<p>ಬೆಳಗಾವಿ: ಇಸ್ಕಾನ್ ವತಿಯಿಂದ ಇದೇ 21 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಬೋಗಾರ್ವೇಸ್ದಿಂದ ಜಗನ್ನಾಥ ರಥಯಾತ್ರೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.<br /> <br /> ರಥಯಾತ್ರೆ ಅಂಗವಾಗಿ 21 ಹಾಗೂ 22 ರಂದು ಇಸ್ಕಾನ್ ದೇವಸ್ಥಾನ ಆವರಣದಲ್ಲಿ ವಿವಿಧ ಕಾರ್ಯಕ್ರಮ ನಡೆಯಲಿವೆ. ಲಕ್ಷಾಂತರ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೆಳಗಾವಿಯ ಇಸ್ಕಾನ್ನ ಅಧ್ಯಕ್ಷ ಭಕ್ತಿ ರಸಮಿತ್ರ ಸ್ವಾಮೀಜಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> `ರಥಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದ್ದು, ದೊಡ್ಡ ಸಂಖ್ಯೆಯಲ್ಲಿ ಎತ್ತಿನ ಬಂಡಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. 50 ಸಾವಿರ ಪ್ರಸಾದದ ಪ್ಯಾಕೇಟ್ಗಳನ್ನು ವಿತರಿಸಲಾಗುವುದು~ ಎಂದು ಅವರು ಹೇಳಿದರು.<br /> <br /> `ಲೋಕನಾಥ ಸ್ವಾಮೀಜಿ, ಚಂದ್ರಮೌಳಿ ಸ್ವಾಮೀಜಿ, ಭಕ್ತಿ ವಿಕಾಸ ಸ್ವಾಮೀಜಿ, ಭಕ್ತಿ ವಿನೋದ ಸ್ವಾಮೀಜಿ, ರಾಮ ಗೋವಿಂದ ಸ್ವಾಮೀಜಿ ಸೇರಿದಂತೆ ಹಲವರು ರಥಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಾವಿರಾರು ಜನರು ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> `ದೇಶದಲ್ಲಿ ಆರ್ಥಿಕ ಪ್ರಗತಿಯಾಗುತ್ತಿದೆ. ಅದರ ಜೊತೆಗೆ ಆಧ್ಯಾತ್ಮದ ವಿಕಾಸವೂ ಆಗಬೇಕು. ಇಲ್ಲದಿದ್ದರೆ ಸಮಾಜ ಅಸಮತೋಲನವಾಗುತ್ತದೆ. ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದು ಇಂದಿನ ಅವಶ್ಯಕತೆಯಾಗಿದೆ~ ಎಂದು ಅವರು ಹೇಳಿದರು.<br /> <br /> ರಥಯಾತ್ರೆ ಸಮಿತಿ ಅಧ್ಯಕ್ಷ ಎಂ.ಎಲ್. ಅಗರವಾಲ್, ಅನಂತ ಲಾಡ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಇಸ್ಕಾನ್ ವತಿಯಿಂದ ಇದೇ 21 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಬೋಗಾರ್ವೇಸ್ದಿಂದ ಜಗನ್ನಾಥ ರಥಯಾತ್ರೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.<br /> <br /> ರಥಯಾತ್ರೆ ಅಂಗವಾಗಿ 21 ಹಾಗೂ 22 ರಂದು ಇಸ್ಕಾನ್ ದೇವಸ್ಥಾನ ಆವರಣದಲ್ಲಿ ವಿವಿಧ ಕಾರ್ಯಕ್ರಮ ನಡೆಯಲಿವೆ. ಲಕ್ಷಾಂತರ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೆಳಗಾವಿಯ ಇಸ್ಕಾನ್ನ ಅಧ್ಯಕ್ಷ ಭಕ್ತಿ ರಸಮಿತ್ರ ಸ್ವಾಮೀಜಿ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.<br /> <br /> `ರಥಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದ್ದು, ದೊಡ್ಡ ಸಂಖ್ಯೆಯಲ್ಲಿ ಎತ್ತಿನ ಬಂಡಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. 50 ಸಾವಿರ ಪ್ರಸಾದದ ಪ್ಯಾಕೇಟ್ಗಳನ್ನು ವಿತರಿಸಲಾಗುವುದು~ ಎಂದು ಅವರು ಹೇಳಿದರು.<br /> <br /> `ಲೋಕನಾಥ ಸ್ವಾಮೀಜಿ, ಚಂದ್ರಮೌಳಿ ಸ್ವಾಮೀಜಿ, ಭಕ್ತಿ ವಿಕಾಸ ಸ್ವಾಮೀಜಿ, ಭಕ್ತಿ ವಿನೋದ ಸ್ವಾಮೀಜಿ, ರಾಮ ಗೋವಿಂದ ಸ್ವಾಮೀಜಿ ಸೇರಿದಂತೆ ಹಲವರು ರಥಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಾವಿರಾರು ಜನರು ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> `ದೇಶದಲ್ಲಿ ಆರ್ಥಿಕ ಪ್ರಗತಿಯಾಗುತ್ತಿದೆ. ಅದರ ಜೊತೆಗೆ ಆಧ್ಯಾತ್ಮದ ವಿಕಾಸವೂ ಆಗಬೇಕು. ಇಲ್ಲದಿದ್ದರೆ ಸಮಾಜ ಅಸಮತೋಲನವಾಗುತ್ತದೆ. ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದು ಇಂದಿನ ಅವಶ್ಯಕತೆಯಾಗಿದೆ~ ಎಂದು ಅವರು ಹೇಳಿದರು.<br /> <br /> ರಥಯಾತ್ರೆ ಸಮಿತಿ ಅಧ್ಯಕ್ಷ ಎಂ.ಎಲ್. ಅಗರವಾಲ್, ಅನಂತ ಲಾಡ್ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>