<p><strong>ಖಾಂಟಿ ಮನ್ಸಿಸ್ಕ್, ರಷ್ಯಾ (ಪಿಟಿಐ): </strong>ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಮೂರನೇ ಸುತ್ತಿನ ಪಂದ್ಯದಲ್ಲಿ ಅಜರ್ಬೈಜಾನ್ನ ಶಕ್ರಿಯಾರ್ ಮಮೆದ್ಯರೊವ್ ವಿರುದ್ಧ ಗೆಲುವು ಪಡೆದರು. ಟೂರ್ನಿಯಲ್ಲಿ ಎರಡನೇ ಜಯ ದಾಖಲಿಸುವ ಮೂಲಕ ಭಾರತದ ಗ್ರ್ಯಾಂಡ್ಮಾಸ್ಟರ್ 2.5 ಪಾಯಿಂಟ್ಗಳೊಂದಿಗೆ ಅಗ್ರಸ್ಥಾನಕ್ಕೇರಿದರು.<br /> <br /> ಮೊದಲ ಸುತ್ತಿನಲ್ಲಿ ಅರ್ಮೇನಿಯದ ಲೆವೊನ್ ಅರೋನಿಯನ್ ಅವರನ್ನು ಮಣಿಸಿದ್ದ ಆನಂದ್, ಎರಡನೇ ಸುತ್ತಿನ ಪಂದ್ಯದಲ್ಲಿ ವೆಸೆಲಿನ್ ಟೊಪಲೊವ್ ಜೊತೆ ಡ್ರಾ ಸಾಧಿಸಿದ್ದರು. ಟೊಪಲೊವ್- ಅರೋನಿಯನ್ ಮತ್ತು ಅರ್ಮೇನಿಯದ ದಿಮಿತ್ರಿ ಆಂಡ್ರೆಕಿನ್- ರಷ್ಯಾದ ಸೆರ್ಜಿ ಕರ್ಜಾಕಿನ್ ನಡುವಿನ ಮೂರನೇ ಸುತ್ತಿನ ಪಂದ್ಯ ಡ್ರಾದಲ್ಲಿ ಕೊನೆಗೊಂಡವು. ಒಟ್ಟು 14 ಸುತ್ತುಗಳ ಈ ಟೂರ್ನಿಯಲ್ಲಿ ಎಂಟು ಆಟಗಾರರು ಕಣದಲ್ಲಿದ್ದಾರೆ.<br /> <br /> ನವೆಂಬರ್ ತಿಂಗಳಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ಷಿಪ್ನಲ್ಲಿ ಆನಂದ್ ಅವರು ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಎದುರು ಸೋಲು ಅನುಭವಿಸಿದ್ದರು. ಆದ್ದರಿಂದ ಈ ಟೂರ್ನಿಯಲ್ಲಿ ಆನಂದ್ ಅವರನ್ನು ಹೆಚ್ಚಿನವರು ಕಡೆಗಣಿಸಿದ್ದರು. ಆದರೆ ಭಾರತದ ಗ್ರ್ಯಾಂಡ್ಮಾಸ್ಟರ್ ಆರಂಭದಲ್ಲೇ ಉತ್ತಮ ಪ್ರದರ್ಶನ ತೋರುವ ಮೂಲಕ ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾಂಟಿ ಮನ್ಸಿಸ್ಕ್, ರಷ್ಯಾ (ಪಿಟಿಐ): </strong>ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಮೂರನೇ ಸುತ್ತಿನ ಪಂದ್ಯದಲ್ಲಿ ಅಜರ್ಬೈಜಾನ್ನ ಶಕ್ರಿಯಾರ್ ಮಮೆದ್ಯರೊವ್ ವಿರುದ್ಧ ಗೆಲುವು ಪಡೆದರು. ಟೂರ್ನಿಯಲ್ಲಿ ಎರಡನೇ ಜಯ ದಾಖಲಿಸುವ ಮೂಲಕ ಭಾರತದ ಗ್ರ್ಯಾಂಡ್ಮಾಸ್ಟರ್ 2.5 ಪಾಯಿಂಟ್ಗಳೊಂದಿಗೆ ಅಗ್ರಸ್ಥಾನಕ್ಕೇರಿದರು.<br /> <br /> ಮೊದಲ ಸುತ್ತಿನಲ್ಲಿ ಅರ್ಮೇನಿಯದ ಲೆವೊನ್ ಅರೋನಿಯನ್ ಅವರನ್ನು ಮಣಿಸಿದ್ದ ಆನಂದ್, ಎರಡನೇ ಸುತ್ತಿನ ಪಂದ್ಯದಲ್ಲಿ ವೆಸೆಲಿನ್ ಟೊಪಲೊವ್ ಜೊತೆ ಡ್ರಾ ಸಾಧಿಸಿದ್ದರು. ಟೊಪಲೊವ್- ಅರೋನಿಯನ್ ಮತ್ತು ಅರ್ಮೇನಿಯದ ದಿಮಿತ್ರಿ ಆಂಡ್ರೆಕಿನ್- ರಷ್ಯಾದ ಸೆರ್ಜಿ ಕರ್ಜಾಕಿನ್ ನಡುವಿನ ಮೂರನೇ ಸುತ್ತಿನ ಪಂದ್ಯ ಡ್ರಾದಲ್ಲಿ ಕೊನೆಗೊಂಡವು. ಒಟ್ಟು 14 ಸುತ್ತುಗಳ ಈ ಟೂರ್ನಿಯಲ್ಲಿ ಎಂಟು ಆಟಗಾರರು ಕಣದಲ್ಲಿದ್ದಾರೆ.<br /> <br /> ನವೆಂಬರ್ ತಿಂಗಳಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ಷಿಪ್ನಲ್ಲಿ ಆನಂದ್ ಅವರು ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಎದುರು ಸೋಲು ಅನುಭವಿಸಿದ್ದರು. ಆದ್ದರಿಂದ ಈ ಟೂರ್ನಿಯಲ್ಲಿ ಆನಂದ್ ಅವರನ್ನು ಹೆಚ್ಚಿನವರು ಕಡೆಗಣಿಸಿದ್ದರು. ಆದರೆ ಭಾರತದ ಗ್ರ್ಯಾಂಡ್ಮಾಸ್ಟರ್ ಆರಂಭದಲ್ಲೇ ಉತ್ತಮ ಪ್ರದರ್ಶನ ತೋರುವ ಮೂಲಕ ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>