<p><strong>ಬೆಂಗಳೂರು:</strong> `ರಾಜ್ಯ ಸರ್ಕಾರ ಕಲೆ ಮತ್ತು ಸಂಸ್ಕೃತಿಗೆ ದೇಶದ ಇನ್ಯಾವ ರಾಜ್ಯಗಳು ನೀಡದಷ್ಟು ಪ್ರೋತ್ಸಾಹ ನೀಡುತ್ತಾ ಬಂದಿದೆ. ಆದರೆ, ರಾಜ್ಯದ ಜನಸಾಮಾನ್ಯರು ಕಲೆಗಳ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳುತ್ತಿಲ್ಲ~ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ವೈಜಯಂತಿ ಕಾಶಿ ವಿಷಾದಿಸಿದರು.</p>.<p>ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಬುಧವಾರ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮತ್ತು ಅಕಾಡೆಮಿ ಫಾರ್ ಮ್ಯೂಸಿಕ್ನ ಸಹಯೋಗದಲ್ಲಿ ನಡೆದ `ರಂಗ ತರಂಗ~ ರಾಷ್ಟ್ರೀಯ ನೃತ್ಯೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>`ಕಲೆಗಳ ಬಗ್ಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹವನ್ನು ಸದ್ಬಳಕೆ ಮಾಡಿಕೊಂಡು ಕಲೆಯ ಅಭಿವೃದ್ಧಿಗೆ ಎಲ್ಲಾ ಕಲಾವಿದರು ಮುಂದಾಗಬೇಕು. ಜನಸಾಮಾನ್ಯರು ಕಲೆಗಳ ಬೆಳವಣಿಗೆಯಲ್ಲಿ ಭಾಗಿಗಳಾಗಬೇಕು. ಆಗ ಮಾತ್ರ ಕಲೆಗಳ ಸಮಗ್ರ ಬೆಳವಣಿಗೆ ಸಾಧ್ಯ~ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಬಸವರಾಜು ಮಾತನಾಡಿ `ಪ್ರತಿಭೆ ಎಲ್ಲರಲ್ಲೂ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಪ್ರತಿಭೆ ಬೆಳಗುವುದು ಸಾಧ್ಯ. ರಾಜ್ಯದ ಸಂಸ್ಕೃತಿ ವಿಶಿಷ್ಟವಾದದ್ದು. ನಮ್ಮ ರಾಜ್ಯದಲ್ಲಿ ಎಲ್ಲಾ ಕಲೆಗಳನ್ನು ಕಾಣಲು ಸಾಧ್ಯವಿದೆ. ಕನ್ನಡ ನಾಡು ಕಲೆಗಳ ತವರೂರು~ ಎಂದರು.</p>.<p>ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಭಾಗ್ಯ ಮಾತನಾಡಿ `ಯುವಜನರನ್ನು ನೃತ್ಯ ಮತ್ತು ಸಂಗೀತ ಕಲೆಗಳ ಕಡೆಗೆ ಸೆಳೆಯುವ ಉದ್ದೇಶದಿಂದ ರಂಗ ತರಂಗ ರಾಷ್ಟ್ರೀಯ ನೃತ್ಯೋತ್ಸವವನ್ನು ಆಯೋಜಿಸಲಾಗಿದೆ~ ಎಂದರು.</p>.<p>ಉದ್ಘಾಟನಾ ಸಮಾರಂಭದ ನಂತರ `ನಾಟ್ಯ~ ನೃತ್ಯ ಸಂಸ್ಥೆಯ ಕಲಾವಿದರು `ಸಾರೆ ಜಹಾ ಸೇ ಅಚ್ಚಾ~ ನೃತ್ಯ ರೂಪಕ ಪ್ರದರ್ಶಿಸಿದರು. ಅರುಣಾ ಮೋಹನ್ ಮತ್ತು ತಂಡದಿಂದ ಒಡಿಸ್ಸಿ ನೃತ್ಯ ಮತ್ತು ರೇಖಾ ಹೆಗಡೆ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಮೂರು ದಿನಗಳ ನೃತ್ಯೋತ್ಸವ ಚೌಡಯ್ಯ ಸ್ಮಾರಕ ಭವನದಲ್ಲಿ ಶುಕ್ರವಾರದವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜ್ಯ ಸರ್ಕಾರ ಕಲೆ ಮತ್ತು ಸಂಸ್ಕೃತಿಗೆ ದೇಶದ ಇನ್ಯಾವ ರಾಜ್ಯಗಳು ನೀಡದಷ್ಟು ಪ್ರೋತ್ಸಾಹ ನೀಡುತ್ತಾ ಬಂದಿದೆ. ಆದರೆ, ರಾಜ್ಯದ ಜನಸಾಮಾನ್ಯರು ಕಲೆಗಳ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಳ್ಳುತ್ತಿಲ್ಲ~ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ವೈಜಯಂತಿ ಕಾಶಿ ವಿಷಾದಿಸಿದರು.</p>.<p>ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಬುಧವಾರ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮತ್ತು ಅಕಾಡೆಮಿ ಫಾರ್ ಮ್ಯೂಸಿಕ್ನ ಸಹಯೋಗದಲ್ಲಿ ನಡೆದ `ರಂಗ ತರಂಗ~ ರಾಷ್ಟ್ರೀಯ ನೃತ್ಯೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>`ಕಲೆಗಳ ಬಗ್ಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹವನ್ನು ಸದ್ಬಳಕೆ ಮಾಡಿಕೊಂಡು ಕಲೆಯ ಅಭಿವೃದ್ಧಿಗೆ ಎಲ್ಲಾ ಕಲಾವಿದರು ಮುಂದಾಗಬೇಕು. ಜನಸಾಮಾನ್ಯರು ಕಲೆಗಳ ಬೆಳವಣಿಗೆಯಲ್ಲಿ ಭಾಗಿಗಳಾಗಬೇಕು. ಆಗ ಮಾತ್ರ ಕಲೆಗಳ ಸಮಗ್ರ ಬೆಳವಣಿಗೆ ಸಾಧ್ಯ~ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಬಸವರಾಜು ಮಾತನಾಡಿ `ಪ್ರತಿಭೆ ಎಲ್ಲರಲ್ಲೂ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಪ್ರತಿಭೆ ಬೆಳಗುವುದು ಸಾಧ್ಯ. ರಾಜ್ಯದ ಸಂಸ್ಕೃತಿ ವಿಶಿಷ್ಟವಾದದ್ದು. ನಮ್ಮ ರಾಜ್ಯದಲ್ಲಿ ಎಲ್ಲಾ ಕಲೆಗಳನ್ನು ಕಾಣಲು ಸಾಧ್ಯವಿದೆ. ಕನ್ನಡ ನಾಡು ಕಲೆಗಳ ತವರೂರು~ ಎಂದರು.</p>.<p>ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಭಾಗ್ಯ ಮಾತನಾಡಿ `ಯುವಜನರನ್ನು ನೃತ್ಯ ಮತ್ತು ಸಂಗೀತ ಕಲೆಗಳ ಕಡೆಗೆ ಸೆಳೆಯುವ ಉದ್ದೇಶದಿಂದ ರಂಗ ತರಂಗ ರಾಷ್ಟ್ರೀಯ ನೃತ್ಯೋತ್ಸವವನ್ನು ಆಯೋಜಿಸಲಾಗಿದೆ~ ಎಂದರು.</p>.<p>ಉದ್ಘಾಟನಾ ಸಮಾರಂಭದ ನಂತರ `ನಾಟ್ಯ~ ನೃತ್ಯ ಸಂಸ್ಥೆಯ ಕಲಾವಿದರು `ಸಾರೆ ಜಹಾ ಸೇ ಅಚ್ಚಾ~ ನೃತ್ಯ ರೂಪಕ ಪ್ರದರ್ಶಿಸಿದರು. ಅರುಣಾ ಮೋಹನ್ ಮತ್ತು ತಂಡದಿಂದ ಒಡಿಸ್ಸಿ ನೃತ್ಯ ಮತ್ತು ರೇಖಾ ಹೆಗಡೆ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಮೂರು ದಿನಗಳ ನೃತ್ಯೋತ್ಸವ ಚೌಡಯ್ಯ ಸ್ಮಾರಕ ಭವನದಲ್ಲಿ ಶುಕ್ರವಾರದವರೆಗೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>