<p><strong>ಬೆಂಗಳೂರು: `</strong>ಕಣ್ಣಿಂದ ನೋಡಲು ಸಾಧ್ಯವಾಗುವ ಎಲ್ಲವನ್ನೂ ಹಿಡಿದಿಡುವ ಅಪರೂಪದ ಕಲೆ ಛಾಯಾಗ್ರಹಣ~ ಎಂದು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ಜಿಲ್ಲಾ ಫೋಟೋ ಸ್ಟುಡಿಯೊ ಮಾಲೀಕರ ಸಂಘದ ವತಿಯಿಂದ ನಗರದ ಚಿತ್ರಕಲಾ ಪರಿಷತ್ನಲ್ಲಿ ಭಾನುವಾರ ನಡೆದ ವಿಶ್ವ ಛಾಯಾಗ್ರಾಹಕರ ದಿನ ಹಾಗೂ ಸಂಘದ 4ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ಮೇಯರ್ ಡಿ.ವೆಂಕಟೇಶಮೂರ್ತಿ ಮಾತನಾಡಿ, `ಸಂಘವು ಮಾಡುತ್ತಿರುವ ಕಾರ್ಯಕ್ಕೆ ಪಾಲಿಕೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಛಾಯಾಗ್ರಾಹಕರಾದ ಸೀತಾರಾಮ ರೈ, ಕೆ.ಶಂಕರ ನಾರಾಯಣ, ಆನಂದ್, ಮುಕುಂದ್ ಮತ್ತು ಜೈರಾಮ್ ಅವರಿಗೆ `ಸ್ಟುಡಿಯೊ ರತ್ನ~ ಪ್ರಶಸ್ತಿ ನೀಡಲಾಯಿತು. ಹಿರಿಯ ಚಲನಚಿತ್ರ ಛಾಯಾಗ್ರಾಹಕ ವಿ.ಕೆ.ಮೂರ್ತಿ ಹಾಗೂ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರನ್ನು ಸನ್ಮಾನಿಸಲಾಯಿತು.<br /> <br /> ವಿಶ್ವ ಛಾಯಾಗ್ರಾಹಕರ ದಿನದ ಅಂಗವಾಗಿ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಉಪ ಮುಖ್ಯಮಂತ್ರಿ ಆರ್.ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಕಣ್ಣಿಂದ ನೋಡಲು ಸಾಧ್ಯವಾಗುವ ಎಲ್ಲವನ್ನೂ ಹಿಡಿದಿಡುವ ಅಪರೂಪದ ಕಲೆ ಛಾಯಾಗ್ರಹಣ~ ಎಂದು ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.<br /> <br /> ಬೆಂಗಳೂರು ಜಿಲ್ಲಾ ಫೋಟೋ ಸ್ಟುಡಿಯೊ ಮಾಲೀಕರ ಸಂಘದ ವತಿಯಿಂದ ನಗರದ ಚಿತ್ರಕಲಾ ಪರಿಷತ್ನಲ್ಲಿ ಭಾನುವಾರ ನಡೆದ ವಿಶ್ವ ಛಾಯಾಗ್ರಾಹಕರ ದಿನ ಹಾಗೂ ಸಂಘದ 4ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ಮೇಯರ್ ಡಿ.ವೆಂಕಟೇಶಮೂರ್ತಿ ಮಾತನಾಡಿ, `ಸಂಘವು ಮಾಡುತ್ತಿರುವ ಕಾರ್ಯಕ್ಕೆ ಪಾಲಿಕೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು~ ಎಂದು ಭರವಸೆ ನೀಡಿದರು.<br /> <br /> ಛಾಯಾಗ್ರಾಹಕರಾದ ಸೀತಾರಾಮ ರೈ, ಕೆ.ಶಂಕರ ನಾರಾಯಣ, ಆನಂದ್, ಮುಕುಂದ್ ಮತ್ತು ಜೈರಾಮ್ ಅವರಿಗೆ `ಸ್ಟುಡಿಯೊ ರತ್ನ~ ಪ್ರಶಸ್ತಿ ನೀಡಲಾಯಿತು. ಹಿರಿಯ ಚಲನಚಿತ್ರ ಛಾಯಾಗ್ರಾಹಕ ವಿ.ಕೆ.ಮೂರ್ತಿ ಹಾಗೂ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರನ್ನು ಸನ್ಮಾನಿಸಲಾಯಿತು.<br /> <br /> ವಿಶ್ವ ಛಾಯಾಗ್ರಾಹಕರ ದಿನದ ಅಂಗವಾಗಿ ಅಪರೂಪದ ಛಾಯಾಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಉಪ ಮುಖ್ಯಮಂತ್ರಿ ಆರ್.ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>