<p><strong>ಶೃಂಗೇರಿ (ಕೊಪ್ಪ): </strong>ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯ ಚುಟುಕಾಗಿದ್ದರೂ ಅರ್ಥಪೂರ್ಣ ವಿಷಯವನ್ನು ಹೊಂದಿರುತ್ತದೆ ಎಂದು ಕವಿ ಡುಂಡಿರಾಜ್ ಹೇಳಿದರು.<br /> <br /> ಮೆಣಸೆಯಲ್ಲಿ ನಡೆಯುತ್ತಿರುವ ತಾಲ್ಲೂಕು ಐದನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಚುಟುಕು ಸಾಹಿತ್ಯ ಲೋಕ ಗೋಷ್ಠಿಯಲ್ಲಿ ಚುಟುಕಿನಲ್ಲಿ ಹಾಸ್ಯ ಕುರಿತು ಅವರು ಭಾನುವಾರ ಮಾತನಾಡಿದರು.<br /> <br /> ಚುಟುಕುಗಳಲ್ಲಿ ಹಾಸ್ಯ ಹಿಂದಿನಿಂದಲೂ ಇದ್ದು ಅದು ಪರಿಣಾಮಕಾರಿಯೂ ಆಗಿದೆ. ದಿನಪತ್ರಿಕೆ, ವಾರ, ಮಾಸಿಕ ಪತ್ರಿಕೆಗಳಲ್ಲಿ ಚುಟುಕಿಗೆ ಮೊದಲಿಂದಲೂ ಸ್ಥಾನ ಕಲ್ಪಿಸಲಾಗಿದ್ದು ಅದು ತನ್ನದೇ ಆದ ಓದುಗರನ್ನು ಹೊಂದಿದೆ.<br /> <br /> ಹವ್ಯಾಸಕ್ಕಾಗಿ ರಚಿಸುವ ಚುಟುಕುಗಳು ಓದುಗರನ್ನು ಸಾಹಿತ್ಯದೆಡೆ ಆಕರ್ಷಿಸುತ್ತದೆ, ಸಾಹಿತ್ಯದ ಬೆಳವಣಿಗೆಯಲ್ಲಿ ಚುಟುಕು ಸಾಹಿತ್ಯವೂ ಮುಖ್ಯವಾಗಿದೆ ಎಂದ ಅವರು ಹಾಸ್ಯ ನಿರೂಪಿಸಿರುವ ಚುಟುಕುಗಳನ್ನು ವಾಚಿಸಿದರು. ಜೆಸಿಬಿಎಂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಟಿ.ಎಸ್.ವೆಂಕಣ್ಣಯ್ಯ ಗೋಷ್ಠಿ ಉದ್ಘಾಟಿಸಿದರು. <br /> </p>.<p> ಕಲಾವಿದ ರಮೇಶ್ ಬೇಗಾರ್ ಚುಟುಕಿನ ನೆಲೆ ಬೆಲೆ ಬಗ್ಗೆ ಉಪನ್ಯಾಸ ನೀಡಿದರು. ಕಸಾಪ ಅಧ್ಯಕ್ಷ ಬಿ.ಬಿ.ಕಾಡಪ್ಪಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾರದಾ ರೋಟರಿ ಸಮುದಾಯದಳದ ಅಧ್ಯಕ್ಷ ಜೆ.ಗಿರಿಧರ್, ಹೊಸ್ಕೆರೆ ವೆಂಕಟೇಶ್, ಗಿರಿಜಾಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ (ಕೊಪ್ಪ): </strong>ಸಾಹಿತ್ಯ ಲೋಕದಲ್ಲಿ ಚುಟುಕು ಸಾಹಿತ್ಯ ಚುಟುಕಾಗಿದ್ದರೂ ಅರ್ಥಪೂರ್ಣ ವಿಷಯವನ್ನು ಹೊಂದಿರುತ್ತದೆ ಎಂದು ಕವಿ ಡುಂಡಿರಾಜ್ ಹೇಳಿದರು.<br /> <br /> ಮೆಣಸೆಯಲ್ಲಿ ನಡೆಯುತ್ತಿರುವ ತಾಲ್ಲೂಕು ಐದನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಚುಟುಕು ಸಾಹಿತ್ಯ ಲೋಕ ಗೋಷ್ಠಿಯಲ್ಲಿ ಚುಟುಕಿನಲ್ಲಿ ಹಾಸ್ಯ ಕುರಿತು ಅವರು ಭಾನುವಾರ ಮಾತನಾಡಿದರು.<br /> <br /> ಚುಟುಕುಗಳಲ್ಲಿ ಹಾಸ್ಯ ಹಿಂದಿನಿಂದಲೂ ಇದ್ದು ಅದು ಪರಿಣಾಮಕಾರಿಯೂ ಆಗಿದೆ. ದಿನಪತ್ರಿಕೆ, ವಾರ, ಮಾಸಿಕ ಪತ್ರಿಕೆಗಳಲ್ಲಿ ಚುಟುಕಿಗೆ ಮೊದಲಿಂದಲೂ ಸ್ಥಾನ ಕಲ್ಪಿಸಲಾಗಿದ್ದು ಅದು ತನ್ನದೇ ಆದ ಓದುಗರನ್ನು ಹೊಂದಿದೆ.<br /> <br /> ಹವ್ಯಾಸಕ್ಕಾಗಿ ರಚಿಸುವ ಚುಟುಕುಗಳು ಓದುಗರನ್ನು ಸಾಹಿತ್ಯದೆಡೆ ಆಕರ್ಷಿಸುತ್ತದೆ, ಸಾಹಿತ್ಯದ ಬೆಳವಣಿಗೆಯಲ್ಲಿ ಚುಟುಕು ಸಾಹಿತ್ಯವೂ ಮುಖ್ಯವಾಗಿದೆ ಎಂದ ಅವರು ಹಾಸ್ಯ ನಿರೂಪಿಸಿರುವ ಚುಟುಕುಗಳನ್ನು ವಾಚಿಸಿದರು. ಜೆಸಿಬಿಎಂ ಕಾಲೇಜಿನ ನಿವೃತ್ತ ಪ್ರಾಚಾರ್ಯ ಟಿ.ಎಸ್.ವೆಂಕಣ್ಣಯ್ಯ ಗೋಷ್ಠಿ ಉದ್ಘಾಟಿಸಿದರು. <br /> </p>.<p> ಕಲಾವಿದ ರಮೇಶ್ ಬೇಗಾರ್ ಚುಟುಕಿನ ನೆಲೆ ಬೆಲೆ ಬಗ್ಗೆ ಉಪನ್ಯಾಸ ನೀಡಿದರು. ಕಸಾಪ ಅಧ್ಯಕ್ಷ ಬಿ.ಬಿ.ಕಾಡಪ್ಪಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಾರದಾ ರೋಟರಿ ಸಮುದಾಯದಳದ ಅಧ್ಯಕ್ಷ ಜೆ.ಗಿರಿಧರ್, ಹೊಸ್ಕೆರೆ ವೆಂಕಟೇಶ್, ಗಿರಿಜಾಲಕ್ಷ್ಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>