<p><strong>ಶಿವಮೊಗ್ಗ:</strong> ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಭಾನುವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಕಾರಿಗೆ ಪ್ರವಾಸಿ ಮಂದಿರದ ಬಳಿ ಅಡ್ಡ ಹಾಕಲು ಯತ್ನಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.<br /> <br /> ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವರನ್ನು ಆಹ್ವಾನಿಸಲಿಲ್ಲ. ಹಾಗೆಯೇ, ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಹೈಜಾಕ್ ಮಾಡುವ ಮೂಲಕ ಕೀಳುದರ್ಜೆಯ ರಾಜಕಾರಣ ಮಾಡುತ್ತಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲೆಯ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ; ಕೊಳೆಗೇರಿ ಪ್ರದೇಶಗಳ ಜನರಿಗೆ ಹಕ್ಕುಪತ್ರ ವಿತರಿಸುತ್ತಿಲ್ಲ. ಪಾರಂಪರಿಕ ಅರಣ್ಯವಾಸಿಗಳ ಹಕ್ಕು ಮಾನ್ಯತಾ ಕಾಯ್ದೆಯಡಿ ಅರಣ್ಯವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮುಖಂಡರು ದೂರಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಬಿ.ಎ. ರಮೇಶ್ ಹೆಗ್ಡೆ, ರುದ್ರೇಶ್, ದೇವೇಂದ್ರಪ್ಪ,ರವಿಕುಮಾರ್ ಮತ್ತಿತರ ಮುಖಂಡರು ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಭಾನುವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಕಾರಿಗೆ ಪ್ರವಾಸಿ ಮಂದಿರದ ಬಳಿ ಅಡ್ಡ ಹಾಕಲು ಯತ್ನಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.<br /> <br /> ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವರನ್ನು ಆಹ್ವಾನಿಸಲಿಲ್ಲ. ಹಾಗೆಯೇ, ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಹೈಜಾಕ್ ಮಾಡುವ ಮೂಲಕ ಕೀಳುದರ್ಜೆಯ ರಾಜಕಾರಣ ಮಾಡುತ್ತಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲೆಯ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ; ಕೊಳೆಗೇರಿ ಪ್ರದೇಶಗಳ ಜನರಿಗೆ ಹಕ್ಕುಪತ್ರ ವಿತರಿಸುತ್ತಿಲ್ಲ. ಪಾರಂಪರಿಕ ಅರಣ್ಯವಾಸಿಗಳ ಹಕ್ಕು ಮಾನ್ಯತಾ ಕಾಯ್ದೆಯಡಿ ಅರಣ್ಯವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಮುಖಂಡರು ದೂರಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಬಿ.ಎ. ರಮೇಶ್ ಹೆಗ್ಡೆ, ರುದ್ರೇಶ್, ದೇವೇಂದ್ರಪ್ಪ,ರವಿಕುಮಾರ್ ಮತ್ತಿತರ ಮುಖಂಡರು ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>