<p><strong>ನವದೆಹಲಿ (ಪಿಟಿಐ):</strong> 2012-13ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಐದು ರಾಜ್ಯಗಳ ವಿಧಾನ ಸಭೆ ಚುನಾವಣೆ ಮುಗಿದ ನಂತರ ಮಂಡಿಸಲಾಗುವುದು ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ. <br /> <br /> ಆದರೆ,ಬಜೆಟ್ ಮಂಡಿಸುವ ದಿನವನ್ನು ಸರ್ಕಾರ ಇನ್ನೂ ಅಂತಿಮಗೊಳಿಸಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. <br /> ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಜನವರಿ 30ರಿಂದ ಪ್ರಾರಂಭವಾಗಿ ಮಾರ್ಚ್ 3ರಂದು ಕೊನೆಗೊಳ್ಳಲಿದೆ. ಗೋವಾ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳ ಚುನಾವಣೆ ಫೆಬ್ರುವರಿ 29ರ ಒಳಗೆ ಪೂರ್ಣಗೊಳ್ಳಲಿದ್ದು, ಮಾರ್ಚ್ 4ರಿಂದ ಮತ ಎಣಿಕೆ ಪ್ರಾರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. <br /> <br /> ಸಾಮಾನ್ಯವಾಗಿ ಫೆಬ್ರುವರಿ ತಿಂಗಳ ಕೊನೆಯ ಕೆಲಸದ ದಿನದಂದು ಬಜೆಟ್ ಮಂಡಿಸಲಾಗುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ, ಬಜೆಟ್ ಮುಂದೂಡುವುದಿಲ್ಲ ಎಂದು ಈ ಹಿಂದೆ ಮುಖರ್ಜಿ ಹೇಳಿದ್ದರು. <br /> <br /> ಜನವರಿ 11ರಿಂದ ಬಜೆಟ್ ಪೂರ್ವ ಚರ್ಚೆಗಳು ನಡೆಯಲಿದ್ದು, ಕೃಷಿ, ವಾಣಿಜ್ಯ, ಆರ್ಥಿಕ ತಜ್ಞರು, ಕೈಗಾರಿಕೋದ್ಯಮಿಗಳ ಜತೆ ಪ್ರಣವ್ ಮಾತುಕತೆ ನಡೆಸಲಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> 2012-13ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಐದು ರಾಜ್ಯಗಳ ವಿಧಾನ ಸಭೆ ಚುನಾವಣೆ ಮುಗಿದ ನಂತರ ಮಂಡಿಸಲಾಗುವುದು ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹೇಳಿದ್ದಾರೆ. <br /> <br /> ಆದರೆ,ಬಜೆಟ್ ಮಂಡಿಸುವ ದಿನವನ್ನು ಸರ್ಕಾರ ಇನ್ನೂ ಅಂತಿಮಗೊಳಿಸಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. <br /> ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಜನವರಿ 30ರಿಂದ ಪ್ರಾರಂಭವಾಗಿ ಮಾರ್ಚ್ 3ರಂದು ಕೊನೆಗೊಳ್ಳಲಿದೆ. ಗೋವಾ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳ ಚುನಾವಣೆ ಫೆಬ್ರುವರಿ 29ರ ಒಳಗೆ ಪೂರ್ಣಗೊಳ್ಳಲಿದ್ದು, ಮಾರ್ಚ್ 4ರಿಂದ ಮತ ಎಣಿಕೆ ಪ್ರಾರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. <br /> <br /> ಸಾಮಾನ್ಯವಾಗಿ ಫೆಬ್ರುವರಿ ತಿಂಗಳ ಕೊನೆಯ ಕೆಲಸದ ದಿನದಂದು ಬಜೆಟ್ ಮಂಡಿಸಲಾಗುತ್ತದೆ. ಚುನಾವಣೆ ಹಿನ್ನೆಲೆಯಲ್ಲಿ, ಬಜೆಟ್ ಮುಂದೂಡುವುದಿಲ್ಲ ಎಂದು ಈ ಹಿಂದೆ ಮುಖರ್ಜಿ ಹೇಳಿದ್ದರು. <br /> <br /> ಜನವರಿ 11ರಿಂದ ಬಜೆಟ್ ಪೂರ್ವ ಚರ್ಚೆಗಳು ನಡೆಯಲಿದ್ದು, ಕೃಷಿ, ವಾಣಿಜ್ಯ, ಆರ್ಥಿಕ ತಜ್ಞರು, ಕೈಗಾರಿಕೋದ್ಯಮಿಗಳ ಜತೆ ಪ್ರಣವ್ ಮಾತುಕತೆ ನಡೆಸಲಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>