<p><strong>ನವದಹೆಲಿ (ಪಿಟಿಐ): </strong>ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ ಕೆಲವು ಸಂಸ್ಥೆಗಳು ಸಮೀಕ್ಷೆಯ ಮಾಹಿತಿಯನ್ನು ತಿರುಚಿವೆ ಎಂದು ಆಪಾದಿಸಿ ಕಾಂಗ್ರೆಸ್ ನೀಡಿರುವ ದೂರಿಗೆ ಸ್ಪಂದಿಸಿರುವ ಚುನಾವಣಾ ಆಯೋಗ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.<br /> <br /> ಕಾರ್ಪೊರೇಟ್ ವ್ಯವಹಾರ, ವಾರ್ತಾ ಮತ್ತು ಪ್ರಚಾರ ಸಚಿವಾಲಯಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ‘ಕೆಲವು ಸಂಸ್ಥೆಗಳು ಅಕ್ರಮವಾಗಿ ಹಣ ತೆಗೆದುಕೊಂಡು ಸಂಚು ನಡೆಸಿ ಸಮೀಕ್ಷೆಯ ಅಂಕಿ-ಅಂಶಗಳನ್ನು ತಿರುಚಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದ್ದರಿಂದ ಈ ಬಗ್ಗೆ ತುರ್ತು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಲು ಕೋರಲಾಗಿದೆ’ ಎಂದು ತಿಳಿಸಲಾಗಿದೆ.<br /> <br /> <strong>ಕಾಂಗ್ರೆಸ್ ಅಸಮಾಧಾನ: </strong>ಚುನಾವಣಾ ಆಯೋಗದ ಈ ನಡೆಯ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿರುವ ಕಾಂಗ್ರೆಸ್, ‘ಸಂವಿಧಾನದ 324ನೇ ಕಲಂ ಅನ್ವಯ ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವ ಅಧಿಕಾರ ಇದೆ. ಇದನ್ನು ಆಯೋಗ ಚಲಾಯಿಸಿದ್ದರೆ ಸಮೀಕ್ಷೆ ಮಾಹಿತಿ ತಿರುಚಿ ಜನರನ್ನು ದಿಕ್ಕು ತಪ್ಪಿಸಿದ ಕೆಲವು ಸಂಸ್ಥೆಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಜಕೀಯ ಪಕ್ಷಗಳು ಮತ್ತು ವ್ಯಕ್ತಿಗಳ ನೈಜ ಬಣ್ಣವನ್ನು ಬಯಲಾಗುತ್ತಿತ್ತು’ ಎಂದು ಹೇಳಿದೆ.<br /> <br /> ಚುನಾವಣಾ ಸಮೀಕ್ಷೆ ನಡೆಸಿದ 11 ಸಂಸ್ಥೆಗಳು ವರದಿಯನ್ನು ತಿರುಚಿರುವ ಬಗ್ಗೆ ಸುದ್ದಿ ವಾಹಿನಿಗಳು ಮಾರುವೇಷದ ಕಾರ್ಯಾಚರಣೆ ನಡೆಸಿದ್ದವು. ಇದಾದ ನಂತರ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದಹೆಲಿ (ಪಿಟಿಐ): </strong>ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ ಕೆಲವು ಸಂಸ್ಥೆಗಳು ಸಮೀಕ್ಷೆಯ ಮಾಹಿತಿಯನ್ನು ತಿರುಚಿವೆ ಎಂದು ಆಪಾದಿಸಿ ಕಾಂಗ್ರೆಸ್ ನೀಡಿರುವ ದೂರಿಗೆ ಸ್ಪಂದಿಸಿರುವ ಚುನಾವಣಾ ಆಯೋಗ, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.<br /> <br /> ಕಾರ್ಪೊರೇಟ್ ವ್ಯವಹಾರ, ವಾರ್ತಾ ಮತ್ತು ಪ್ರಚಾರ ಸಚಿವಾಲಯಗಳಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ‘ಕೆಲವು ಸಂಸ್ಥೆಗಳು ಅಕ್ರಮವಾಗಿ ಹಣ ತೆಗೆದುಕೊಂಡು ಸಂಚು ನಡೆಸಿ ಸಮೀಕ್ಷೆಯ ಅಂಕಿ-ಅಂಶಗಳನ್ನು ತಿರುಚಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದ್ದರಿಂದ ಈ ಬಗ್ಗೆ ತುರ್ತು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಲು ಕೋರಲಾಗಿದೆ’ ಎಂದು ತಿಳಿಸಲಾಗಿದೆ.<br /> <br /> <strong>ಕಾಂಗ್ರೆಸ್ ಅಸಮಾಧಾನ: </strong>ಚುನಾವಣಾ ಆಯೋಗದ ಈ ನಡೆಯ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿರುವ ಕಾಂಗ್ರೆಸ್, ‘ಸಂವಿಧಾನದ 324ನೇ ಕಲಂ ಅನ್ವಯ ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವ ಅಧಿಕಾರ ಇದೆ. ಇದನ್ನು ಆಯೋಗ ಚಲಾಯಿಸಿದ್ದರೆ ಸಮೀಕ್ಷೆ ಮಾಹಿತಿ ತಿರುಚಿ ಜನರನ್ನು ದಿಕ್ಕು ತಪ್ಪಿಸಿದ ಕೆಲವು ಸಂಸ್ಥೆಗಳೊಂದಿಗೆ ನಿಕಟ ಸಂಬಂಧ ಹೊಂದಿರುವ ರಾಜಕೀಯ ಪಕ್ಷಗಳು ಮತ್ತು ವ್ಯಕ್ತಿಗಳ ನೈಜ ಬಣ್ಣವನ್ನು ಬಯಲಾಗುತ್ತಿತ್ತು’ ಎಂದು ಹೇಳಿದೆ.<br /> <br /> ಚುನಾವಣಾ ಸಮೀಕ್ಷೆ ನಡೆಸಿದ 11 ಸಂಸ್ಥೆಗಳು ವರದಿಯನ್ನು ತಿರುಚಿರುವ ಬಗ್ಗೆ ಸುದ್ದಿ ವಾಹಿನಿಗಳು ಮಾರುವೇಷದ ಕಾರ್ಯಾಚರಣೆ ನಡೆಸಿದ್ದವು. ಇದಾದ ನಂತರ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>