<p><strong>ನವದೆಹಲಿ: </strong>ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ತೊರೆದಿರುವ ಎಲ್ಲ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರಲು ಹಿರಿಯ ಬಿಜೆಪಿ ನಾಯಕರು ಒಲವು ತೋರಿದ್ದಾರೆ. ದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಮುಖ್ಯಮಂತ್ರಿಗಳ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಅವರೂ ಸೇರಿದಂತೆ ಪಕ್ಷ ಬಿಟ್ಟಿರುವ ಎಲ್ಲ ನಾಯಕರನ್ನು ಮರಳಿ ಕರೆತರುವ ಕುರಿತು ಚರ್ಚಿಸಲಾಯಿತು.<br /> <br /> ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಪಕ್ಷ ಬಲಪಡಿಸುವ ಉದ್ದೇಶದಿಂದ ಹೊರಗಡೆ ಹೋಗಿರುವ ನಾಯಕರನ್ನು ಒಗ್ಗೂಡಿಸುವ ಅಗತ್ಯವಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು. ಆದರೆ, ಅಂತಿಮ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರನ್ನು ಮರಳಿ ಕರೆತರುವ ಕುರಿತು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳು ವಿವರಿಸಿವೆ.<br /> <br /> ಯಡಿಯೂರಪ್ಪನವರ ಮರು ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಜನವರಿ 14ರ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಅವರು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ತೊರೆದಿರುವ ಎಲ್ಲ ನಾಯಕರನ್ನು ಮರಳಿ ಪಕ್ಷಕ್ಕೆ ಕರೆತರಲು ಹಿರಿಯ ಬಿಜೆಪಿ ನಾಯಕರು ಒಲವು ತೋರಿದ್ದಾರೆ. ದೆಹಲಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಮುಖ್ಯಮಂತ್ರಿಗಳ ಸಭೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಅವರೂ ಸೇರಿದಂತೆ ಪಕ್ಷ ಬಿಟ್ಟಿರುವ ಎಲ್ಲ ನಾಯಕರನ್ನು ಮರಳಿ ಕರೆತರುವ ಕುರಿತು ಚರ್ಚಿಸಲಾಯಿತು.<br /> <br /> ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಪಕ್ಷ ಬಲಪಡಿಸುವ ಉದ್ದೇಶದಿಂದ ಹೊರಗಡೆ ಹೋಗಿರುವ ನಾಯಕರನ್ನು ಒಗ್ಗೂಡಿಸುವ ಅಗತ್ಯವಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು. ಆದರೆ, ಅಂತಿಮ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರನ್ನು ಮರಳಿ ಕರೆತರುವ ಕುರಿತು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮೂಲಗಳು ವಿವರಿಸಿವೆ.<br /> <br /> ಯಡಿಯೂರಪ್ಪನವರ ಮರು ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಜನವರಿ 14ರ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವಡೇಕರ್ ಅವರು ಸಂಜೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>