<p>ರಾಮನಗರ: ‘ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ. ಈ ಸಂಬಂಧ ನಾನು ರೇಸ್ನಲ್ಲಿಯೇ ಇಲ್ಲ’ ಎಂದು ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ ಪ್ರತಿಕ್ರಿಯಿಸಿದರು.<br /> <br /> ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷರ ಸಂಘ ಜಂಟಿಯಾಗಿ ನಗರದ ಗುರುಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.<br /> <br /> ‘ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿರುವ ನನಗೆ ಇನ್ನೂ ಮೂರು ವರ್ಷಗಳ ಕಾಲ ಅಧಿಕಾರ ಇದೆ. ಈ ಅವಧಿಯಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಹೋರಾಟಗಳನ್ನು ರೂಪಿಸಬೇಕಾಗಿದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ‘ನಮ್ಮ ಸರ್ಕಾರ ಬರಬೇಕು. ಆಗ 6 ತಿಂಗಳಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು. ಅಲ್ಲಿ ತನಕ ನನಗೆ ಸಮಾಧಾನ ಇಲ್ಲ’ ಎಂದು ಅವರು ಹೇಳಿದರು.<br /> ‘ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬ ತೀರ್ಮಾನ ಇನ್ನೂ ಆಗಿಲ್ಲ. ಕ್ಷೇತ್ರದ ಜನತೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಈ ಚುನಾವಣೆಯಲ್ಲಿ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಬೇಕು ಎಂದು ಬಯಸಿದ್ದಾರೆ. ನನ್ನದೂ ಇದೇ ನಿಲುವಾಗಿದೆ’ ಎಂದು ಅವರು ಪ್ರತಿಕ್ರಿಯಸಿದರು.<br /> <br /> ‘ಸಂಸದರಾಗಿರುವ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಹಾಗೂ ಮುಖ್ಯಮಂತ್ರಿ ಅವರ ಹಲವಾರು ಹಗರಣಗಳನ್ನು ಪತ್ರಿಕಾಗೊಷ್ಠಿಗಳ ಮೂಲಕ ಬಹಿರಂಗಗೊಳಿಸಿದ್ದಾರೆ. ಈ ಹಗರಣಗಳ ಬಗ್ಗೆ ಸಮರ್ಥವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಅವರು ವಿಧಾನಸಭೆ ಪ್ರವೇಶಿಸಬೇಕು ಎಂಬುದು ನಮ್ಮೆಲ್ಲರ ಆಶಯ ಆಗಿದೆ. ಈ ವಿಷಯವನ್ನು ಕುಮಾರಸ್ವಾಮಿ ಅವರಿಗೆ ಈಗಾಗಲೇ ತಿಳಿಸಿದ್ದೇವೆ. ಮುಂದಿನ ನಿರ್ಧಾರ ಅವರಿಗೆ ಬಿಟ್ಟದ್ದು’ ಎಂದು ಪುಟ್ಟಣ್ಣ ತಿಳಿಸಿದರು.<br /> <br /> ಕುಮಾರಸ್ವಾಮಿ ಅವರು ವಿಧಾನಸಭೆಗೆ ಆಯ್ಕೆಯಾದರೆ ಲೋಕಸಭಾ ಸ್ಥಾನಕ್ಕೆ ಉಪ ಚುನಾವಣೆ ಆಗುತ್ತದೆ. ಅದನ್ನು ಸಮರ್ಥವಾಗಿ ಎದುರಿಸಲು ಪಕ್ಷ ಸಿದ್ಧವಿದೆ ಎಂದು ಅವರು ಹೇಳಿದರು. ಒಂದು ವೇಳೆ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಜಯಗಳಿಸುತ್ತಾರೆ ಎಂದರು.<br /> <br /> <strong>ಪೋಷಕರ ಪತ್ತೆ ಹಚ್ಚಲು ಮನವಿ</strong><br /> ರಾಮನಗರ: ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣೆ ಸಮೀಪ ಒಂದು ತಿಂಗಳ ಹಸುಗೂಸು ದೊರೆತಿದ್ದು, ಮಗುವಿನ ಪೋಷಕರನ್ನು ಪತ್ತೆ ಹಚ್ಚಲು ಸಾರ್ವಜನಿಕರು ನೆರವು ನೀಡಬೇಕು ಎಂದು ರಾಮನಗರ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ಮನವಿ ಮಾಡಿದ್ದಾರೆ.<br /> <br /> ಈ ಮಗುವಿಗೆ ಸಂಸ್ಥೆಯು ಜೋಸ್ ಎಂದು ಹೆಸರಿಟ್ಟಿದೆ. ಮಗುವಿನ ತಾಯಿ, ತಂದೆ ಯಾರು ಎಂದು ಗೊತ್ತಿಲ್ಲ. ಮಗು ಹುಟ್ಟಿದ ಸ್ಥಳ, ಧರ್ಮ ಮತ್ತು ಜಾತಿ ಯಾವುದು ತಿಳಿದಿಲ್ಲ. 51 ಸೆಂ.ಮೀ ಎತ್ತರ, ಕಂದು ಬಣ್ಣ, ಗುಂಡುಮುಖ ಹೊಂದಿದೆ. ಈ ಬಗ್ಗೆ ಮಾಹಿತಿ ಬೇಕಾದಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಉಪ ನಿರ್ದೇಶಕರು, ಹೊನ್ನಮ್ಮ ಕಲ್ಯಾಣ ಮಂಟಪ ಮುಂಭಾಗ, ಜಾಲಮಂಗಲ ರಸ್ತೆ, ರಾಮನಗರ, ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ‘ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಲ್ಲ. ಈ ಸಂಬಂಧ ನಾನು ರೇಸ್ನಲ್ಲಿಯೇ ಇಲ್ಲ’ ಎಂದು ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ ಪ್ರತಿಕ್ರಿಯಿಸಿದರು.