<p><strong>ಬೆಂಗಳೂರು:</strong> `ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟದ ಗುಣಗಳನ್ನು ಆಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿರುವ ಹಿಂಸೆ ಮತ್ತು ಸ್ವಾರ್ಥ ಮನೋಭಾವವನ್ನು ದೂರಗೊಳಿಸಬಹುದು~ ಎಂದು ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಅಭಿಪ್ರಾಯಪಟ್ಟರು. <br /> <br /> ಭಾರತ ಯಾತ್ರಾ ಕೇಂದ್ರ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. <br /> <br /> `ಗಾಂಧೀಜಿಗಿಂತಲೂ ಮೊದಲು ದೇಶಕ್ಕಾಗಿ ಹೋರಾಟ ನಡೆಸಿದ ವೀರ ಮಹಿಳೆ ಚೆನ್ನಮ್ಮ~ ಎಂದು ಬಣ್ಣಿಸಿದರು. <br /> ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, `ಚೆನ್ನಮ್ಮನ ಜಯಂತ್ಯುತ್ಸವವನ್ನು ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ಆಚರಿಸುವ ಮೂಲಕ ಆಕೆಯನ್ನು ಗೌರವಿಸಬೇಕು~ ಎಂದು ಹೇಳಿದರು. <br /> <br /> `ಚೆನ್ನಮ್ಮನ ಸ್ಮರಣಾರ್ಥ ನಗರದ ಹೊರವಲಯದಲ್ಲಿ ಚೆನ್ನಮ್ಮ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು. ಇದು ಟಿಪ್ಪು ಸುಲ್ತಾನ್ ಸೇರಿದಂತೆ ಇತರೆ ದೇಶಭಕ್ತರ ಸ್ಮಾರಕಗಳನ್ನು ಒಳಗೊಳ್ಳಬೇಕು~ ಎಂದು ವಾಟಾಳ್ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ರಾಣಿ ಸತೀಶ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಮಾಲತಿ ಸುಧೀರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕಿತ್ತೂರು ರಾಣಿ ಚೆನ್ನಮ್ಮನ ಹೋರಾಟದ ಗುಣಗಳನ್ನು ಆಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿರುವ ಹಿಂಸೆ ಮತ್ತು ಸ್ವಾರ್ಥ ಮನೋಭಾವವನ್ನು ದೂರಗೊಳಿಸಬಹುದು~ ಎಂದು ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಅಭಿಪ್ರಾಯಪಟ್ಟರು. <br /> <br /> ಭಾರತ ಯಾತ್ರಾ ಕೇಂದ್ರ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಿಜಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. <br /> <br /> `ಗಾಂಧೀಜಿಗಿಂತಲೂ ಮೊದಲು ದೇಶಕ್ಕಾಗಿ ಹೋರಾಟ ನಡೆಸಿದ ವೀರ ಮಹಿಳೆ ಚೆನ್ನಮ್ಮ~ ಎಂದು ಬಣ್ಣಿಸಿದರು. <br /> ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, `ಚೆನ್ನಮ್ಮನ ಜಯಂತ್ಯುತ್ಸವವನ್ನು ಸಂಸತ್ತು ಮತ್ತು ವಿಧಾನಮಂಡಲಗಳಲ್ಲಿ ಆಚರಿಸುವ ಮೂಲಕ ಆಕೆಯನ್ನು ಗೌರವಿಸಬೇಕು~ ಎಂದು ಹೇಳಿದರು. <br /> <br /> `ಚೆನ್ನಮ್ಮನ ಸ್ಮರಣಾರ್ಥ ನಗರದ ಹೊರವಲಯದಲ್ಲಿ ಚೆನ್ನಮ್ಮ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು. ಇದು ಟಿಪ್ಪು ಸುಲ್ತಾನ್ ಸೇರಿದಂತೆ ಇತರೆ ದೇಶಭಕ್ತರ ಸ್ಮಾರಕಗಳನ್ನು ಒಳಗೊಳ್ಳಬೇಕು~ ಎಂದು ವಾಟಾಳ್ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ರಾಣಿ ಸತೀಶ್, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷೆ ಮಾಲತಿ ಸುಧೀರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>