<p><strong>ಹೈದರಾಬಾದ್ (ಪಿಟಿಐ): </strong>ಅಕ್ರಮ ಆಸ್ತಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ (ಜಗನ್) ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 25ರವರೆಗೆ ವಿಸ್ತರಿಸಲಾಗಿದೆ.<br /> <br /> ಈ ಮಧ್ಯೆ ಸಿಬಿಐ, ಜಗನ್ ಮೇಲೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕೋರ್ಟ್ನ ಅನುಮತಿ ಕೋರಿದೆ.<br /> ಆಂಧ್ರಪ್ರದೇಶದ 18 ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಉಪಚುನಾವಣೆ ನಡೆಯಲಿದ್ದು, ಚುನಾವಣೆಯ ಹಿಂದಿನ ದಿನ ಕೋರ್ಟ್ ಈ ಆದೇಶ ನೀಡಿದೆ.<br /> <br /> ಈ ಉಪ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಜಗನ್ ಬಂಧನದ ವಿಚಾರವನ್ನು ಮುಂದಿಟ್ಟುಕೊಂಡು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಭಾಷಣ ಮಾಡುತ್ತಿದ್ದರು.<br /> <br /> <strong>ಸಿಬಿಐ ಅರ್ಜಿ: </strong>ಏತನ್ಮಧ್ಯೆ ಸಿಬಿಐ ಅಧಿಕಾರಿಗಳು ಜಗನ್ ಹಾಗೂ ಅವರ ಆರ್ಥಿಕ ಸಲಹೆಗಾರ ವಿ. ವಿಜಯಸಾಯಿ ರೆಡ್ಡಿ ಅವರನ್ನು ಮಂಪರು ಪರೀಕ್ಷೆ ಹಾಗೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ.<br /> <br /> ಅಕ್ರಮ ವ್ಯವಹಾರಗಳಿಂದ ಜಗನ್ಗೆ ಹೆಚ್ಚಿನ ಲಾಭವಾಗಿದೆ. ಆದರೆ, ಈ ಪ್ರಕರಣಗಳಲ್ಲಿ ವಿಜಯಸಾಯಿ ಸೂತ್ರಧಾರರಾಗಿದ್ದು, ಜಗನ್ಗೆ ಸಲಹೆ ನೀಡುತ್ತಿದ್ದುದು ವಿಚಾರಣೆಯ ಸಮಯದಲ್ಲಿ ಸಾಬೀತಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ): </strong>ಅಕ್ರಮ ಆಸ್ತಿ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ (ಜಗನ್) ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜೂನ್ 25ರವರೆಗೆ ವಿಸ್ತರಿಸಲಾಗಿದೆ.<br /> <br /> ಈ ಮಧ್ಯೆ ಸಿಬಿಐ, ಜಗನ್ ಮೇಲೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕೋರ್ಟ್ನ ಅನುಮತಿ ಕೋರಿದೆ.<br /> ಆಂಧ್ರಪ್ರದೇಶದ 18 ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಉಪಚುನಾವಣೆ ನಡೆಯಲಿದ್ದು, ಚುನಾವಣೆಯ ಹಿಂದಿನ ದಿನ ಕೋರ್ಟ್ ಈ ಆದೇಶ ನೀಡಿದೆ.<br /> <br /> ಈ ಉಪ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಜಗನ್ ಬಂಧನದ ವಿಚಾರವನ್ನು ಮುಂದಿಟ್ಟುಕೊಂಡು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರು ಭಾಷಣ ಮಾಡುತ್ತಿದ್ದರು.<br /> <br /> <strong>ಸಿಬಿಐ ಅರ್ಜಿ: </strong>ಏತನ್ಮಧ್ಯೆ ಸಿಬಿಐ ಅಧಿಕಾರಿಗಳು ಜಗನ್ ಹಾಗೂ ಅವರ ಆರ್ಥಿಕ ಸಲಹೆಗಾರ ವಿ. ವಿಜಯಸಾಯಿ ರೆಡ್ಡಿ ಅವರನ್ನು ಮಂಪರು ಪರೀಕ್ಷೆ ಹಾಗೂ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿಕೊಂಡಿದ್ದಾರೆ.<br /> <br /> ಅಕ್ರಮ ವ್ಯವಹಾರಗಳಿಂದ ಜಗನ್ಗೆ ಹೆಚ್ಚಿನ ಲಾಭವಾಗಿದೆ. ಆದರೆ, ಈ ಪ್ರಕರಣಗಳಲ್ಲಿ ವಿಜಯಸಾಯಿ ಸೂತ್ರಧಾರರಾಗಿದ್ದು, ಜಗನ್ಗೆ ಸಲಹೆ ನೀಡುತ್ತಿದ್ದುದು ವಿಚಾರಣೆಯ ಸಮಯದಲ್ಲಿ ಸಾಬೀತಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>