<p>ಮಡಿಕೇರಿ: ಚೇರಂಬಾಣೆ ಈಗ ಶಾಂತವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಶುಕ್ರವಾರ ಇಲ್ಲಿ ಗಲಭೆ ನಡೆದಿದ್ದು, ಎರಡು ಗುಂಪಿನ ನಡುವೆ ಮೂಡಿದ ವೈಮನಸ್ಸು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತ್ತು.<br /> <br /> ಎರಡು ಹೋಟೆಲ್ಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಸಾಕಷ್ಟು ನಷ್ಟ ಉಂಟು ಮಾಡಿದ್ದರು. ಇದೊಂದು ಪ್ರೇಮ ಗಲಭೆ ಎಂದು ಕೆಲವರು ದೂರಿಕೊಂಡಿದ್ದಾರೆ. ಇನ್ನೂ ಕೆಲವರು ಹಳೇ ವೈಷಮ್ಯವೇ ಗಲಭೆಗೆ ಕಾರಣ ಎಂದು ಆರೋಪಿಸಿದ್ದಾರೆ.<br /> <br /> ಹೆಚ್ಚುವರಿ ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಿರುವುದರಿಂದ ಪರಿಸ್ಥಿತಿ ಶಾಂತವಾಗಿದೆ. ಎರಡೂ ಗುಂಪುಗಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ರಾಜೀ ಮೂಲಕ ಗೊಂದಲಕ್ಕೆ ತೆರೆ ಎಳೆಯುವುದಾಗಿ ಕೆಲವು ಪ್ರಮುಖರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.<br /> <br /> ಈ ಮಧ್ಯೆ, ಎಸ್ಪಿ ಮಂಜುನಾಥ್ ಕೆ. ಅಣ್ಣಿಗೇರಿ, ಡಿವೈಎಸ್ಪಿ ಜೆ.ಡಿ. ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಎರಡೂ ಗುಂಪುಗಳ ಮುಖಂಡರ ಸಭೆ ಕರೆಯಲಾಗಿದ್ದು, ಪರಸ್ಪರ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಿವೈಎಸ್ಪಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಚೇರಂಬಾಣೆ ಈಗ ಶಾಂತವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಶುಕ್ರವಾರ ಇಲ್ಲಿ ಗಲಭೆ ನಡೆದಿದ್ದು, ಎರಡು ಗುಂಪಿನ ನಡುವೆ ಮೂಡಿದ ವೈಮನಸ್ಸು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಸಿತ್ತು.<br /> <br /> ಎರಡು ಹೋಟೆಲ್ಗಳ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಸಾಕಷ್ಟು ನಷ್ಟ ಉಂಟು ಮಾಡಿದ್ದರು. ಇದೊಂದು ಪ್ರೇಮ ಗಲಭೆ ಎಂದು ಕೆಲವರು ದೂರಿಕೊಂಡಿದ್ದಾರೆ. ಇನ್ನೂ ಕೆಲವರು ಹಳೇ ವೈಷಮ್ಯವೇ ಗಲಭೆಗೆ ಕಾರಣ ಎಂದು ಆರೋಪಿಸಿದ್ದಾರೆ.<br /> <br /> ಹೆಚ್ಚುವರಿ ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಿರುವುದರಿಂದ ಪರಿಸ್ಥಿತಿ ಶಾಂತವಾಗಿದೆ. ಎರಡೂ ಗುಂಪುಗಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ರಾಜೀ ಮೂಲಕ ಗೊಂದಲಕ್ಕೆ ತೆರೆ ಎಳೆಯುವುದಾಗಿ ಕೆಲವು ಪ್ರಮುಖರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.<br /> <br /> ಈ ಮಧ್ಯೆ, ಎಸ್ಪಿ ಮಂಜುನಾಥ್ ಕೆ. ಅಣ್ಣಿಗೇರಿ, ಡಿವೈಎಸ್ಪಿ ಜೆ.ಡಿ. ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಎರಡೂ ಗುಂಪುಗಳ ಮುಖಂಡರ ಸಭೆ ಕರೆಯಲಾಗಿದ್ದು, ಪರಸ್ಪರ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಿವೈಎಸ್ಪಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>