<p>ಮೈಸೂರು: ಸಾರ್ವಜನಿಕರು ನೀಡಿರುವ ದೂರು ಗಳಲ್ಲಿ ಬಾಕಿಯಿರುವುದನ್ನು ಒಂದು ವಾರದಲ್ಲಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎಸ್. ವಸ್ತ್ರದ್ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ. <br /> <br /> ಗುರುವಾರ ತಮ್ಮ ಕಚೇರಿಯಲ್ಲಿ ನಡೆಸಿದ ಫೋನ್-ಇನ್ ನೇರ ಕಾರ್ಯಕ್ರಮದಲ್ಲಿ ಸಾರ್ವ ಜನಿಕರ ದೂರು ಆಲಿಸಿದ ಅವರು, ಬಾಕಿಯಿರುವ ಹಳೆಯ ದೂರುಗಳ ಪರಿಶೀಲನೆಯನ್ನೂ ನಡೆಸಿದರು. <br /> <br /> `ಜಿಲ್ಲಾ ಪಂಚಾಯ್ತಿಯಲ್ಲಿ ಬಾಕಿ ದೂರುಗಳ ಸಂಖ್ಯೆಯು ಎರಡಂಕಿಯಿಂದ ಒಂದಂಕಿಗೆ ಇಳಿದಿರು ವುದು ಉತ್ತಮ ಬೆಳವಣಿಗೆ. ಇದು ನಿರಂತರವಾಗಿ ನಡೆದು ಎಲ್ಲ ಸಮಸ್ಯೆಗಳಿಗೂ ಸ್ಪಂದಿಸಬೇಕು~ ಎಂದು ಹೇಳಿದರು. <br /> <br /> <strong>ಬೆರಳೆಣಿಕೆಯಷ್ಟು ಕರೆಗಳು: </strong>ಕೆಲವು ಇಲಾಖೆಗಳ ಅಧಿಕಾರಿಗಳು ಮತ್ತು ಪ್ರತಿನಿಧಿಗಳ ಗೈರು ಹಾಜರಿ ಯಲ್ಲಿಯೇ ನಡೆದ ಕಾರ್ಯಕ್ರಮದಲ್ಲಿ ಬಂದ ಕೆಲವೇ ಕರೆಗಳಿಗೆ ಜಿಲ್ಲಾಧಿಕಾರಿಗಳು ಉತ್ತರಿಸಿದರು. <br /> <br /> ಕೆ.ಆರ್. ನಗರದಿಂದ ಕರೆ ಮಾಡಿದ್ದ ವ್ಯಕ್ತಿ ಯೊಬ್ಬರು, `ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪುರಸಭೆಯ ಆಸ್ತಿಯನ್ನು ಒತ್ತುವರಿ ಮಾಡಲಾಗಿದೆ. ಒಂದು ತಿಂಗಳ ಹಿಂದೆ ಪುರಸಭೆಗೆ ದೂರು ನೀಡಲಾಗಿತ್ತು. ಆ ತಿಂಗಳ ಫೋನ್ ಇನ್ ಕಾರ್ಯಕ್ರಮದಲ್ಲಿ ನಿಮ್ಮ ಗಮನಕ್ಕೂ ತರಲಾಗಿತ್ತು. ಆದರೆ ಇಲ್ಲಿಯ ಕಾರ್ಯನಿರ್ವಹ ಣಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಈಗ ಪುರಸಭೆ ಜಾಗದಲ್ಲಿಯೇ ಮನೆಯನ್ನು ಕಟ್ಟಿದ್ದಾರೆ. ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ~ ಎಂದು ದೂರಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ವಸ್ತ್ರದ್, `ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ವರಿಗೆ ಸೂಚಿಸಲಾಗುವುದು~ ಎಂದು ಭರವಸೆ ನೀಡಿದರು. <br /> <br /> ಹುಣಸೂರಿನಿಂದ ಕರೆ ಮಾಡಿದ ಸಂಜಯ್ ಎಂಬುವವರು. `ಲಕ್ಷ್ಮಣತೀರ್ಥ ನದಿಗೆ ಕೊಳಚೆ ನೀರು ಬಿಡಲಾಗುತ್ತಿದ್ದು ಈ ಬಗ್ಗೆ ಹಲವು ಬಾರಿ ದೂರು ನೀಡಲಾಗಿದೆ~ ಎಂದು ಪ್ರಶ್ನಿಸಿದರು. <br /> <br /> ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು, `ನದಿಗೆ ಕೊಳಚೆ ನೀರು ಬರದಂತೆ ತಡೆಯುವ ಕಾಮಗಾರಿ ಆರಂಭವಾಗಿದೆ. ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ನದಿ ಸಮೀಪದ ಸರ್ಕಾರಿ ಜಾಗ ನೀಡಲಾಗುತ್ತಿದೆ. ಕೆಲವೇ ಸಮಯದಲ್ಲಿ ಸಮಸ್ಯೆಗೆ ಪರಿಹಾರ ಸಿಗುತ್ತದೆ~ ಎಂದು ಭರವಸೆ ನೀಡಿದರು. <br /> <br /> ಹುಣಸೂರಿನಿಂದ ಫೋನಾಯಿಸಿದ ಸುಧಾ ಎಂಬುವವರು, `ನಮ್ಮ ಮನೆಯಲ್ಲಿ ಜನವರಿ 9ರಂದು ಕಳ್ಳತನವಾಗಿದೆ. ದೂರು ನೀಡಿದ್ದೇವೆ. ದಯವಿಟ್ಟು ಹುಡುಕಿಕೊಡಿ~ ಎಂದು ಅಳುತ್ತಲೇ ಮನವಿ ಮಾಡಿದರು. <br /> `ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗುವುದು~ ಎಂದು ಜಿಲ್ಲಾಧಿಕಾರಿಗಳು ಉತ್ತರಿಸಿದಾಗ, ಪೊಲೀಸ್ ಇಲಾಖೆಯ ಅಧಿಕಾರಿ ಗಳು ಯಾರೂ ಸಭೆಯಲ್ಲಿ ಇರಲಿಲ್ಲ. ಆದರೆ ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಿದ ಹೆಚ್ಚುವರಿ ಎಸ್ಪಿ ವೆಂಕಟಸ್ವಾಮಿ ಅವರಿಗೆ ಈ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸುವಂತೆ ತಿಳಿಸಿದರು. <br /> <br /> ಚಾಮುಂಡಿ ವಿಹಾರ ಬಡಾವಣೆಯ ಕುರಿತ ಲಿಖಿತ ದೂರಿನ ಪರಿಶೀಲನೆ ಸಂದರ್ಭದಲ್ಲಿಯೂ ಆ ಇಲಾಖೆಯ ಅಧಿಕಾರಿಗಳು ಹಾಜರಿರಲಿಲ್ಲ. ಅರಣ್ಯ ಇಲಾಖೆಗೆ ಸಂಬಂಧಪಟ್ಟ ದೂರಿಗೂ ಯಾರೂ ಇರಲಿಲ್ಲ. ಇದರಿಂದ ಬೇಸರಗೊಂಡ ಜಿಲ್ಲಾಧಿಕಾರಿಗಳು, `ಅರಣ್ಯ ಇಲಾಖೆಗೆ ಈ ಬಗ್ಗೆ ನೋಟಿಸ್ ನೀಡಲಾಗಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು. <br /> <br /> ನಂತರ ಹಲವಾರು ದೂರುದಾರರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಸಾರ್ವಜನಿಕರು ನೀಡಿರುವ ದೂರು ಗಳಲ್ಲಿ ಬಾಕಿಯಿರುವುದನ್ನು ಒಂದು ವಾರದಲ್ಲಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎಸ್. ವಸ್ತ್ರದ್ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ. <br /> <br /> ಗುರುವಾರ ತಮ್ಮ ಕಚೇರಿಯಲ್ಲಿ ನಡೆಸಿದ ಫೋನ್-ಇನ್ ನೇರ ಕಾರ್ಯಕ್ರಮದಲ್ಲಿ ಸಾರ್ವ ಜನಿಕರ ದೂರು ಆಲಿಸಿದ ಅವರು, ಬಾಕಿಯಿರುವ ಹಳೆಯ ದೂರುಗಳ ಪರಿಶೀಲನೆಯನ್ನೂ ನಡೆಸಿದರು. <br /> <br /> `ಜಿಲ್ಲಾ ಪಂಚಾಯ್ತಿಯಲ್ಲಿ ಬಾಕಿ ದೂರುಗಳ ಸಂಖ್ಯೆಯು ಎರಡಂಕಿಯಿಂದ ಒಂದಂಕಿಗೆ ಇಳಿದಿರು ವುದು ಉತ್ತಮ ಬೆಳವಣಿಗೆ. ಇದು ನಿರಂತರವಾಗಿ ನಡೆದು ಎಲ್ಲ ಸಮಸ್ಯೆಗಳಿಗೂ ಸ್ಪಂದಿಸಬೇಕು~ ಎಂದು ಹೇಳಿದರು. <br /> <br /> <strong>ಬೆರಳೆಣಿಕೆಯಷ್ಟು ಕರೆಗಳು: </strong>ಕೆಲವು ಇಲಾಖೆಗಳ ಅಧಿಕಾರಿಗಳು ಮತ್ತು ಪ್ರತಿನಿಧಿಗಳ ಗೈರು ಹಾಜರಿ ಯಲ್ಲಿಯೇ ನಡೆದ ಕಾರ್ಯಕ್ರಮದಲ್ಲಿ ಬಂದ ಕೆಲವೇ ಕರೆಗಳಿಗೆ ಜಿಲ್ಲಾಧಿಕಾರಿಗಳು ಉತ್ತರಿಸಿದರು. <br /> <br /> ಕೆ.