<p><strong>ಬೆಂಗಳೂರು:</strong> `ಇಂದಿನ ಪರಿಸರ ಮಾಲಿನ್ಯಕ್ಕೆ ಬಹತೇಕ ಹೆಚ್ಚುತ್ತಿರುವ ಜನಸಂಖ್ಯೆಯೇ ಕಾರಣವಾಗಿದೆ~ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಎಸ್. ಸದಾಶಿವಯ್ಯ ಅವರು ಅಭಿಪ್ರಾಯಪಟ್ಟರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ಕರ್ನಾಟಕ ಕ್ಯಾನ್ಸರ್ ಸೊಸೈಟಿಯು ಶುಕ್ರವಾರ ಆಯೋಜಿಸಿದ್ದ `ವಿಶ್ವ ಜನಸಂಖ್ಯಾ ದಿನಾಚರಣೆ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಇಂದು ವಾಯು ಮಾಲಿನ್ಯ ಉಂಟಾಗಿರುವುದು ಜನಸಂಖ್ಯೆಯ ಪ್ರಮಾಣ ಹೆಚ್ಚಾಗಿರುವುದರಿಂದ. ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಅದನ್ನು ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಕೈಗಾರಿಕೀಕರಣ ಹೆಚ್ಚಾಗಿದೆ. ನೀರಿನ ಮೂಲಗಳಲ್ಲಿ ಗಣನೀಯ ಪ್ರಮಾಣದ ವ್ಯತ್ಯಾಸ ಕಂಡುಬಂದಿದೆ~ ಎಂದರು.<br /> <br /> `ಭೂಮಿ ಇರುವಷ್ಟೇ ಇದೆ. ಸಂಪನ್ಮೂಲಗಳಲ್ಲಿ ಹೆಚ್ಚಳವಾಗಿಲ್ಲ. ಆದರೆ, ಅದನ್ನು ಬಳಸುವವರ ಸಂಖ್ಯೆ ಮಾತ್ರ ಹೆಚ್ಚಾಗಿದೆ. ಹಿಂದೆ ನಾನು ಬೆಂಗಳೂರಿನಲ್ಲಿ ಓದುತ್ತಿದ್ದಾಗ ನಗರದ ಜನಸಂಖ್ಯೆ 1 ಲಕ್ಷ ಮಾತ್ರವಿತ್ತು. ಆದರೆ, ಇಂದು ಹೆಚ್ಚಾಗಿದೆ. ಇದರಿಂದ ಜನಸಂಖ್ಯಾ ನಿಯಂತ್ರಣ ನಮ್ಮ ಮೊದಲ ಆದ್ಯತೆಯಾಗಬೇಕು~ ಎಂದು ಹೇಳಿದರು.<br /> <br /> `ನಮ್ಮ ದೇಶ ವಾಯುಮಾಲಿನ್ಯದಲ್ಲಿ 6ನೇ ಸ್ಥಾನದಲ್ಲಿದೆ. ಪರಿಸರ ರಕ್ಷಣೆ ಮತ್ತು ಜನಸಂಖ್ಯಾ ನಿಯಂತ್ರಣ ಇಂದಿನ ಅವಶ್ಯಕತೆಯಾಗಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಶಿಕ್ಷಿತ ಯುವ ಜನತೆಯಿರುವ ದೇಶ ನಮ್ಮದಾಗಿದೆ. ಇದನ್ನು ಬಳಕೆ ಮಾಡಬೇಕು~ ಎಂದರು.<br /> <br /> ಸ್ತ್ರೀರೋಗ ಹಾಗೂ ಲೈಂಗಿಕ ತಜ್ಞರಾದ ಡಾ.ಪದ್ಮಿನಿ ಪ್ರಸಾದ್ ಮಾತನಾಡಿ, `ಜನಸಂಖ್ಯಾ ಸ್ಫೋಟದಿಂದ ರಾಜಕೀಯ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿಯಬೇಕಾಗುತ್ತದೆ. ಜನಸಂಖ್ಯೆ ಸಮಸ್ಯೆಯಾಗುವ ಮೊದಲು ಅದನ್ನು ಪರಿಹರಿಸಿಕೊಳ್ಳಬೇಕು~ ಎಂದು ಹೇಳಿದರು.<br /> <br /> `ಎಲ್ಲರಿಗೂ ಆರೋಗ್ಯ ಸಂಬಂಧಿ ಸೌಲಭ್ಯಗಳು ದೊರೆಯುವಂತಾಗಬೇಕು. ಸ್ತ್ರೀಯರು ಹೆರಿಗೆ ವೇಳೆಯಲ್ಲಿ ಸಾಯುವುದು ಇಂದು ಸಾಮಾನ್ಯವಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಅವರಿಗೆ ಒಳ್ಳೆಯ ಆರೋಗ್ಯ ಸೌಲಭ್ಯ ಮತ್ತು ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು~ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟರ ರಾಜ್ಯ ಶಾಖೆಯ ಅಧ್ಯಕ್ಷ ಡಾ.ಎಸ್.ಬಿ.ಕುಲಕರ್ಣಿ, ಎಫ್ಪಿಎ ಇಂಡಿಯಾ ಬೆಂಗಳೂರು ಶಾಖೆ ಅಧ್ಯಕ್ಷೆ ಮಧುರಾ ಅಶೋಕ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಇಂದಿನ ಪರಿಸರ ಮಾಲಿನ್ಯಕ್ಕೆ ಬಹತೇಕ ಹೆಚ್ಚುತ್ತಿರುವ ಜನಸಂಖ್ಯೆಯೇ ಕಾರಣವಾಗಿದೆ~ ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಎ.ಎಸ್. ಸದಾಶಿವಯ್ಯ ಅವರು ಅಭಿಪ್ರಾಯಪಟ್ಟರು.<br /> <br /> ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮತ್ತು ಕರ್ನಾಟಕ ಕ್ಯಾನ್ಸರ್ ಸೊಸೈಟಿಯು ಶುಕ್ರವಾರ ಆಯೋಜಿಸಿದ್ದ `ವಿಶ್ವ ಜನಸಂಖ್ಯಾ ದಿನಾಚರಣೆ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> `ಇಂದು ವಾಯು ಮಾಲಿನ್ಯ ಉಂಟಾಗಿರುವುದು ಜನಸಂಖ್ಯೆಯ ಪ್ರಮಾಣ ಹೆಚ್ಚಾಗಿರುವುದರಿಂದ. ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಅದನ್ನು ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಕೈಗಾರಿಕೀಕರಣ ಹೆಚ್ಚಾಗಿದೆ. ನೀರಿನ ಮೂಲಗಳಲ್ಲಿ ಗಣನೀಯ ಪ್ರಮಾಣದ ವ್ಯತ್ಯಾಸ ಕಂಡುಬಂದಿದೆ~ ಎಂದರು.<br /> <br /> `ಭೂಮಿ ಇರುವಷ್ಟೇ ಇದೆ. ಸಂಪನ್ಮೂಲಗಳಲ್ಲಿ ಹೆಚ್ಚಳವಾಗಿಲ್ಲ. ಆದರೆ, ಅದನ್ನು ಬಳಸುವವರ ಸಂಖ್ಯೆ ಮಾತ್ರ ಹೆಚ್ಚಾಗಿದೆ. ಹಿಂದೆ ನಾನು ಬೆಂಗಳೂರಿನಲ್ಲಿ ಓದುತ್ತಿದ್ದಾಗ ನಗರದ ಜನಸಂಖ್ಯೆ 1 ಲಕ್ಷ ಮಾತ್ರವಿತ್ತು. ಆದರೆ, ಇಂದು ಹೆಚ್ಚಾಗಿದೆ. ಇದರಿಂದ ಜನಸಂಖ್ಯಾ ನಿಯಂತ್ರಣ ನಮ್ಮ ಮೊದಲ ಆದ್ಯತೆಯಾಗಬೇಕು~ ಎಂದು ಹೇಳಿದರು.<br /> <br /> `ನಮ್ಮ ದೇಶ ವಾಯುಮಾಲಿನ್ಯದಲ್ಲಿ 6ನೇ ಸ್ಥಾನದಲ್ಲಿದೆ. ಪರಿಸರ ರಕ್ಷಣೆ ಮತ್ತು ಜನಸಂಖ್ಯಾ ನಿಯಂತ್ರಣ ಇಂದಿನ ಅವಶ್ಯಕತೆಯಾಗಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಶಿಕ್ಷಿತ ಯುವ ಜನತೆಯಿರುವ ದೇಶ ನಮ್ಮದಾಗಿದೆ. ಇದನ್ನು ಬಳಕೆ ಮಾಡಬೇಕು~ ಎಂದರು.<br /> <br /> ಸ್ತ್ರೀರೋಗ ಹಾಗೂ ಲೈಂಗಿಕ ತಜ್ಞರಾದ ಡಾ.ಪದ್ಮಿನಿ ಪ್ರಸಾದ್ ಮಾತನಾಡಿ, `ಜನಸಂಖ್ಯಾ ಸ್ಫೋಟದಿಂದ ರಾಜಕೀಯ, ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿಯಬೇಕಾಗುತ್ತದೆ. ಜನಸಂಖ್ಯೆ ಸಮಸ್ಯೆಯಾಗುವ ಮೊದಲು ಅದನ್ನು ಪರಿಹರಿಸಿಕೊಳ್ಳಬೇಕು~ ಎಂದು ಹೇಳಿದರು.<br /> <br /> `ಎಲ್ಲರಿಗೂ ಆರೋಗ್ಯ ಸಂಬಂಧಿ ಸೌಲಭ್ಯಗಳು ದೊರೆಯುವಂತಾಗಬೇಕು. ಸ್ತ್ರೀಯರು ಹೆರಿಗೆ ವೇಳೆಯಲ್ಲಿ ಸಾಯುವುದು ಇಂದು ಸಾಮಾನ್ಯವಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಅವರಿಗೆ ಒಳ್ಳೆಯ ಆರೋಗ್ಯ ಸೌಲಭ್ಯ ಮತ್ತು ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು~ ಎಂದು ಹೇಳಿದರು.<br /> <br /> ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟರ ರಾಜ್ಯ ಶಾಖೆಯ ಅಧ್ಯಕ್ಷ ಡಾ.ಎಸ್.ಬಿ.ಕುಲಕರ್ಣಿ, ಎಫ್ಪಿಎ ಇಂಡಿಯಾ ಬೆಂಗಳೂರು ಶಾಖೆ ಅಧ್ಯಕ್ಷೆ ಮಧುರಾ ಅಶೋಕ್ ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>