಜ ಎಂಬುವರು ಕಳೆದ ಆರು ವರ್ಷಗಳಿಂದ ಚೀಟಿ ವ್ಯವಹಾರ ನಡೆಸುತ್ತಿದ್ದರು. ರೂ.1 ಲಕ್ಷ ದಿಂದ 2 ಲಕ್ಷ ರೂಪಾಯಿಗಳ ಚೀಟಿ ವ್ಯವಹಾರ ನಡೆಸುತ್ತಿದ್ದು, ನೂರಾರು ಮಂದಿ ಚೀಟಿ ಕಟ್ಟುತ್ತಿದ್ದರು ಎಂದು ತಿಳಿದು ಬಂದಿದೆ.<br /> <br /> ಒಂದು ವರ್ಷಗಳಿಂದ ಚೀಟಿ ವ್ಯವಹಾರ ಕೊಂಚ ಅಸ್ತವ್ಯಸ್ತವಾಗಿದ್ದ ಕಾರಣ ಹಲವು ಜನರು ರಾಜುವಿಗೆ ಹಣ ನೀಡಲು ಸತಾಯಿಸುತ್ತಿದ್ದರು. ಹಣ ಕೇಳುವವರ ಒತ್ತಡ ಹೆಚ್ಚಿದ ಕಾರಣ ಬುಧವಾರ ಕಚೇರಿಗೆ ಬೀಗ ಹಾಕಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಈಗಾಗಲೇ ಸುಮಾರು 140ಕ್ಕೂ ಹೆಚ್ಚುಜನ ಅನ್ಯಾಯಕ್ಕೆ ಒಳಗಾಗಿದ್ದು, ಪೊಲೀಸ್ ಠಾಣೆಗೆ ಬಂದು ದೂರು ಹೇಳುತ್ತಿದ್ದಾರೆ. ಇದರ ಸಂಖ್ಯೆ 500 ದಾಟಬಹುದು ಎಂದು ಅಂದಾಜಿಸಲಾಗಿದೆ. ಚೀಟಿದಾರರು ಸುಮಾರು 5 ಕೋಟಿ ರೂಪಾಯಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಣ ಕಳೆದುಕೊಂಡವರಲ್ಲಿ ಬಹುತೇಕ ಮಂದಿ ಪೊಲೀಸ್ ಸಿಬ್ಬಂದಿಯೇ ಹೆಚ್ಚು ಇದ್ದಾರೆ. <br /> <br /> ಕಷ್ಟ ಪಟ್ಟು ಸಂಪಾದಿಸಿದ ಹಣ ತೆಗೆದುಕೊಂಡು ಪರಾರಿಯಾದ ಆರೋಪಿ ಶಪಿಸುತ್ತಿದ್ದ ನೂರಾರು ಮಂದಿ ರಾಬರ್ಟ್ಸನ್ಪೇಟೆ ಪೊಲೀಸ್ ಠಾಣೆಗೆ ಬಂದು ಕಣ್ಣೀರಿಡುತ್ತಿದ್ದ ದೃಶ್ಯ ಕಂಡು ಬಂತು. <br /> <br /> ಜನರನ್ನು ಸಮಾಧಾನ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ ಸಹ ಮೋಸದ ಜಾಲದಲ್ಲಿ ಸಿಕ್ಕಿ ಬಿದ್ದಿರುವುದರಿಂದ ಅವರಲ್ಲಿಯೂ ದುಗುಡ ಎದ್ದು ಕಾಣುತ್ತಿತ್ತು. ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>