ಆರ್. ನಗರದಿಂದ ಕರೆ ಮಾಡಿದ್ದ ವ್ಯಕ್ತಿ ಯೊಬ್ಬರು, `ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪುರಸಭೆಯ ಆಸ್ತಿಯನ್ನು ಒತ್ತುವರಿ ಮಾಡಲಾಗಿದೆ. ಒಂದು ತಿಂಗಳ ಹಿಂದೆ ಪುರಸಭೆಗೆ ದೂರು ನೀಡಲಾಗಿತ್ತು. ಆ ತಿಂಗಳ ಫೋನ್ ಇನ್ ಕಾರ್ಯಕ್ರಮದಲ್ಲಿ ನಿಮ್ಮ ಗಮನಕ್ಕೂ ತರಲಾಗಿತ್ತು. ಆದರೆ ಇಲ್ಲಿಯ ಕಾರ್ಯನಿರ್ವಹ ಣಾಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಈಗ ಪುರಸಭೆ ಜಾಗದಲ್ಲಿಯೇ ಮನೆಯನ್ನು ಕಟ್ಟಿದ್ದಾರೆ. ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ~ ಎಂದು ದೂರಿದರು.<br /> <br /> ಇದಕ್ಕೆ ಪ್ರತಿಕ್ರಿಯಿಸಿದ ವಸ್ತ್ರದ್, `ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ವರಿಗೆ ಸೂಚಿಸಲಾಗುವುದು~ ಎಂದು ಭರವಸೆ ನೀಡಿದರು. <br /> <br /> ಹುಣಸೂರಿನಿಂದ ಕರೆ ಮಾಡಿದ ಸಂಜಯ್ ಎಂಬುವವರು. `ಲಕ್ಷ್ಮಣತೀರ್ಥ ನದಿಗೆ ಕೊಳಚೆ ನೀರು ಬಿಡಲಾಗುತ್ತಿದ್ದು ಈ ಬಗ್ಗೆ ಹಲವು ಬಾರಿ ದೂರು ನೀಡಲಾಗಿದೆ~ ಎಂದು ಪ್ರಶ್ನಿಸಿದರು. <br /> <br /> ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು, `ನದಿಗೆ ಕೊಳಚೆ ನೀರು ಬರದಂತೆ ತಡೆಯುವ ಕಾಮಗಾರಿ ಆರಂಭವಾಗಿದೆ. ಕೊಳಚೆ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ನದಿ ಸಮೀಪದ ಸರ್ಕಾರಿ ಜಾಗ ನೀಡಲಾಗುತ್ತಿದೆ. ಕೆಲವೇ ಸಮಯದಲ್ಲಿ ಸಮಸ್ಯೆಗೆ ಪರಿಹಾರ ಸಿಗುತ್ತದೆ~ ಎಂದು ಭರವಸೆ ನೀಡಿದರು. <br /> <br /> ಹುಣಸೂರಿನಿಂದ ಫೋನಾಯಿಸಿದ ಸುಧಾ ಎಂಬುವವರು, `ನಮ್ಮ ಮನೆಯಲ್ಲಿ ಜನವರಿ 9ರಂದು ಕಳ್ಳತನವಾಗಿದೆ. ದೂರು ನೀಡಿದ್ದೇವೆ. ದಯವಿಟ್ಟು ಹುಡುಕಿಕೊಡಿ~ ಎಂದು ಅಳುತ್ತಲೇ ಮನವಿ ಮಾಡಿದರು. <br /> `ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗುವುದು~ ಎಂದು ಜಿಲ್ಲಾಧಿಕಾರಿಗಳು ಉತ್ತರಿಸಿದಾಗ, ಪೊಲೀಸ್ ಇಲಾಖೆಯ ಅಧಿಕಾರಿ ಗಳು ಯಾರೂ ಸಭೆಯಲ್ಲಿ ಇರಲಿಲ್ಲ. ಆದರೆ ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಿದ ಹೆಚ್ಚುವರಿ ಎಸ್ಪಿ ವೆಂಕಟಸ್ವಾಮಿ ಅವರಿಗೆ ಈ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸುವಂತೆ ತಿಳಿಸಿದರು. <br /> <br /> ಚಾಮುಂಡಿ ವಿಹಾರ ಬಡಾವಣೆಯ ಕುರಿತ ಲಿಖಿತ ದೂರಿನ ಪರಿಶೀಲನೆ ಸಂದರ್ಭದಲ್ಲಿಯೂ ಆ ಇಲಾಖೆಯ ಅಧಿಕಾರಿಗಳು ಹಾಜರಿರಲಿಲ್ಲ. ಅರಣ್ಯ ಇಲಾಖೆಗೆ ಸಂಬಂಧಪಟ್ಟ ದೂರಿಗೂ ಯಾರೂ ಇರಲಿಲ್ಲ. ಇದರಿಂದ ಬೇಸರಗೊಂಡ ಜಿಲ್ಲಾಧಿಕಾರಿಗಳು, `ಅರಣ್ಯ ಇಲಾಖೆಗೆ ಈ ಬಗ್ಗೆ ನೋಟಿಸ್ ನೀಡಲಾಗಿದ್ದರೂ ಪ್ರತಿಕ್ರಿಯೆ ಸಿಕ್ಕಿಲ್ಲ~ ಎಂದು ಅಸಮಾಧಾನ ವ್ಯಕ್ತಪಡಿಸಿದರು. <br /> <br /> ನಂತರ ಹಲವಾರು ದೂರುದಾರರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>