<br /> <br /> ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷರ ಸಂಘ ಜಂಟಿಯಾಗಿ ನಗರದ ಗುರುಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.<br /> <br /> ‘ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿರುವ ನನಗೆ ಇನ್ನೂ ಮೂರು ವರ್ಷಗಳ ಕಾಲ ಅಧಿಕಾರ ಇದೆ. ಈ ಅವಧಿಯಲ್ಲಿ ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಹೋರಾಟಗಳನ್ನು ರೂಪಿಸಬೇಕಾಗಿದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ‘ನಮ್ಮ ಸರ್ಕಾರ ಬರಬೇಕು. ಆಗ 6 ತಿಂಗಳಲ್ಲಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಬೇಕು. ಅಲ್ಲಿ ತನಕ ನನಗೆ ಸಮಾಧಾನ ಇಲ್ಲ’ ಎಂದು ಅವರು ಹೇಳಿದರು.<br /> ‘ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬ ತೀರ್ಮಾನ ಇನ್ನೂ ಆಗಿಲ್ಲ. ಕ್ಷೇತ್ರದ ಜನತೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಈ ಚುನಾವಣೆಯಲ್ಲಿ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಬೇಕು ಎಂದು ಬಯಸಿದ್ದಾರೆ. ನನ್ನದೂ ಇದೇ ನಿಲುವಾಗಿದೆ’ ಎಂದು ಅವರು ಪ್ರತಿಕ್ರಿಯಸಿದರು.<br /> <br /> ‘ಸಂಸದರಾಗಿರುವ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಹಾಗೂ ಮುಖ್ಯಮಂತ್ರಿ ಅವರ ಹಲವಾರು ಹಗರಣಗಳನ್ನು ಪತ್ರಿಕಾಗೊಷ್ಠಿಗಳ ಮೂಲಕ ಬಹಿರಂಗಗೊಳಿಸಿದ್ದಾರೆ. ಈ ಹಗರಣಗಳ ಬಗ್ಗೆ ಸಮರ್ಥವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಅವರು ವಿಧಾನಸಭೆ ಪ್ರವೇಶಿಸಬೇಕು ಎಂಬುದು ನಮ್ಮೆಲ್ಲರ ಆಶಯ ಆಗಿದೆ. ಈ ವಿಷಯವನ್ನು ಕುಮಾರಸ್ವಾಮಿ ಅವರಿಗೆ ಈಗಾಗಲೇ ತಿಳಿಸಿದ್ದೇವೆ. ಮುಂದಿನ ನಿರ್ಧಾರ ಅವರಿಗೆ ಬಿಟ್ಟದ್ದು’ ಎಂದು ಪುಟ್ಟಣ್ಣ ತಿಳಿಸಿದರು.<br /> <br /> ಕುಮಾರಸ್ವಾಮಿ ಅವರು ವಿಧಾನಸಭೆಗೆ ಆಯ್ಕೆಯಾದರೆ ಲೋಕಸಭಾ ಸ್ಥಾನಕ್ಕೆ ಉಪ ಚುನಾವಣೆ ಆಗುತ್ತದೆ. ಅದನ್ನು ಸಮರ್ಥವಾಗಿ ಎದುರಿಸಲು ಪಕ್ಷ ಸಿದ್ಧವಿದೆ ಎಂದು ಅವರು ಹೇಳಿದರು. ಒಂದು ವೇಳೆ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಈ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಜಯಗಳಿಸುತ್ತಾರೆ ಎಂದರು.<br /> <br /> <strong>ಪೋಷಕರ ಪತ್ತೆ ಹಚ್ಚಲು ಮನವಿ</strong><br /> ರಾಮನಗರ: ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣೆ ಸಮೀಪ ಒಂದು ತಿಂಗಳ ಹಸುಗೂಸು ದೊರೆತಿದ್ದು, ಮಗುವಿನ ಪೋಷಕರನ್ನು ಪತ್ತೆ ಹಚ್ಚಲು ಸಾರ್ವಜನಿಕರು ನೆರವು ನೀಡಬೇಕು ಎಂದು ರಾಮನಗರ ಬಾಲಕಿಯರ ಬಾಲಮಂದಿರದ ಅಧೀಕ್ಷಕರು ಮನವಿ ಮಾಡಿದ್ದಾರೆ.<br /> <br /> ಈ ಮಗುವಿಗೆ ಸಂಸ್ಥೆಯು ಜೋಸ್ ಎಂದು ಹೆಸರಿಟ್ಟಿದೆ. ಮಗುವಿನ ತಾಯಿ, ತಂದೆ ಯಾರು ಎಂದು ಗೊತ್ತಿಲ್ಲ. ಮಗು ಹುಟ್ಟಿದ ಸ್ಥಳ, ಧರ್ಮ ಮತ್ತು ಜಾತಿ ಯಾವುದು ತಿಳಿದಿಲ್ಲ. 51 ಸೆಂ.ಮೀ ಎತ್ತರ, ಕಂದು ಬಣ್ಣ, ಗುಂಡುಮುಖ ಹೊಂದಿದೆ. ಈ ಬಗ್ಗೆ ಮಾಹಿತಿ ಬೇಕಾದಲ್ಲಿ ಮಕ್ಕಳ ಕಲ್ಯಾಣ ಸಮಿತಿ, ಉಪ ನಿರ್ದೇಶಕರು, ಹೊನ್ನಮ್ಮ ಕಲ್ಯಾಣ ಮಂಟಪ ಮುಂಭಾಗ, ಜಾಲಮಂಗಲ ರಸ್ತೆ, ರಾಮನಗರ, ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>