<p><strong>ಹೈದರಾಬಾದ್ (ಐಎಎನ್ಎಸ್):</strong> ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿ, ವಿಶೇಷ ಸಿಬಿಐ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದ ವೈ. ಎಸ್. ಜಗನ್ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕ ವಿಜಯ್ ಸಾಯಿ ರೆಡ್ಡಿ ಅವರಿಗೆ ಶುಕ್ರವಾರ ಆಂಧ್ರಪ್ರದೇಶ ಹೈಕೋರ್ಟ್ ಜಾಮೀನನ್ನು ರದ್ದುಗೊಳಿಸಿದೆ.<br /> <br /> ನ್ಯಾಯಮೂರ್ತಿ ಕೆ.ಸಿ. ಭಾನು ಗುರುವಾರ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನು ಆಲಿಸಿ ಶುಕ್ರವಾರಕ್ಕೆ ಆದೇಶವನ್ನು ಕಾಯ್ದಿರಿಸಿದ್ದರು. ಅಂತೆಯೇ ಶುಕ್ರವಾರ ವಿಜಯ್ ಸಾಯಿ ರೆಡ್ಡಿ ಅವರಿಗೆ ಸಿಬಿಐ ನ್ಯಾಯಾಲಯವು ನೀಡಿದ್ದ ಷರತ್ತುಬದ್ಧ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದರು.<br /> <br /> ವಿಶೇಷ ಸಿಬಿಐ ನ್ಯಾಯಾಲಯವು ನೀಡಿರುವ ಷರತ್ತುಬದ್ಧ ಜಾಮೀನಿನಿಂದ ಪ್ರಕರಣದ ಹೆಚ್ಚಿನ ವಿಚಾರಣೆಗೆ ತೊಡಕು ಉಂಟಾಗುತ್ತದೆ. ಇದರಿಂದಾಗಿ ಜಾಮೀನನ್ನು ರದ್ದುಗೊಳಿಸಬೇಕೆಂದು ಸಿಬಿಐ ಹೈಕೋರ್ಟ್ನಲ್ಲಿ ಮನವಿಯನ್ನು ಸಲ್ಲಿಸಿತ್ತು. <br /> <br /> ಪ್ರಕರಣದ ತನಿಖೆಯು ಅಂತಿಮಘಟ್ಟದಲ್ಲಿದ್ದು, ಸಿಬಿಐ ವೈಎಸ್ಆರ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮತ್ತು ಅವರ ಆಪ್ತ ವಿಜಯ್ ಸೇರಿದಂತೆ ಇತರರ ವಿರುದ್ಧ ಮೊದಲ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.<br /> ಪ್ರಕರಣದಲ್ಲಿ ವಿಜಯ್ ಎರಡನೇ ಆರೋಪಿಯಾಗಿದ್ದಾರೆ ಎಂದು ಸಿಬಿಐ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.<br /> <br /> ವಿಜಯ್ ಅವರನ್ನು ಸಿಬಿಐ ಅಧಿಕಾರಿಗಳು ಜ. 2ರಂದು ಬಂಧಿಸಿ, ಚಂಚಲಗೂಡ ಕಾರಾಗೃಹಕ್ಕೆ ಕಳುಹಿಸಿದ್ದರು. ಕಳೆದ ಮೂರು ತಿಂಗಳಿನಿಂದ ಬಂಧನದಲ್ಲಿದ್ದ ವಿಜಯ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಏ.13ರಂದು ಷರತ್ತುಬದ್ಧ ಜಾಮೀನು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್):</strong> ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿ, ವಿಶೇಷ ಸಿಬಿಐ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದ ವೈ. ಎಸ್. ಜಗನ್ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕ ವಿಜಯ್ ಸಾಯಿ ರೆಡ್ಡಿ ಅವರಿಗೆ ಶುಕ್ರವಾರ ಆಂಧ್ರಪ್ರದೇಶ ಹೈಕೋರ್ಟ್ ಜಾಮೀನನ್ನು ರದ್ದುಗೊಳಿಸಿದೆ.<br /> <br /> ನ್ಯಾಯಮೂರ್ತಿ ಕೆ.ಸಿ. ಭಾನು ಗುರುವಾರ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನು ಆಲಿಸಿ ಶುಕ್ರವಾರಕ್ಕೆ ಆದೇಶವನ್ನು ಕಾಯ್ದಿರಿಸಿದ್ದರು. ಅಂತೆಯೇ ಶುಕ್ರವಾರ ವಿಜಯ್ ಸಾಯಿ ರೆಡ್ಡಿ ಅವರಿಗೆ ಸಿಬಿಐ ನ್ಯಾಯಾಲಯವು ನೀಡಿದ್ದ ಷರತ್ತುಬದ್ಧ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿದರು.<br /> <br /> ವಿಶೇಷ ಸಿಬಿಐ ನ್ಯಾಯಾಲಯವು ನೀಡಿರುವ ಷರತ್ತುಬದ್ಧ ಜಾಮೀನಿನಿಂದ ಪ್ರಕರಣದ ಹೆಚ್ಚಿನ ವಿಚಾರಣೆಗೆ ತೊಡಕು ಉಂಟಾಗುತ್ತದೆ. ಇದರಿಂದಾಗಿ ಜಾಮೀನನ್ನು ರದ್ದುಗೊಳಿಸಬೇಕೆಂದು ಸಿಬಿಐ ಹೈಕೋರ್ಟ್ನಲ್ಲಿ ಮನವಿಯನ್ನು ಸಲ್ಲಿಸಿತ್ತು. <br /> <br /> ಪ್ರಕರಣದ ತನಿಖೆಯು ಅಂತಿಮಘಟ್ಟದಲ್ಲಿದ್ದು, ಸಿಬಿಐ ವೈಎಸ್ಆರ್ ಪಕ್ಷದ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ ಮತ್ತು ಅವರ ಆಪ್ತ ವಿಜಯ್ ಸೇರಿದಂತೆ ಇತರರ ವಿರುದ್ಧ ಮೊದಲ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.<br /> ಪ್ರಕರಣದಲ್ಲಿ ವಿಜಯ್ ಎರಡನೇ ಆರೋಪಿಯಾಗಿದ್ದಾರೆ ಎಂದು ಸಿಬಿಐ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.<br /> <br /> ವಿಜಯ್ ಅವರನ್ನು ಸಿಬಿಐ ಅಧಿಕಾರಿಗಳು ಜ. 2ರಂದು ಬಂಧಿಸಿ, ಚಂಚಲಗೂಡ ಕಾರಾಗೃಹಕ್ಕೆ ಕಳುಹಿಸಿದ್ದರು. ಕಳೆದ ಮೂರು ತಿಂಗಳಿನಿಂದ ಬಂಧನದಲ್ಲಿದ್ದ ವಿಜಯ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಏ.13ರಂದು ಷರತ್ತುಬದ್ಧ ಜಾಮೀನು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>