<p><strong>ಮಂಡ್ಯ: </strong>ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೇ 30 ರಿಂದ ನಡೆಯುವ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಜಂಬು ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರಿಗೆ ಜಿಲ್ಲಾಡಳಿತ ಆಹ್ವಾನಿಸಿದೆ.<br /> <br /> ಬೆಂಗಳೂರಿನಲ್ಲಿ ಶಾಸಕ ಅಶ್ವತ್ಥನಾರಾಯಣ, ಎ.ಬಿ.ರಮೇಶ್ಬಾಬು, ಜಿಲ್ಲಾಧಿಕಾರಿ ಡಾ. ಜಾಫರ್ ಮತ್ತು ಅಧಿಕಾರಿಗಳಿದ್ದ ನಿಯೋಗ ಕಂಬಾರ ಅವರನ್ನು ಭೇಟಿ ಮಾಡಿ, ಸಾಂಪ್ರಾದಾಯಿಕವಾಗಿ ಆಹ್ವಾನಿಸಿತು.<br /> ಜಂಬೂಸವಾರಿ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭದಲಿ ಜಿಲ್ಲಾಡಳಿತದ ಪರವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ.<br /> <br /> ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳನ್ನು ಮಾಡಲಾಗಿದೆ. ಕಿರಂಗೂರು ಬನ್ನಿಮಂಟಪವನ್ನು ದುರಸ್ತಿ ಪಡಿಸಲಾಗಿದೆ. 30ರಂದು ಜಂಬೂಸವಾರಿ ಆರಂಭವಾಗಲಿದ್ದು, ಶ್ರೀರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇದೇ 30 ರಿಂದ ನಡೆಯುವ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಜಂಬು ಸವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರಿಗೆ ಜಿಲ್ಲಾಡಳಿತ ಆಹ್ವಾನಿಸಿದೆ.<br /> <br /> ಬೆಂಗಳೂರಿನಲ್ಲಿ ಶಾಸಕ ಅಶ್ವತ್ಥನಾರಾಯಣ, ಎ.ಬಿ.ರಮೇಶ್ಬಾಬು, ಜಿಲ್ಲಾಧಿಕಾರಿ ಡಾ. ಜಾಫರ್ ಮತ್ತು ಅಧಿಕಾರಿಗಳಿದ್ದ ನಿಯೋಗ ಕಂಬಾರ ಅವರನ್ನು ಭೇಟಿ ಮಾಡಿ, ಸಾಂಪ್ರಾದಾಯಿಕವಾಗಿ ಆಹ್ವಾನಿಸಿತು.<br /> ಜಂಬೂಸವಾರಿ ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭದಲಿ ಜಿಲ್ಲಾಡಳಿತದ ಪರವಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿಕೆ ತಿಳಿಸಿದೆ.<br /> <br /> ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳನ್ನು ಮಾಡಲಾಗಿದೆ. ಕಿರಂಗೂರು ಬನ್ನಿಮಂಟಪವನ್ನು ದುರಸ್ತಿ ಪಡಿಸಲಾಗಿದೆ. 30ರಂದು ಜಂಬೂಸವಾರಿ ಆರಂಭವಾಗಲಿದ್ದು, ಶ್ರೀರಂಗನಾಥ ಸ್ವಾಮಿ ದೇವಾಲಯದವರೆಗೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>